ವಿಜಯಪುರ ಜಿಲ್ಲೆಯನ್ನು ಬರ ಘೋಷಣೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಹಾಗೂ ರೈತರು ಹಾಗೂ ಸಾರ್ವಜನಿಕರಿಗೆ ಅಗತ್ಯ ಪರಿಹಾರ ಮತ್ತು ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ಮನವಿ ಸಲ್ಲಿಸಿ ಆಗ್ರಹಪಡಿಸಲಾಯಿತು.
ವಿಜಯಪುರ ಜಿಲ್ಲೆಯಾದ್ಯಂತ ಪ್ರಸಕ್ತ ವರ್ಷದಲ್ಲಿ ಮಳೆಯ ಕೊರತೆ ಹಾಗೂ ಅಸಮರ್ಪಕ ಮಳೆಯ ಪರಿಣಾಮವಾಗಿ ಕೃಷಿ ಚಟುವಟಿಕೆಗಳು ತೀವ್ರವಾಗಿ ಹದಗೆಟ್ಟಿವೆ. ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ರೈತರು ಮಳೆಯನ್ನೇ ಅವಲಂಬಿಸಿ ಕೃಷಿ ಮಾಡುತ್ತದ್ದು ಮಳೆಯ ಅಭಾವದಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಜೊತೆಗೆ, ಜಿಲೆಯ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ನೀರಿನ ಅಭಾವ ಉಂಟಾಗುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ದುರ್ಗಪ್ಪ ಬೂದಿಹಾಳ, ಸೀನು ಹಿಪ್ಪರಗಿ, ರಾಜು ಹೊನ್ನುಟಗಿ, ಸುಂಕಪ್ಪ ಕುಂಚಿಕೊರವೆರ, ರಾಕೇಶ ಇಂಗಳಗಿ, ಪ್ರವೀಣ ಕನಸೇ, ರಾಘವೇಂದ್ರ ಛಲವಾದಿ. ವಿಕ್ರಮ್ ವಾಘಮೋರೆ. ಹಮಿದ ಇನಾಮದಾರ, ಗಣಪತಿ ರಾಠೋಡ ಇನ್ನಿತರರು ಇದ್ದರು.

