Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಗ್ರ ಅಭಿವೃದ್ಧಿ ಪಯಣ ನಿರಂತರ
(ರಾಜ್ಯ ) ಜಿಲ್ಲೆ

ಸಮಗ್ರ ಅಭಿವೃದ್ಧಿ ಪಯಣ ನಿರಂತರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಉತ್ತಮ ರಸ್ತೆ ನಿರ್ಮಾಣದಿಂದ ನಗರದ ಅಭಿವೃದ್ಧಿಗೆ ವೇಗ ಸಿಗುವುದರ ಜೊತೆಗೆ ಜನರ ಸುಗಮ ಸಂಚಾರಕ್ಕೆ ಮತ್ತಷ್ಟು ಅನುಕೂಲವಾಗಲು ಮಹತ್ವದ ಹೆಜ್ಜೆಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.
ನಗರದ ರಹಮಾನಿಯ ವೃತ್ತದಿಂದ ಕನ್ನಾನ ಫಂಕ್ಷನ್ ಹಾಲ್, ಬಾರಾಕೋಟ ತಾಂಡಾ ಮೂಲಕ ಜುಮನಾಳ, ಖತಿಜಾಪುರ ಕೂಡು ರಸ್ತೆ ನಿರ‍್ಮಾಣಕ್ಕೆ ೫ ಕೋಟಿ ರೂ. ವೆಚ್ಚದಲ್ಲಿ ಹಾಗೂ ಅಥಣಿ ಮುಖ್ಯ ರಸ್ತೆಯಿಂದ ರಾಜಕುಮಾರ ಲೇಔಟ್ ಕೂಡು ರಸ್ತೆ ೧.೫೦ ಕೋಟಿ ವೆಚ್ಚದಲ್ಲಿ ಕೈಗೊಳ್ಳುತ್ತಿರುವ ರಸ್ತೆ ಕಾಮಗಾರಿಗಳಿಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರೊಂದಿಗೆ ಜಂಟಿಯಾಗಿ ವಿದ್ಯುಕ್ತ ಚಾಲನೆ ನೀಡಿ, ಮಾತನಾಡಿದ ಅವರು, ವಿಜಯಪುರದ ಸಮಗ್ರ ಅಭಿವೃದ್ಧಿಯ ಪಯಣ ನಿರಂತರವಾಗಿರಲಿದೆ ಎಂದರು.
ನಗರದ ರೆಹಮಾನಿಯಾ ವೃತ್ತದಿಂದ ಕನ್ನಾನ್ ಫಂಕ್ಷನ್ ಹಾಲ್ ಹಾಗೂ ಬಾರಾಕೋಟ್ ತಾಂಡಾ ಮೂಲಕ ಜುಮನಾಳ ಹಾಗೂ ಖತಿಜಾಪುರ ಕೂಡು ರಸ್ತೆ ಸುಧಾರಣೆ ಅಂದಾಜು ೫೦೦ ಲಕ್ಷ ರೂ.ವೆಚ್ಚ ಮಾಡಲಾಗುತ್ತಿದೆ. ೩ ಕಿಮೀ. ರಸ್ತೆ ಅಭಿವೃದ್ಧಿಪಡಿಸಲಾಗುವುದು. ಈ ಕಾಮಗಾರಿಯಲ್ಲಿ ಎಂಬ್ಯಾಕ್‌ಮೆಟ್, ಸಬ್ ಗ್ರೇಡ್ (೩೦೦ ಎಂಎ), ಜಿಎಸ್‌ಬಿ, ಡಬ್ಲ್ಯೂ ಎಂಎಂ, ಡಾಂಬರೀಕರಣ (ಬಿಎಂ ಮತ್ತು ಎಸ್ ಡಿಬಿಸಿ) ಮತ್ತು ೮ ಸಿ.ಡಿ. ಕಾಮಗಾರಿಗಳು ಸೇರಿವೆ ಎಂದರು.
ಜಿಲ್ಲೆಯ ತಿಕೋಟಾ ತಾಲೂಕಿನ ನವಸರಪುರ, ತಾಜಪುರ ಕೂಡು ರಸ್ತೆ ಸುಧಾರಣೆಗೆ ೧೫೦ ಲಕ್ಷ ರೂ. ಬಿಡುಗಡೆಯಾಗಿದೆ. ಈ ಅನುದಾನದಡಿ೭೦೦ ಮೀ. ರಸ್ತೆ ಡಾಂಬರೀಕರಣ ಹಾಗೂ ೧೮೫ ಮೀಟರ್ ಕಾಂಕ್ರೀಟ್ ರಸ್ತೆ ಮತ್ತು ಫೂಟ್ ಬ್ರಿಡ್ಜ್ ನಿರ್ಮಿಸಲಾಗುವುದು ಎಂದು ಸಚಿವರು ತಿಳಿಸಿದರು.
ತೊರವಿ ಅತಾಲಟ್ಟಿಯಿಂದ ವಿಜಯಪುರ-ಅಥಣಿ ರಾಷ್ಟ್ರೀಯ ಹೆದ್ದಾರಿ ೫೪೮೮ ಕ್ಕೆ ಸಂಪರ್ಕ ಕಲ್ಪಿಸುವ ಡಾಂಬರ್ ರಸ್ತೆ ಮೇಲ್ಮೈ ಹಾಳಾಗಿದ್ದು, ೭೦೦ ಮೀ. ಉದ್ದಕ್ಕೂ ಎಸ್ ಡಿಬಿಸಿ ಹಾಗೂ ೧೮೬ ಮೀ. ಉದ್ದದ ಆಂತರಿಕ ರಸ್ತೆಗೆ ಸಿಸಿ ರಸ್ತೆ ಸೇರಿಸಲಾಗುವುದು ಎಂದರು.
ತಿಕೋಟಾ ತಾಲೂಕಿನ ನವರಸಪುರ ತಾಜಪುರ ಜೋಡು ರಸ್ತೆಯ ಸುಧಾರಣೆ ಮಾಡಲಾಗುತ್ತಿದ್ದು, ವಿಜಯಪುರ ನಗರದ ತೋರವಿ ಅತಾಲಟ್ಟಿಯಿಂದ ವಿಜಯಪುರ-ಅಥಣಿ ರಾಷ್ಟ್ರೀಯ ಹೆದ್ದಾರಿ ೫೪೮ ಬಿ ಯನ್ನು ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಇದರಲ್ಲಿ ಕಾಲುಸಂಕ (ಫೂಟ್ ಬ್ರಿಡ್ಜ್) ನಿರ‍್ಮಾಣ ಸೇರಿಸಲಾಗಿದೆ ಎಂದರಲ್ಲದೆ, ಜೊತೆಗೆ ಆಂತರಿಕ ರಸ್ತೆಗಳ ಡಾಂಬರೀಕರಣ ಮತ್ತು ಸಿಸಿ ರಸ್ತೆ ನಿರ್ಮಾಣದ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ಈ ಯೋಜನೆಗಳಿಂದ ವಿಜಯಪುರ ನಗರ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಕಟಕದೊಂಡ, ಮಾಜಿ ಶಾಸಕ ಪ್ರೊ.ರಾಜು ಆಲಗೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿ.ಎಸ್.ಪೊಲೀಸ್ ಪಾಟೀಲ, ಸಹಾಯಕ ನಿರ್ವಾಹಕ ಅಭಿಯಂತರ ರವಿ ಪವಾರ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಮಗ್ರ ಅಭಿವೃದ್ಧಿ ಪಯಣ ನಿರಂತರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.