Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
(ರಾಜ್ಯ ) ಜಿಲ್ಲೆ

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಹುತಾತ್ಮ ವೃತ್ತದ ಬಳಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ ಮಾಡಿತು.
ಸೌಹಾರ್ದ ಸಂಘದ ಸೇವೆಗೆ ಚಾಲನೆ ನೀಡಿದ ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ ಮಾತನಾಡಿ, ಆರ್ಥಿಕವಾಗಿ ಹಿಂದುಳಿದವರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ ಅವರನ್ನು ಸ್ವಾವಲಂಬಿಯಾಗಿಸುವಲ್ಲಿ ಸೌಹಾರ್ದ ಹಾಗೂ ಸಹಕಾರ ಸಂಘಗಳ ಪಾತ್ರ ಪ್ರಮುಖವಾಗಿದೆ ಎಂದರು. ವೇದಾಂತ ಕೇಸರಿ ಎಂದು ಶ್ರೀ ಮಲ್ಲಿಕಾರ್ಜುನ ಶ್ರೀಗಳನ್ನು ಕರೆಯಲಾಗುತ್ತಿತ್ತು. ಸಹಸ್ರಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ತಮ್ಮ ಗುರು ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳ ಹೆಸರು ಕೇಳಿದಾಕ್ಷಣ ಅತ್ಯಂತ ಸಂತೋಷಪಡುತ್ತಿದ್ದರು, ಅಷ್ಟೊಂದು ಗುರುಭಕ್ತಿ ಅವರಲ್ಲಿತ್ತು, ಈಗ ಅವರ ಗುರುಗಳ ಹೆಸರಿನಲ್ಲಿಯೇ ಸೌಹಾರ್ದ ಸಂಘ ಆರಂಭಗೊಂಡಿರುವುದು ಅತ್ಯಂತ ಸಂತೋಷ ತಂದಿದೆ, ಈ ಸೌಹಾರ್ದ ಸಂಘ ಉತ್ತರೋತ್ತರವಾಗಿ ಬೆಳೆಯಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಯಾಗಿದ್ದ ಡಿ.ವೈ.ಎಸ್.ಪಿ. ಹಾಗೂ ಲೇಖಕ ಬಸವರಾಜ ಯಲಿಗಾರ ಮಾತನಾಡಿ, ಸಹಕಾರ ಹಾಗೂ ಸೌಹಾರ್ದ ಸಂಘಗಳಿಗೆ ವಿಶ್ವಾಸವೇ ಜೀವಾಳ, ಆಡಳಿತ ಮಂಡಳಿ ಈ ವಿಶ್ವಾಸ ಗಳಿಸಿಕೊಂಡರೆ ಸಹಕಾರ ಸಂಘ ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯ, ಪ್ರಸ್ತುತ ವೇದಾಂತ ಕೇಸರಿ ಸೌಹಾರ್ದ ಸಂಘದ ವಿಶ್ವಸ್ಥ ಮಂಡಳಿ ನಿರ್ದೇಶಕರು ಪ್ರಾಮಾಣಿಕತೆ ಹಾಗೂ ಜನಸೇವೆಯನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡಿದ್ದಾರೆ,ಹೀಗಾಗಿ ಈ ಸೌಹಾರ್ದ ಸಂಘ ಶತಮಾನೋತ್ಸವ ಆಚರಿಸುವುದು ನಿಶ್ಚಿತ ಎಂದರು.
ಮುಖ್ಯ ಅತಿಥಿಯಾಗಿದ್ದ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿ, ವಿಜಯಪುರ ನಗರದಲ್ಲಿ ೮೦೦ ಕ್ಕೂ ಹೆಚ್ಚು ಸೌಹಾರ್ದಗಳು ನೊಂದಣಿಯಾಗಿವೆ, ಆದರೆ ಹೆಚ್ಚು ಕಡಿಮೆ ೩೦೦ ಸಹಕಾರ ಸಂಘಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ, ಸಾಲ ವಸೂಲಾತಿ ದೊಡ್ಡ ತೊಡಕಾಗಿ ಅನೇಕ ಸೌಹಾರ್ದಗಳು ಸೇವೆಯಿಂದ ಹಿಂದಕ್ಕೆ ಸರಿಯುತ್ತಿವೆ, ಹೀಗಾಗಿ ಸಾಲ ಪಡೆದವರು ಸಹ ನಿಯಮಿತವಾಗಿ ಸಾಲ ಮರುಪಾವತಿ ಮಾಡಬೇಕು ಎಂದರು.
ಸಾನಿಧ್ಯ ವಹಿಸಿದ್ದ ಮಮದಾಪೂರ ವಿರಕ್ತಮಠದ ಮುರುಘೇಂದ್ರ ಮಹಾಸ್ವಾಮಿಜಿ, ಸಾನಿಧ್ಯ ವಹಿಸಿದ್ದ ಬಬಲಾದಿಯ ಸದಾಶಿವ ಚಂದ್ರಗಿರಿ ಮಠದ ಅಪ್ಪಯ್ಯ ಅಜ್ಜನವರು ಆಶೀರ್ವಚನ ನೀಡಿದರು.
ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಸಹಕಾರಿ ಧುರೀಣ ಗುರುಲಿಂಗಪ್ಪ ಅಂಗಡಿ, ಪಾಲಿಕೆ ಮಾಜಿ ಸದಸ್ಯ ಉಮೇಶ ವಂದಾಲ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎಸ್. ಬಸವರಾಜ್, ವೇದಾಂತ ಕೇಸರಿ ಸೌಹಾರ್ದ ಅಧ್ಯಕ್ಷ ಮಲ್ಲು ಕಲಾದಗಿ, ಉಪಾಧ್ಯಕ್ಷ ಡಾ.ಆನಂದ ಚೌಧರಿ, ನಿರ್ದೇಶಕರಾದ ಡಾ.ಅರವಿಂದ ಢಾಣಕಶಿರೂರ, ಡಾ.ಮಲ್ಲಪ್ಪ ಹುಗ್ಗಿ, ಡಾ.ಬಸವರಾಜ ಬಡದಾಳ, ಡಾ.ಅಜೀತ್ ಗತಾಟೆ, ಶಂಕರರಾವ್ ಜೋಶಿ, ಈರಣ್ಣ ಅಳ್ಳಗಿ, ಡಾ.ಸುಧಾ ಕರಿಲಿಂಗಣ್ಣನವರ, ಸಾವಿತ್ರಿ ಚಿಂಚಲಿ ಪಾಲ್ಗೊಂಡಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ

ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಮಗ್ರ ಅಭಿವೃದ್ಧಿ ಪಯಣ ನಿರಂತರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.