Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೨೪ಸಾವಿರ ಶ್ಲೋಕಗಳ ಮಹಾ ಕಾವ್ಯ ರಾಮಾಯಣ :ಹಂಚಲಿ
(ರಾಜ್ಯ ) ಜಿಲ್ಲೆ

೨೪ಸಾವಿರ ಶ್ಲೋಕಗಳ ಮಹಾ ಕಾವ್ಯ ರಾಮಾಯಣ :ಹಂಚಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ೨೪ಸಾವಿರ ಶ್ಲೋಕಗಳನ್ನು ಒಳಗೊಂಡ ಮಹಾ ಕಾವ್ಯವನ್ನು ರಚಿಸಿ ಮಹರ್ಷಿ ವಾಲ್ಮೀಕಿ ಅವರು ನಮಗೆ ಕೊಟ್ಟಿದ್ದಾರೆ. ಕಾರ್ಟೂನ್‌ಗಳಲ್ಲಿ ತೋರಿಸುವ ಚಿತ್ರಗಳನ್ನು ನೋಡಿ ನಾವು ಇದು ರಾಮಾಯಣ ಅಂದುಕೊಂಡಿದ್ದೇವೆ. ಆದರೆ ಮಹರ್ಷಿ ವಾಲ್ಮೀಕಿ ನಮಗೆ ಕೊಟ್ಟಿರುವ ರಾಮಾಯಣದ ಮೌಲ್ಯಗಳೇ ಬೇರೆ ಎಂದು ಬಾಗೇವಾಡಿಯ ಶಿಕ್ಷಕ, ವಾಗ್ಮಿ ಅಶೋಕ ಹಂಚಲಿ ಹೇಳಿದರು.
ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಕೌಟುಂಬಿಕ ಜೀವನದ ಮಹಾ ಮೌಲ್ಯಗಳನ್ನು ತೋರಿಸುವ ರಾಜ, ತಂದೆ-ತಾಯಿಗಳು ಹೇಗಿರಬೇಕು, ಹೆಂಡತಿಯ ಆದರ್ಶಗಳು ಏನಾಗಿರಬೇಕು, ಸಹೋದರರ ಭಾತೃತ್ವದ ಬಾಂಧವ್ಯ ಹೇಗಿರಬೇಕು ಎನ್ನುವ ವಿಚಾರಧಾರೆಗಳನ್ನಿಟ್ಟುಕೊಂಡು ಬರೆದ ಮಹಾಕಾವ್ಯ ರಾಮಾಯಣವಾಗಿದೆ. ಅದಕ್ಕೆ ಇಂದಿಗೂ ಕೂಡ ರಾಮಾಯಣ ಜನಮಾನಸದಲ್ಲಿ ಉಳಿದು ಜನರ ದಾರಿ ತೋರುವ ಮಹಾ ದೀಪವಾಗಿ ಬೆಳಗುತ್ತಿದೆ ಎಂದರು.
ಡಿಎಸ್‌ಎಸ್ ಮುಖಂಡ ಹರೀಶ ನಾಟೇಕಾರ ಮಾತನಾಡಿದರು.
ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಮಾತನಾಡಿ, ರಾಮಾಯಣ, ಮಹಾಭಾರತ ಮತ್ತು ಸಂವಿಧಾನ ಬರೆದರು. ಆದರೂ ಅವರ ಹೆಸರುಗಳು ಎಲ್ಲಿಯೂ ಬರಲ್ಲ. ಡಾ.ಬಾಬಾ ಸಾಹೇಬರು ಸಂವಿಧಾನ ಬರೆದದ್ದಕ್ಕಾಗಿ ಎಲ್ಲ ಊರುಗಳಲ್ಲಿ ಅವರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಆದರೆ ಮಹಾಭಾರತ ಬರೆದ ವ್ಯಾಸರ ಮತ್ತು ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿಯವರ ಮೂರ್ತಿಗಳು ಎಲ್ಲೋ ಕೆಲವು ಕಡೆ ಮಾತ್ರ ಕಾಣುತ್ತೇವೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಆದರೆ ವಾಲ್ಮೀಕಿ ಮಹರ್ಷಿಗಳ ಮೂರ್ತಿ ನಿರ್ಮಿಸಿಲ್ಲದಿರುವುದು ಖೇದದ ಸಂಗತಿ ಎಂದರು.
ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ, ಯುವ ಮುಖಂಡ ಶಿವು ಕನ್ನೊಳ್ಳಿ ಮಾತನಾಡಿದರು.
ತಾ.ಪಂ ಪ್ರಭಾರ ಯೋಜನಾಧಿಕಾರಿ ಖೂಬಾಸಿಂಗ್ ಜಾಧವ, ಗ್ರೇಡ್ ೨ ತಹಶೀಲ್ದಾರ ಎಸ್.ಬಿ.ಕಟ್ಟಿ, ತಾಲೂಕು ಆರೋಗ್ಯ ಆಡಳಿತಾಧಿಕಾರಿ ಸತೀಶ ತಿವಾರಿ, ಎಸ್‌ಸಿ-ಎಸ್‌ಟಿ ನೌಕರ ಸಂಘದ ಅಧ್ಯಕ್ಷ್ಷ ಪರಶುರಾಮ ನಾಯ್ಕೋಡಿ, ಪುರಸಭೆ ಸದಸ್ಯರಾದ ಚನ್ನಪ್ಪ ಕಂಠಿ ಮತ್ತು ಯಲ್ಲಪ್ಪ ನಾಯಕಮಕ್ಕಳ, ಮಾಜಿ ಸದಸ್ಯರಾದ ಹಣಮಂತ ನಾಯಕಮಕ್ಕಳ ಮತ್ತು ಸಂತೋಷ ನಾಯ್ಕೋಡಿ, ಮುಖಂಡರಾದ ಚನ್ನಪ್ಪ ವಿಜಯಕರ, ಶ್ರೀಶೈಲ್ ಪೂಜಾರಿ, ರಾಮಣ್ಣ ರಾಜನಾಳ, ಪ್ರಶಾಂತ ಕಾಳೆ, ರಾಜು ತುಂಬಗಿ, ಮಾನಸು ನಾಯಕ, ಮಂಜುನಾಥ ಪೂಜಾರಿ, ದೆವೇಂದ್ರ ವಾಲೀಕಾರ, ಅಂಬ್ರೀಶ ಬಿರಾದಾರ, ಯಲಗೂರೇಶ ನಾಯಕ ಸೇರಿದಂತೆ ಮತ್ತೀತರರು ಇದ್ದರು.
ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿದರು. ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಉಪನಿರ್ದೇಶಕ ಉಮೇಶ ಲಮಾಣಿ ಸ್ವಾಗತಿಸಿದರು. ಗುಂಡು ಚೌಹಾಣ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.