ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ | ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಪ್ರಕಟಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ (ಎಸ್ಐಆರ್) ಪ್ರಕ್ರಿಯೆ ಪ್ರಸ್ತುತ ಚಾಲ್ತಿಯಲ್ಲಿದ್ದು, ಅರ್ಹ ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ ೨೩ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಂಣಾಧಿಕಾರಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ತಿಳಿಸಿದ್ದಾರೆ.
ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ನಮೂನೆ-೬, ಅನಿವಾಸಿ ಭಾರತೀಯ ಮತದಾರರ ಹೆಸರು ಸೇರ್ಪಡೆಗೆ ನಮೂನೆ-೬ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಮೂನೆ-೭ ಹಾಗೂ ವಿಳಾಸ ಬದಲಾವಣೆ, ಹೆಸರು ಅಥವಾ ಇತರೆ ವಿವರಗಳ ತಿದ್ದುಪಡಿಗಾಗಿ ನಮೂನೆ-೮ರ ಮೂಲಕ ಅರ್ಜಿ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಮತದಾರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸ್ವೀಕರಿಸಲಾದ ಅರ್ಜಿ ಮತ್ತು ಆಕ್ಷೇಪಣೆಗಳಿಗೆ ಸಂಬಂಧಿಸಿದ ಪಟ್ಟಿಗಳನ್ನು ನಮೂನೆ-೯, ೧೦, ೧೧, ೧೧ಎ ಹಾಗೂ ೧೧ಬಿಗಳಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.
ಸಾರ್ವಜನಿಕರು ಈ ಪಟ್ಟಿಗಳನ್ನು ಪರಿಶೀಲಿಸಿ, ತಮ್ಮ ಹೆಸರು ಹಾಗೂ ಸಂಬಂಧಿತ ವಿವರಗಳನ್ನು ಖಚಿತಪಡಿಸಿಕೊಳ್ಳಬಹುದಾಗಿದೆ.
ಮಾಹಿತಿಯನ್ನು ಜಿಲ್ಲಾಡಳಿತದ ಅಧಿಕೃತ ವೆಬ್ಸೈಟ್ hಣಣಠಿs://viರಿಚಿಥಿಚಿಠಿuಡಿಚಿ.ಟಿiಛಿ.iಟಿ/eಟಿ/ ಮತ್ತು ನಿಗದಿತ ಗೂಗಲ್ಡ್ರೈವ್ನಲ್ಲಿhಣಣಠಿs://ಜಡಿive.googಟe.ಛಿom/ಜಡಿive/ಜಿoಟಜeಡಿs/೧ಜx೧u೭೮೯೫ಚಿu_ಅಐ೩ಎಊಐಙಂZ೪_ಃಙಔಥಿ೭ಚಿಞe೫S?usಠಿ=shಚಿಡಿiಟಿg ನಲ್ಲಿಯೂ ಸಹ ಪರಿಶೀಲಿಸಬಹುದಾಗಿದೆ.
ಜಿಲ್ಲೆಯ ಅರ್ಹ ಮತದಾರರು ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪ್ರಕಟಿಸಲಾದ ಅರ್ಜಿ ಮತ್ತು ಆಕ್ಷೇಪಣೆಗಳ ಪಟ್ಟಿಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ನಿಗದಿತ ಅವಧಿಯೊಳಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

