ಉದಯರಶ್ಮಿ ದಿನಪತ್ರಿಕೆ
ಅಥಣಿ: ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಗೆ ಅತ್ಯಂತ ಮಹತ್ವದ ಸ್ಥಾನವಿದೆ ಕ್ರೀಡೆಯು ಕೇವಲ ಮನರಂಜನೆಯಲ್ಲ ಅದು ದೈಹಿಕ ಸದೃಢತೆ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಚಿದಾನಂದ ಸವದಿ ಹೇಳಿದರು
ಅವರು ತಾಲೂಕಿನ ಸಪ್ತಸಾಗರದ ಶಾರದಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ಜಿಲ್ಲಾ ಪಂಚಾಯತ ಬೆಳಗಾವಿ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಅಥಣಿ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ದರೂರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ದರೂರ ಕ್ಲಸ್ಟರ್ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ಲಸ್ಟರ್ ಮಟ್ಟದ ಕ್ರೀಡಾಕೂಟಗಳು ಗ್ರಾಮೀಣ ಭಾಗದ ಪ್ರತಿಭೆಗಳಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ವೇದಿಕೆಯಾಗುತ್ತವೆ ಹೀಗೆ ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗಳನ್ನು ಆಯೋಜಿಸುವುದರಿಂದ ಮಕ್ಕಳು ಬೆಳೆಯುವದರ ಜೊತೆಗೆ ಸದೃಢರಾಗುತ್ತಾರೆ ಜೊತೆಗೆ ಇಂತಹ ಶಿಕ್ಷಣ ಸಂಸ್ಥೆಗಳು ಕೂಡ ಬೆಳೆಯುತ್ತವೆ ಎಲ್ಲ ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಭಾಗವಹಿಸಿ ಯಶಸ್ಸು ಗಳಿಸಬೇಕು ಎಂದು ಕರೆ ನೀಡಿದರು.
ಶಿಕ್ಷಣ ಪ್ರೇಮಿ ಸಂಜಯ ನಾಡಗೌಡ ಮಾತನಾಡಿ, ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ಕ್ರೀಡೆಯಲ್ಲಿ ಹೆಚ್ಚು ಪ್ರೋತ್ಸಾಹಿಸಬೇಕೆಂದರು
ಈ ಸಂದರ್ಭದಲ್ಲಿ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಬಿ. ನದಾಫ, ಆರ್.ಎಮ್. ಸನದಿ, ಮೆಹಬೂಬ ಕರಿಸಾಬು, ದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ. ಕರೋಶಿ, ಎಲ್.ಬಿ. ನಾಯಿಕ, ದನಪಾಲ ಹಳ್ಳೂರ, ಲಕ್ಷ್ಮಣ ಜಯಗೋಣಿ, ಅಶೋಕ ಐಗಳಿ, ವಿಪುಲ್ ಪಂಡಿತ, ಆರ್.ಎ. ಪಾಟೀಲ, ದರೇಪ್ಪ ಚುನಾರ, ರಾಮು ಕುಂಬಾರ, ಅಪ್ಪಾಸಾಬ ಕಾಂಬಳೆ, ಶಿಕ್ಷಕರಾದ ಮಹಾಂತೇಶ ಘೂಳಪ್ಪನ್ನವರ, ಮಹಾದೇವ ಬಿಸ್ವಾಗರ, ಸೇರಿದಂತೆ ದರೂರ ಕ್ಲಸ್ಟರ್ ಮಟ್ಟದ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ಮುಖ್ಯೋಪಾಧ್ಯಾಯರು, ಎಸ್ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

