ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ೨೦೨೬-೨೭ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಪ್ರವರ್ಗ-೧ರ ಅಲೆಮಾರಿ/ಅರೆಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಸೆ.೩೦ ರವರೆಗೆ ವಿಸ್ತರಿಸಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆಅಲೆಮಾರಿ ಜನಾಂಗದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೆ. ೩೦ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆನ್ಲೈನ್ ಅರ್ಜಿ ಸಲ್ಲಿಕೆ ವೆಬ್ಸೈಟ್: hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/
ಯೋಜನೆಗಳ ವಿವರ ಹಾಗೂ ಸರ್ಕಾರಿ ಆದೇಶಗಳ ಮಾಹಿತಿಗಾಗಿ:hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ
ಇಲಾಖಾ ಸಹಾಯವಾಣಿ ಸಂ:೮೦೫೦೭೭೦೦೦೪ ಇಮೇಲ್ ವಿಳಾಸ: bಛಿತಿಜheಟಠಿಟiಟಿe@gmಚಿiಟ.ಛಿom
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂ:೧೯೦೨ ತಂತ್ರಾಂಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
