ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಫ.ಗು ಹಳಕಟ್ಟಿ ಸಂಸ್ಥೆಯ ಕಾರ್ಯದರ್ಶಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರಿಗೆ ಅಪ್ಪ ರಾಜ್ಯ ಪ್ರಶಸ್ತಿಗೆ ಲಭಿಸಿದೆ.
ತಾಲೂಕಿನ ಬೋರಗಿ ಗ್ರಾಮದ ನಬಿರೋಶನ್ ಪ್ರಕಾಶನ ವತಿಯಿಂದ ಪ್ರತಿ ವರ್ಷ ದಿ.ಖತಾಲಸಾಬ ಆಲಗೂರ (ಬೋರಗಿ) ಇವರ ಸ್ಮರಣಾರ್ಥವಾಗಿ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯೂ ರೂ.5ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಬರಹಗಾರ, ಶರಣ ಚಿಂತಕರಾಗಿರುವ ಡಾ.ಮಹಾಂತೇಶ ಬಿರಾದಾರ ಇವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ 21ಸೆಪ್ಟೆಂಬರ್ ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷತ್ಮಂದಿರದಲ್ಲಿ ನಡೆಯುವ ಅಪ್ಪ ರಾಜ್ಯ ಪ್ರಶಸ್ತಿ ಪ್ರದಾನ ಪೊಲೀಸ್ ಕಲಾಸಂಗಮ ಹಾಗೂ ಸಾಂಸ್ಕೃತಿಕ ಕಲಾ ಸಂಭ್ರಮ ಸಮಾರಂಭದಲ್ಲಿ, ನಾಡಿನ ಗಣ್ಯಾತೀಗಣ್ಯರ ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಮೌಲಾಲಿ ಆಲಗೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

