ಉದಯರಶ್ಮಿ ದಿನಪತ್ರಿಕೆ
ಅಥಣಿ: ಅನಾಥ ಮಕ್ಕಳ ಸಂರಕ್ಷಣೆ ಜೊತೆಗೆ ನಿರ್ಗತಿಕರಿಗೆ ನಿತ್ಯ ಅನ್ನ ಸಂತರ್ಪಣೆ ಹಾಗೂ ಅನೇಕ ಸಮಾಜಮುಖಿಗೆ ಸೇವೆಗಳನ್ನು ಮಾಡುತ್ತಿರುವ ನಿಜಕ್ಕೂ ಹಿರೇಮನಿ ದಂಪತಿಗಳ ಕಾರ್ಯ ಶ್ಲಾಘನೀಯ ಎಂದು ಗಚ್ಚಿನಮಠದ ಶಿವಬಸವ ಸ್ವಾಮೀಜಿ ಹೇಳಿದರು.
ಅವರು ಸುಕ್ಷೇತ್ರ ಗಚ್ಚಿನಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಪ್ರವಚನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಸಮಾಜ ಸೇವಕ ನಿಜಪ್ಪ ಹಿರೇಮನಿ ದಂಪತಿಗೆ ಸನ್ಮಾನಿಸಿ ಮಾತನಾಡಿದರು.
ಹಸಿದವರಿಗೆ ಅನ್ನ, ಆಶ್ರಯ ನೀಡುವುದರ ಜೊತೆಗೆ ಅನಾಥ ಮಕ್ಕಳ ಬಾಳಿನಲ್ಲಿ ಬೆಳಕು ಮೂಡಿಸುತ್ತಿರುವ ಅವರ ಕಾಯಕ ಅತ್ಯಂತ ಶ್ರೇಷ್ಠವಾದದ್ದು, ಅವರ ಸಾಮಾಜಿಕ ಸೇವೆ ಅನೇಕರಿಗೆ ಪ್ರೇರಣೆಯಾಗಿದೆ ಎಂದರು.
ಬೀದರದ ಬಸವ ಪ್ರಭು ಸ್ವಾಮೀಜಿ ಪ್ರವಚನ ನೀಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಸಿದ್ದಪ್ಪ ಮಹಾಜನ, ಶಿವಾನಂದ ದಿವಾನಮಳ, ರಾಮನಗೌಡ ಪಾಟೀಲ, ಈರಯ್ಯ ಜಗದಾಳಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

