Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಗಣೇಶೋತ್ಸವ ಆಚರಿಸಿ :ಸಿಪಿಐ
(ರಾಜ್ಯ ) ಜಿಲ್ಲೆ

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಗಣೇಶೋತ್ಸವ ಆಚರಿಸಿ :ಸಿಪಿಐ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪ್ರತಿಯೊಂದು ಕಾರ್ಯಕ್ರಮಕ್ಕೂ ಮೊದಲು ಪೂಜೆ ಸಲ್ಲಿಸಿ ನೆನೆಯುವ ಗಣೇಶನ ಹಬ್ಬ ಬಂದಿದೆ. ಈ ಹಬ್ಬವನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಆಚರಿಸಲು ಗಣೇಶೋತ್ಸವ ಸಮಿತಿಗಳು ಸಹಕರಿಸಬೇಕು ಎಂದು ಸಿಪಿಐ ಮೊಹಮ್ಮದ ಫಸಿಯುದ್ಧೀನ್ ಹೇಳಿದರು.
ಪಟ್ಟಣದ ಪೊಲೀಸ್ ಠಾಣಯಲ್ಲಿ ಗಣೇಶೋತ್ಸವದ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಮೊದಲನೇ ಹಂತದ ಶಾಂತಿಪಾಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣೇಶೋತ್ಸವವು ಎಲ್ಲರನ್ನೂ ಒಗ್ಗೂಡಿಸುವ ಹಬ್ಬವಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿಯುತವಾಗಿ ಆಚರಿಸಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯ ಸಂದೇಶವನ್ನು ರವಾನಿಸಿದರು.
ಈ ವೇಳೆ ನೂತನವಾಗಿ ಅಧಿಕಾರ ವಹಿಸಿಕೊಂಡ ಪಿಎಸ್‌ಐ ವಿಜಕುಮಾರ ತಳವಾರ ಮಾತನಾಡಿ, ಗಣೇಶೋತ್ಸವ ಸಮಿತಿಗಳು ಮುಂಚಿತವಾಗಿ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳಬೇಕು. ಮೆರವಣಿಗೆ ಸಂದರ್ಭದಲ್ಲಿ ನಿಗದಿತ ಮಾರ್ಗ ಹಾಗೂ ಸಮಯವನ್ನು ಪಾಲಿಸುವುದರ ಜೊತೆಗೆ, ಯಾವುದೇ ರೀತಿಯ ಗಲಾಟೆ ಅಥವಾ ಸಂಘರ್ಷಕ್ಕೆ ಅವಕಾಶ ನೀಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳಿಗೆ ಕಿವಿಗೊಡದೆ, ಅನುಮಾನಾಸ್ಪದ ಬೆಳವಣಿಗೆಗಳು ಕಂಡುಬಂದರೆ ಕೂಡಲೇ ಪೊಲೀಸರ ಗಮನಕ್ಕೆ ತರಬೇಕು. ಕೆಲವು ಸಂದರ್ಭಗಳಲ್ಲಿ ಪೊಲೀಸರೇ ಬರಬೇಕು ಎಂದು ಕಾಯದೇ, ನಾಗರಿಕರು ಸಹ ಪೊಲೀಸರಂತೆ ಜವಾಬ್ದಾರಿಯಿಂದ ಕೆಲಸ ಮಾಡುವಂತೆ ತಿಳಿಸಿದರು.
ಹಿಂದೂ ಕಾರ್ಯಕರ್ತ ಬಸಯ್ಯ ನಂದಿಕೇಶ್ವರಮಠ, ಗಣೇಶೋತ್ಸವ ಮಹಾ ಮಂಡಳದ ಪ್ರಮುಖರಾದ ಸಿದ್ಧರಾಜ ಹೊಳಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಂಜು ಬಾಗೇವಾಡಿ, ಉದಯಸಿಂಗ್ ರಾಯಚೂರ, ಬಾಬಾ ಗುಡ್ನಾಳ ಮಾತನಾಡಿದರು.
ಕೃಷ್ಣ ಬಿಳೇಭಾವಿ, ಪರಶುರಾಮ ನಾಲತವಾಡ, ಸದಾಶಿವ ಮಠ, ಸಂಗಣ್ಣ ನಾಲತವಾಡ, ಕಾಶಿನಾಥ ಬಿರಾದಾರ, ಸಂಗಣ್ಣ ಮೇಲಿನಮನಿ, ಆನಂದ ಬಿಜ್ಜೂರಮಠ, ಹುಸೇನ ಮುಲ್ಲಾ ಸೇರಿದಂತೆ ಮತ್ತೀತರರು ಭಾಗಿಯಾಗಿದ್ದರು.
ಕ್ರೈಂ ಪಿಎಸ್‌ಐ ರಂಗಪ್ಪ ಭಂಗಿ ನಿರ್ವಹಿಸಿದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.