Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
(ರಾಜ್ಯ ) ಜಿಲ್ಲೆ

ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆರು ತಿಂಗಳಿಂದ ಚಡಚಣ ಪ್ರಯಾಣಿಕರ ಪರದಾಟ | ಪ.ಪಂ.-ಬಸ್ ನಿಲ್ದಾಣದ ಅಧಿಕಾರಿಗಳ ನಡುವೆ ಹೊಣೆಗಾರಿಕೆಯ ಜಟಾಪಟಿ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದ ಬಸ್ ನಿಲ್ದಾಣದ ಹೊರಭಾಗದಲ್ಲಿ ಕಳೆದ ಸುಮಾರು ಆರು ತಿಂಗಳಿಂದ ಕೊಳಚೆ ನೀರು ರಸ್ತೆಯ ಮೇಲೆ ನಿಂತು ಹರಿಯುತ್ತಿರುವುದರಿಂದ ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ.
ಬಸ್ ನಿಲ್ದಾಣಕ್ಕೆ ತೆರಳಬೇಕಾದ ಪ್ರಯಾಣಿಕರು ಕೊಳಚೆ ನೀರಿನಲ್ಲಿಯೇ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವು ದಿನಗಳಿಂದ ನಿಂತಿರುವ ಕೊಳಚೆ ನೀರಿನಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಬ್ಬೆಂದು ದುರ್ವಾಸನೆ ಹರಡುತ್ತಿದೆ. ಬಸ್‌ಗಾಗಿ ಗಂಟೆಗಟ್ಟಲೆ ಕಾಯುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಕುಳಿತುಕೊಳ್ಳುವ ಸ್ಥಿತಿ ಎದುರಾಗಿದೆ. ನಿಂತ ನೀರಿನಿಂದ ಸೊಳ್ಳೆಗಳ ಕಾಟವೂ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಸಾರ್ವಜನಿಕರನ್ನು ಕಾಡುತ್ತಿದೆ.
ಸಾರ್ವಜನಿಕರ ಸಂಚಾರಕ್ಕೆ ಪ್ರಮುಖವಾಗಿರುವ ಬಸ್ ನಿಲ್ದಾಣದ ಸುತ್ತಲಿನ ಪ್ರದೇಶವೇ ಇಂತಹ ಅವ್ಯವಸ್ಥೆಗೆ ಒಳಗಾಗಿರುವುದು ಪಟ್ಟಣದ ಮೂಲಸೌಕರ್ಯ ನಿರ್ವಹಣೆಯ ಬಗ್ಗೆ ಪ್ರಶ್ನೆ ಮೂಡಿಸಿದೆ.
ಚಡಚಣ ಪಟ್ಟಣ ಪಂಚಾಯಿತಿಯ ವ್ಯಾಪ್ತಿಗೆ ಬಸ್ ನಿಲ್ದಾಣದ ಪ್ರದೇಶವೂ ಸೇರಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬಸ್ ನಿಲ್ದಾಣದ ಹೊರಭಾಗದ ಚರಂಡಿ ಸಮಸ್ಯೆ ಯಾರ ವ್ಯಾಪ್ತಿಗೆ ಬರುತ್ತದೆ ಎಂಬ ವಿಚಾರದಲ್ಲಿ ಎರಡು ಇಲಾಖೆಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ಇದರ ಪರಿಣಾಮವನ್ನು ಮಾತ್ರ ಕಳೆದ ಆರು ತಿಂಗಳಿಂದ ಪ್ರಯಾಣಿಕರು ಅನುಭವಿಸುವಂತಾಗಿದೆ.
ನಿತ್ಯ ನೂರಾರು ಪ್ರಯಾಣಿಕರು ಸಂಚರಿಸುವ ಬಸ್ ನಿಲ್ದಾಣದ ಪ್ರವೇಶದ್ವಾರದಲ್ಲೇ ಇಂತಹ ಅವ್ಯವಸ್ಥೆ ಮುಂದುವರಿದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳು ಪರಸ್ಪರ ಹೊಣೆಗಾರಿಕೆ ಆರೋಪಿಸುವುದನ್ನು ಬಿಟ್ಟು, ಸಮನ್ವಯದಿಂದ ಕೂಡಲೇ ಕಾಮಗಾರಿ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

“ಬಸ್‌ಗಳು ಒಳಹೊರಗೆ ಸಂಚರಿಸುವ ರಸ್ತೆಯಲ್ಲಿ ಕಾಮಗಾರಿ ಕೈಗೊಂಡು ರಸ್ತೆ ಬಂದ್ ಮಾಡಿದರೆ ನಮ್ಮ ಸಂಸ್ಥೆಗೆ ನಷ್ಟ ಉಂಟಾಗುತ್ತದೆ. ಅಲ್ಲದೆ, ವಾಹನ ಸಂಚಾರಕ್ಕೆ ಅಡ್ಡಿಯಾಗಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯೂ ಇದೆ. ಇಂತಹ ಕ್ರಮ ಕೈಗೊಳ್ಳುವ ಅಧಿಕಾರ ಚಡಚಣ ಬಸ್ ನಿಲ್ದಾಣದ ಅಧಿಕಾರಿಗಳ ಕೈಯಲ್ಲಿಲ್ಲ. ಚರಂಡಿಯು ಬಸ್ ನಿಲ್ದಾಣದ ಆವರಣದ ಹೊರಗಡೆ ಇದ್ದು, ಅದು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುತ್ತದೆ. ಆ ಚರಂಡಿಗೂ ನಮ್ಮ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ”

– ಪವಾರ
ಚಡಚಣ ಬಸ್ ನಿಲ್ದಾಣಾಧಿಕಾರಿ

“ಚರಂಡಿ ಸಮಸ್ಯೆ ಬಗೆಹರಿಸಲು ಅಗತ್ಯ ಕಾಮಗಾರಿ ಕೈಗೊಳ್ಳಲು ಬಸ್ ನಿಲ್ದಾಣದ ಅಧಿಕಾರಿಗಳ ಅನುಮತಿ ಬೇಕಾಗಿದೆ. ಈ ಕುರಿತು ವಿಜಯಪುರದ ಬಸ್ ವ್ಯವಸ್ಥಾಪಕರಿಗೆ ಪತ್ರ ಬರೆಯಲಾಗುವುದು. ಅನುಮತಿ ದೊರೆತ ನಂತರ ಒಂದು ವಾರದೊಳಗೆ ಶಾಶ್ವತವಾಗಿ ಕೊಳಚೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲಾಗುವುದು”

– ಬಾಬಾಸಾಹೇಬ ತಾವಸೆ
ಪಟ್ಟಣ ಪಂಚಾಯಿತಿ ಸಿಇಒ

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
  • ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಡಾ.ಮುಜಾವರ ಗೆರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಸಮರ್ಪಕ ವಿದ್ಯುತ್ ಪೂರೈಕೆಗೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಷ್ಟಗಳೆದುರಿಸಿ, ಸಾಧನೆಯ ಹಾದಿಯನೇರಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.