Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರ ಘೋಷಣೆ ನಿಯಮಗಳನ್ನು ಮರುಪರಿಶೀಲಿಸಿ ನ್ಯಾಯಯುತ ಪರಿಹಾರ ಒದಗಿಸಿ
(ರಾಜ್ಯ ) ಜಿಲ್ಲೆ

ಬರ ಘೋಷಣೆ ನಿಯಮಗಳನ್ನು ಮರುಪರಿಶೀಲಿಸಿ ನ್ಯಾಯಯುತ ಪರಿಹಾರ ಒದಗಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೇಂದ್ರ ಸರಕಾರ ರಾಜ್ಯದ ರೈತರ ಹಿತದೃಷ್ಟಿಯಿಂದ ಬರ ಘೋಷಣೆಯ ನಿಯಮಗಳನ್ನು ಮರುಪರಿಶೀಲಿಸಿ, ರಾಜ್ಯಕ್ಕೆ ನ್ಯಾಯಯುತ ಪರಿಹಾರ ಒದಗಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯವು ಹಿಂದೆಂದೂ ಕಂಡು-ಕೇಳರಿಯದ ರೀತಿಯಲ್ಲಿ ಭೀಕರ ಬರಗಾಲದ ಹೊಡೆತಕ್ಕೆ ಸಿಲುಕಿದೆ. ಕಂದಾಯ ಇಲಾಖೆಯ ಹೊಣೆಗಾರಿಕೆಯ ಜೊತೆಗೆ ಉಪಮುಖ್ಯಮಂತ್ರಿಯೂ ಆಗಿರುವ ಡಾ. ಜಿ. ಪರಮೇಶ್ವರ ಅವರು ಈಗಾಗಲೇ 101 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದ್ದಾರೆ. ರಾಜ್ಯದ ಒಟ್ಟು 200 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ನಿರ್ಧರಿಸಲಾಗಿದ್ದು, ಹಂತ ಹಂತವಾಗಿ ಈ ಘೋಷಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಬರಪೀಡಿತವೆಂದು ಘೋಷಿಸಲಾಗಿರುವ ತಾಲ್ಲೂಕುಗಳನ್ನು ಹೊರತುಪಡಿಸಿ, ಉಳಿದ ೧೦ ತಾಲೂಕುಗಳನ್ನೂ ಬರಪೀಡಿತವೆಂದು ಘೋಷಿಸಬೇಕಾಗಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ; ರಾಜ್ಯ ಸರ್ಕಾರ ಅವರ ನೆರವಿಗೆ ಎಲ್ಲ ರೀತಿಯಲ್ಲೂ ಬದ್ಧವಾಗಿದೆ.
ಇಂಥ ಸಂಕಷ್ಟದ ಸಂದರ್ಭದಲ್ಲಿ ರೈತರ ನೆರವಿಗೆ ನಿಲ್ಲಬೇಕಾದ ಕೇಂದ್ರ ಸರಕಾರದ ಬರ ಘೋಷಣೆಯ ಕಠಿಣ ಮಾನದಂಡಗಳಿಂದಾಗಿ ರಾಜ್ಯದ ಅರ್ಹ ರೈತರಿಗೆ ಪರಿಹಾರ ವಿಳಂಬವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
2020ರಲ್ಲಿ ಜಾರಿಗೊಳಿಸಲಾದ ಬರ ಮಾರ್ಗಸೂಚಿಗಳನ್ವಯ ಮಳೆ ಕೊರತೆಯ ಜೊತೆಗೆ ಉಪಗ್ರಹ ಆಧಾರಿತ Vegetation Indices, ಮಣ್ಣಿನ ತೇವಾಂಶದ ಕೊರತೆ, ಬೆಳೆ ಹಾನಿಯ ಪ್ರಮಾಣ ಸೇರಿದಂತೆ ಹಲವು ತಾಂತ್ರಿಕ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪರಿಗಣಿಸಲಾಗುತ್ತಿದೆ. ಇದರಿಂದ ವಾಸ್ತವವಾಗಿ ಬರ ಎದುರಿಸುತ್ತಿರುವ ಹಲವು ಪ್ರದೇಶಗಳನ್ನು ಬರಪೀಡಿತವೆಂದು ಘೋಷಿಸಿ, ಸಕಾಲದಲ್ಲಿ ಪರಿಹಾರ ಒದಗಿಸಲು ರಾಜ್ಯಗಳಿಗೆ ತೊಂದರೆಯಾಗುತ್ತಿದೆ.
ನಿಯಮಗಳು ರೈತರ ಬದುಕನ್ನು ರಕ್ಷಿಸಲು ಇರಬೇಕು. ಅವರ ನೆರವಿಗೆ ಅಡ್ಡಿಯಾಗಬಾರದು. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ, ಬರ ಘೋಷಣೆಯ ಕಠಿಣ ಮಾನದಂಡಗಳನ್ನು ಸಡಿಲಿಸುವುದು ಇಂದಿನ ಅಗತ್ಯ. ಅರ್ಹ ರೈತರಿಗೆ ಕೇಂದ್ರದ ಪರಿಹಾರ ಸಕಾಲದಲ್ಲಿ ತಲುಪುವಂತೆ ನಿಯಮಗಳನ್ನು ಪರಿಷ್ಕರಿಸಬೇಕು.
ರೈತನ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರಗಳ ಕರ್ತವ್ಯ ಮಾತ್ರವಲ್ಲ, ಮಾನವೀಯ ಹೊಣೆಗಾರಿಕೆಯೂ ಹೌದು. ಕರ್ನಾಟಕದ ರೈತರ ಹಿತದೃಷ್ಟಿಯಿಂದ ಬರ ಘೋಷಣೆಯ ನಿಯಮಗಳನ್ನು ಮರುಪರಿಶೀಲಿಸಿ, ರಾಜ್ಯಕ್ಕೆ ನ್ಯಾಯಯುತ ಪರಿಹಾರ ಒದಗಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸುತ್ತೇನೆ ಎಂದು ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ
    In (ರಾಜ್ಯ ) ಜಿಲ್ಲೆ
  • ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!
    In (ರಾಜ್ಯ ) ಜಿಲ್ಲೆ
  • ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಿರಲಿ
    In (ರಾಜ್ಯ ) ಜಿಲ್ಲೆ
  • ಅಂಬೇಡ್ಕರ್ ಓದು ವಿದ್ಯಾರ್ಥಿಗಳಿಗೆ ಪ್ರೇರಣೆ ಪಾಠ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳನ್ನು ಸಂಯಮದಿಂದ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
    In (ರಾಜ್ಯ ) ಜಿಲ್ಲೆ
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.