Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ
(ರಾಜ್ಯ ) ಜಿಲ್ಲೆ

ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿಯಲ್ಲಿ ನಡೆದ ಗುರುವಂದನಾ ಕಾರ್ಯಕ್ರಮ | ಶ್ರೀ ಬಸವೇಶ್ವರ ಸರ್ಕಾರಿ ಪಪೂ ಕಾಲೇಜಿನ 2006-7ನೇ ಸಾಲಿನ ಎಸ್ಸೆಸ್ಸೆಲ್ಸಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ ಎಂದಿಗೂ ಕಡಿಮೆಯಾಗುವುದಿಲ್ಲ ಎಂಬುದಕ್ಕೆ ಪಟ್ಟಣದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮ ಸಾಕ್ಷಿಯಾಯಿತು.
ಪಟ್ಟಣದ ಶ್ರೀ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2006-7ನೇ ಸಾಲಿನ SSLC ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿದ್ಯಾರ್ಥಿಗಳು ಪುಷ್ಪವೃಷ್ಟಿಗೈದು ಶಿಕ್ಷಕರನ್ನು ವೇದಿಕೆಗೆ ಬರಮಾಡಿಕೊಂಡರು.
ಒಂದೇ ಶಾಲೆಯ ಆವರಣದಲ್ಲಿ ಕಲಿತು, 20 ವರ್ಷಗಳ ನಂತರ ಮತ್ತೆ ಒಂದೇ ವೇದಿಕೆಯಲ್ಲಿ ಸೇರಿ, ಶಾಲೆಯಲ್ಲಿ ಕಳೆದ ತಮ್ಮ ಬಾಲ್ಯದ ಸಿಹಿ-ಕಹಿ ನೆನಪುಗಳನ್ನು ವಿದ್ಯಾರ್ಥಿಗಳು ಮೆಲುಕು ಹಾಕುವ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡರು.
ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ಮುಖ್ಯ ಶಿಕ್ಷಕ ಎಸ್.ಎಸ್. ಕುದರಕರ, ಗುರು ಎಂಬ ಪದಕ್ಕೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಅನಾದಿಕಾಲದಿಂದಲೂ ಪೂಜ್ಯಭಾವನೆಯಿಂದ ನಾವುಗಳು ಗೌರವಿಸಿಕೊಂಡು ಬಂದಿದ್ದೇವೆ. ಅಂದಿನ ಗುರುಕುಲದ ಶಿಕ್ಷಣದಲ್ಲಿ ಗುರು-ಹಿರಿಯರಿಗೆ ಗೌರವಿಸುವ ಗುಣಗಳೊಂದಿಗೆ ಶಿಕ್ಷಣ ನೀಡಲಾಗುತ್ತಿತ್ತು. ಇಂದಿಗೂ ಅಂತಹ ಕಲಿಕಾ ಕ್ರಮಗಳು ಸರ್ಕಾರಿ ಶಾಲೆಗಳಲ್ಲಿ ದೊರೆಯುತ್ತಿದೆ. ಇದಕ್ಕೆ ಉದಾಹರಣೆಯಾಗಿ ಎರಡು ದಶಕ ಕಳೆದರೂ ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸಿ ಹಿರಿಯ ವಿದ್ಯಾರ್ಥಿಗಳು ಸಮಾಗಮಗೊಂಡು ಗುರುವಂದನೆ ಸಲ್ಲಿಸುವ ಸಮಾರಂಭ ಏರ್ಪಡಿಸಲಾಗಿದೆ. ಮನೋಧರ್ಮಕ್ಕೆ ಅನುಗುಣವಾಗಿ ಶಿಕ್ಷಕ ವೃತ್ತಿ ಜೀವನ ಪೂರೈಸುವ ಮೂಲಕ ಸಮಾಜಕ್ಕೆ ಸುಸಂಸ್ಕೃತ ಹಾಗೂ ಉತ್ತಮ ಪ್ರಜೆಗಳನ್ನು ನೀಡಿದ್ದೇನೆಂಬ ಆತ್ಮತೃಪ್ತಿ ದೊರೆತಿದೆ ಎಂದು ಭಾವುಕರಾದರು.
ಹಳೆ ವಿದ್ಯಾರ್ಥಿಗಳ ಕುರಿತು ಬಹಳ ಮನಮುಟ್ಟುಹಾಗೆ ಮಾತನಾಡಿದ ನಿವೃತ್ತ ಶಿಕ್ಷಕ ಎಂ ಎಸ್ ಝಳಕಿ, ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ಮೂಲಕ ಆರೋಗ್ಯ ಪೂರ್ಣ ಸಮಾಜವನ್ನು ನಿರ್ಮಾಣ ಮಾಡುವಂತೆ ಅವರು ಮನವಿ ಮಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನಿ.ಶಿಕ್ಷಕ ಕೆ.ಎಸ್.ಕಾಖಂಡಕಿ, ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಸಹಮತ ಭಾಂದವ್ಯ ಎಂಬುದು ಕಷ್ಟದ ಮಾತು, ಈ ನಡುವೆಯೂ ಗುರುಗಳ ಮೇಲಿನ ಪ್ರೀತಿಯಿಂದ ಕಾರ್ಯಕ್ರಮ ರೂಪಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಎಸ್. ಎಸ್. ಝಳಕಿ, ಎಸ್.ಎಸ್. ಕುದರಕರ, ಆರ್.ಎನ್. ಪೂಜಾರಿ, ಕೆ.ಎಸ್.ಕಾಖಂಡಕಿ, ಎಮ್. ಎಸ್. ಝಳಕಿ, ಎಮ್.ಎಸ್. ಮನಹಳ್ಳಿ, ಎಸ್.ಕೆ. ಸೋಮನಕಟ್ಟಿ, ಕೆ.ಬಿ. ಕಡೆಮನಿ, ವಾಯ್.ಜಿ.ಮೇಟಿ, ಕೆ.ಎಸ್. ಕಾಖಂಡಕಿ, ಎ.ಎಸ್. ಬಾಳಿಕಾಯಿ, ಎಸ್.ಎಸ್. ಬಿರಾದಾರ, ಎಮ್.ಎಮ್. ಗುಡ್ಡವಾಡ, ಶ್ರೀಮತಿ ಎಸ್.ಬಿ. ಅಬಂಗಿ, ಶ್ರೀಮತಿ ಸಿ.ಜಿ.ಹುಳಗುಳಕರ, ಶ್ರೀಮತಿ ಎಸ್.ಎಸ್.ಕಡೇವಾಲ, ಶ್ರೀಮತಿ ಎಸ್.ಎಸ್.ಅಂಗಡಿ, ಶ್ರೀಮತಿ ಬಿ.ಜಿ. ದೊಡಮನಿ, ಶ್ರೀಮತಿ ಎ.ಬಿ.ಪಾಟೀಲ, ಶ್ರೀಮತಿ ಜಿ.ವಿ. ಗಬ್ಬೂರ, ಶ್ರೀಮತಿ ಬಿ.ಜಿ. ಬಿರಾದಾರ ಸೇರಿದಂತೆ ಎಲ್ಲ ಶಿಕ್ಷಕರನ್ನು ಸನ್ಮಾನಿಸಲಾಯಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ
    In (ರಾಜ್ಯ ) ಜಿಲ್ಲೆ
  • ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!
    In (ರಾಜ್ಯ ) ಜಿಲ್ಲೆ
  • ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಿರಲಿ
    In (ರಾಜ್ಯ ) ಜಿಲ್ಲೆ
  • ಅಂಬೇಡ್ಕರ್ ಓದು ವಿದ್ಯಾರ್ಥಿಗಳಿಗೆ ಪ್ರೇರಣೆ ಪಾಠ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳನ್ನು ಸಂಯಮದಿಂದ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
    In (ರಾಜ್ಯ ) ಜಿಲ್ಲೆ
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.