Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಣೇಶೋತ್ಸವ ಆಚರಿಸಿ, ಕಾನೂನು ಮೀರಬೇಡಿ
(ರಾಜ್ಯ ) ಜಿಲ್ಲೆ

ಗಣೇಶೋತ್ಸವ ಆಚರಿಸಿ, ಕಾನೂನು ಮೀರಬೇಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಿಜೆಯಲ್ಲಿ ಕೋಮು ಪ್ರಚೋದಕ ಹಾಡು ಹಾಕಿದ್ರೆ ಜಪ್ತಿ | ಪಿಎಸ್‌ಐ ಅಂಗಡಿ ವಾರ್ನಿಂಗ್

ಉದಯರಶ್ಮಿ ದಿನಪತ್ರಿಕೆ

ಚಡಚಣ: ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸುವಂತೆ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಚಡಚಣ ಪೊಲೀಸ್ ಠಾಣೆಯ ಪಿಎಸ್‌ಐ ಅರವಿಂದ ಅಂಗಡಿ ಸೂಚಿಸಿದರು.
ಸೆ.14ರಿಂದ ನಡೆಯಲಿರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಚಡಚಣ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಶಾಂತಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಿಎಸ್‌ಐ ಅರವಿಂದ ಅಂಗಡಿ, ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯ ಚಡಚಣ ಪಟ್ಟಣ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಗಣೇಶೋತ್ಸವವನ್ನು ಆಚರಿಸಲಾಗುತ್ತಿದ್ದು, ಎಲ್ಲರೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದರು.
ಗಣೇಶ ಮೂರ್ತಿಗಳ ವಿಸರ್ಜನೆಯನ್ನು ರಾತ್ರಿ 10 ಗಂಟೆಯೊಳಗೆ ಪೂರ್ಣಗೊಳಿಸಬೇಕು. ಮಿತಿಮೀರಿದ ಧ್ವನಿಯಿಂದ ವಯೋವೃದ್ಧರು, ಮಕ್ಕಳು ಹಾಗೂ ಅಸ್ವಸ್ಥರು ತೊಂದರೆ ಅನುಭವಿಸುವಂತಾಗಬಾರದು. ಹಬ್ಬದ ಸಂಭ್ರಮದ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಧ್ವನಿವರ್ಧಕ ಬಳಸುವುದನ್ನು ನಿಯಂತ್ರಿಸಿ ಡಿಜೆಗಳಲ್ಲಿ ಇಂಪಾದ ಹಾಡುಗಳಿರಲಿ ಮತ್ತು ಡಿಜೆಗಳಲ್ಲಿ ಯಾವುದೇ ಕೋಮು ಪ್ರಚೋದಕ ಅಥವಾ ಅಶಾಂತಿಗೆ ಕಾರಣವಾಗುವ ಹಾಡುಗಳನ್ನು ಪ್ರಸಾರ ಮಾಡಬಾರದು. ನಿಯಮ ಉಲ್ಲಂಘಿಸಿದಲ್ಲಿ ಡಿಜೆ ಹಾಗೂ ಸೌಂಡ್ ಸಿಸ್ಟಮ್‌ಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
5, 7, 9 ಹಾಗೂ 11ನೇ ದಿನ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಮಿತಿಗಳು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ವಿಸರ್ಜನೆ ದಿನದಂದು ಆಯೋಜಕರು ಮುನ್ನೆಚ್ಚರಿಕೆ ವಹಿಸಿ, ಪೊಲೀಸ್ ಇಲಾಖೆ ಸೂಚಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.
ಬಿಜೆಪಿ ಚಡಚಣ ಮಂಡಲ ಅಧ್ಯಕ್ಷ ಕಾಂತುಗೌಡ (ಚಂದ್ರಕಾಂತ) ಪಾಟೀಲ ಮಾತನಾಡಿ, ಈ ವರ್ಷವೂ ಯಾವುದೇ ಅನಾಹುತಕ್ಕೆ ಅವಕಾಶ ನೀಡದೆ ಶಾಂತಿಯುತವಾಗಿ ಹಬ್ಬ ಆಚರಿಸೋಣ ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ ಮಾತನಾಡಿ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾಧಿಕಾರಿಗಳ ಸುತ್ತೋಲೆ ಮತ್ತು ಆದೇಶದಂತೆ ಪಟ್ಟಣ ಪಂಚಾಯಿತಿ ವತಿಯಿಂದ ವಾರ್ಡ್ ನಂ.7ರಲ್ಲಿ 20x20x20 ಅಡಿ ವಿಸ್ತೀರ್ಣದ ಗಣೇಶ ವಿಸರ್ಜನಾ ಹೊಂಡ ನಿರ್ಮಿಸಲಾಗಿದೆ. ಪಟ್ಟಣದ ಸಾರ್ವಜನಿಕರು ಗಣೇಶ ಮೂರ್ತಿಗಳನ್ನು ಇದೇ ಹೊಂಡದಲ್ಲಿ ವಿಸರ್ಜಿಸಬೇಕು ಎಂದು ಮನವಿ ಮಾಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಿ.ಕೆ. ತಾವಸೆ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಪಟ್ಟಣ ಪಂಚಾಯಿತಿ, ಕೆಪಿಟಿಸಿಎಲ್ ಹಾಗೂ ಪೊಲೀಸ್ ಇಲಾಖೆಯಿಂದ ಅಗತ್ಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಗಣೇಶೋತ್ಸವ ಸಮಿತಿಗಳಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು. ಪ್ರತಿಷ್ಠಾಪನೆ ಹಾಗೂ ಕಾರ್ಯಕ್ರಮಗಳ ಸಂದರ್ಭದಲ್ಲಿ ಶಾಂತಿ ಕಾಪಾಡಲು ಸಮಿತಿಗಳ ಸಹಕಾರ ಅಗತ್ಯ ಎಂದರು.
ಯುವಕರು ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಆದ್ಯತೆ ನೀಡಿ, ಜೇಡಿಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತೆ ಮನವಿ ಮಾಡಿದ ಅವರು, ಗಣೇಶ ಮೂರ್ತಿ ವಿಸರ್ಜನೆಗಾಗಿ ಪಟ್ಟಣ ಪಂಚಾಯಿತಿ ವತಿಯಿಂದ ವಾಹನದ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ತಿಳಿಸಿದರು.
ಗಣೇಶೋತ್ಸವ ಸಮಿತಿಗಳ ಮುಖಂಡರು ಪ್ರತಿವರ್ಷದಂತೆ ಈ ವರ್ಷವೂ ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಗಣೇಶ ಹಬ್ಬ ಆಚರಿಸುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಚಡಚಣ ಪೊಲೀಸ್‌ಠಾಣಾಧಿಕಾರಿ ಅರವಿಂದ ಅಂಗಡಿ,ಪಟ್ಟಣ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ, ಮುಖ್ಯಾಧಿಕಾರಿ ಬಿ.ಕೆ. ತಾವಸೆ, ಬಿಜೆಪಿ ಚಡಚಣ ಮಂಡಲ ಅಧ್ಯಕ್ಷ ಕಾಂತುಗೌಡ (ಚಂದ್ರಕಾಂತ) ಪಾಟೀಲ, ದೇವೆಂದ್ರಪ್ಪಗೌಡ ಪಾಟೀಲ, ಚಿದಾನಂದ ಕುಂಬಾರ ಸೇರಿದಂತೆ ಚಡಚಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗಣೇಶ ಮಿತ್ರ ಮಂಡಳಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ
    In (ರಾಜ್ಯ ) ಜಿಲ್ಲೆ
  • ಜನಪದ ಕಲೆ ನಮ್ಮ ಇತಿಹಾಸದ ಜೀವಂತ ದಾಖಲೆ :ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • 10 ದಿನ ಪೂರೈಸಿದ ರೈತರ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸಮಯಕ್ಕೆ ಗೌರವ ಕೊಟ್ಟರೆ ಜೀವನದಲ್ಲಿ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಿ :ತೊರವಿ
    In (ರಾಜ್ಯ ) ಜಿಲ್ಲೆ
  • ಬರಪೀಡಿತವೆಂದು ಘೋಷಿಸದಿದ್ದರೆ ಭಾವಿಗಿಳಿದು ಹೋರಾಟ :ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.