ಅಥಣಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಗುಡುಗು
ಉದಯರಶ್ಮಿ ದಿನಪತ್ರಿಕೆ
ಅಥಣಿ: ಸತೀಶ ಜಾರಕಿಹೊಳಿ ಅವರನ್ನು ಇಂತಹ ಇಡಿ ದಾಳಿಗಳ ಮೂಲಕ ರಾಜಕೀಯವಾಗಿ ಕುಗ್ಗಿಸಲು ಸಾಧ್ಯವಿಲ್ಲ ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಬೆದರಿಕೆಗೆ ಜಗ್ಗುವುದಿಲ್ಲ ಬಗ್ಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.
ರಾಜ್ಯದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಮನೆಗಳು ಮತ್ತು ಕಚೇರಿಗಳ ಮೇಲೆ ಇಡಿ ನಡೆಸಿದ ದಾಳಿಯನ್ನು ಖಂಡಿಸಿ ಅಥಣಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ನಾಯಕರನ್ನು ಕಂಡರೆ ಭಯ ಶುರುವಾಗಿದೆ ಸತೀಶ ಜಾರಕಿಹೊಳಿ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ ಅವರನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದಿದ್ದಾಗ ಇಡಿ, ಐಟಿ, ಸಿಬಿಐ ಮೂಲಕ ಹೆದರಿಸುವ ತಂತ್ರ ನಡೆಸಲಾಗುತ್ತಿದೆ ಇಡಿ ನಿಷ್ಪಕ್ಷಪಾತ ಸಂಸ್ಥೆಯಾಗಿದ್ದರೆ ನಿಜವಾಗಿಯೂ ಧೈರ್ಯವಿದ್ದರೆ ಬಿಜೆಪಿಯ ಭ್ರಷ್ಟ ನಾಯಕರ ಮನೆಗಳ ಮೇಲೂ ದಾಳಿ ನಡೆಸಿ ತೋರಿಸಲಿ ತನಿಖೆ ಎಲ್ಲರಿಗೂ ಒಂದೇ ರೀತಿ ಇರಬೇಕು ಎಂದು ಆಗ್ರಹಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಾರ್ಥ ಸಿಂಗೆ ಮಾತನಾಡಿ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಕೈಗೊಂಬೆಯಂತೆ ಬಳಸಿಕೊಳ್ಳುತ್ತಿದೆ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ತನಿಖೆ ಕಾನೂನುಬದ್ಧವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು ಎಂದು ಒತ್ತಾಯಿಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಸವರಾಜ ಬುಟಾಳಿ, ರಮೇಶ ಸಿಂದಗಿ, ಸದಾಶಿವ ಬುಟಾಳಿ, ರಾಜು ಜಮಖಂಡಿಕರ,ಅಸ್ಲಮ್ ನಾಲಬಂದ, ಚಿದಾನಂದ ಮುಖನಿ, ಸಂಜೀವ ಕಾಂಬಳೆ, ಶಿವಾನಂದ ಸೌದಗರ, ವಿಜಯಕುಮಾರ ಬಡಚಿ, ಪೀರಪ್ಪ ಕಾಂಬಳೆ,ಕುಮಾರ ಐದನ್ನವರ, ರೇಖಾ ಪಾಟೀಲ, ನಿಖಿತಾ ಗದಾಡೆ, ಆಶಾ ಪಾಟೀಲ, ಮಹಾದೇವಿ ಹೂಳಿಕಟ್ಟಿ, ಶೋಭಾ ಮಾಳಿ, ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು

