Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಜಿಲ್ಲಾ ಮಟ್ಟದ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಸಾಧನೆ

ಕೌಶಲ್ಯಕ್ಕೆ ಉದ್ಯಮದ ಸ್ಪರ್ಶ; ಮಹಿಳೆಗೆ ಸ್ವಾವಲಂಬನೆಯ ಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೌಶಲ್ಯಕ್ಕೆ ಉದ್ಯಮದ ಸ್ಪರ್ಶ; ಮಹಿಳೆಗೆ ಸ್ವಾವಲಂಬನೆಯ ಶಕ್ತಿ
(ರಾಜ್ಯ ) ಜಿಲ್ಲೆ

ಕೌಶಲ್ಯಕ್ಕೆ ಉದ್ಯಮದ ಸ್ಪರ್ಶ; ಮಹಿಳೆಗೆ ಸ್ವಾವಲಂಬನೆಯ ಶಕ್ತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಪ್ರಶಾಂತ ಕುಲಕರ್ಣಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಹಿಳೆಯರು ತಮ್ಮಲ್ಲಿರುವ ಕೌಶಲ್ಯ ಹಾಗೂ ಪ್ರತಿಭೆಯನ್ನು ಗುರುತಿಸಿಕೊಂಡು ಅದನ್ನು ಉದ್ಯಮವಾಗಿ ಪರಿವರ್ತಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಪ್ರಶಾಂತ ಕುಲಕರ್ಣಿ ಹೇಳಿದರು.
ನಗರದ ಜಿ.ಪಿ. ಪೋರವಾಲ್ ಕಲಾ ವಾಣಿಜ್ಯ ಹಾಗೂ ವಿ ವಿ ಸಾಲಿಮಠ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಮಹಿಳಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ‘ಮಹಿಳಾ ಸಬಲೀಕರಣಕ್ಕೆ ಉದ್ಯಮಶೀಲತೆಯ ಅಗತ್ಯತೆ’ ವಿಷಯದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣವೆಂದರೆ ಪುರುಷರೊಂದಿಗೆ ಸ್ಪರ್ಧಿಸುವುದಲ್ಲ. ಬದಲಾಗಿ ಶಿಕ್ಷಣ, ಜ್ಞಾನ, ಆರ್ಥಿಕ ಸ್ವಾವಲಂಬನೆ ಹಾಗೂ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಹೊಂದುವುದಾಗಿದೆ. ಮಹಿಳೆಯರಲ್ಲಿರುವ ಕೌಶಲ್ಯಕ್ಕೆ ಸೂಕ್ತ ತರಬೇತಿ ಮತ್ತು ಮಾರುಕಟ್ಟೆ ಸಂಪರ್ಕ ದೊರೆತರೆ ಅದೇ ಕೌಶಲ್ಯ ಕುಟುಂಬದ ಆದಾಯದ ಮೂಲವಾಗುವುದರ ಜತೆಗೆ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯವನ್ನೂ ಹೊಂದಿದೆ ಎಂದರು.
ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿ, ಹೈನುಗಾರಿಕೆ, ಆಹಾರ ಸಂಸ್ಕರಣೆ, ಹೊಲಿಗೆ, ಕರಕುಶಲ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅನುಭವ ಮತ್ತು ಕೌಶಲ್ಯ ಹೊಂದಿದ್ದಾರೆ. ಹಪ್ಪಳ, ಉಪ್ಪಿನಕಾಯಿ, ಮಸಾಲೆ ಪದಾರ್ಥ, ರಾಗಿ ಉತ್ಪನ್ನಗಳ ತಯಾರಿಕೆ ಸೇರಿದಂತೆ ಮನೆಯಲ್ಲೇ ನಡೆಯುವ ಚಟುವಟಿಕೆಗಳನ್ನು ಸೂಕ್ತ ರೀತಿಯಲ್ಲಿ ರೂಪಿಸಿ ಮಾರುಕಟ್ಟೆಗೆ ಪರಿಚಯಿಸಿದರೆ ಅವು ಯಶಸ್ವಿ ಉದ್ಯಮಗಳಾಗಬಹುದು. ಇದಕ್ಕೆ ಬಂಡವಾಳದ ಜತೆಗೆ ತರಬೇತಿ, ತಂತ್ರಜ್ಞಾನ, ಮಾರುಕಟ್ಟೆ ಹಾಗೂ ಕುಟುಂಬದ ಪ್ರೋತ್ಸಾಹ ಅಗತ್ಯ ಎಂದು ತಿಳಿಸಿದರು.
ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಸ್ವಸಹಾಯ ಸಂಘಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಸ್ತ್ರೀ ಶಕ್ತಿ, ಸಂಜೀವಿನಿ, ಉದ್ಯೋಗಿನಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು. ಕೇವಲ ಉದ್ಯೋಗ ಪಡೆಯುವುದಕ್ಕಿಂತ ಉದ್ಯೋಗ ಸೃಷ್ಟಿಸುವ ಮನೋಭಾವವನ್ನು ಯುವತಿಯರು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
“ಉದ್ಯಮದ ಮೊದಲ ಲಾಭ ಹಣವಲ್ಲ; ಆತ್ಮವಿಶ್ವಾಸ. ಮಹಿಳೆಯ ಕೈಯಲ್ಲಿರುವ ಕೌಶಲ್ಯ ಉದ್ಯಮವಾಗಲಿ, ಉದ್ಯಮ ಆದಾಯವಾಗಲಿ, ಆದಾಯ ಸ್ವಾವಲಂಬನೆಯಾಗಲಿ” ಎಂದು ಪ್ರಶಾಂತ ಕುಲಕರ್ಣಿ ಹೇಳಿದರು.
ಮಹಿಳಾ ಘಟಕದ ಸಂಯೋಜಕಿ ಪ್ರತಿಕಾ ತಳವಾರ, ಐಕ್ಯೂಎಸಿ ಘಟಕದ ಮುಖ್ಯಸ್ಥ ಬಸವರಾಜ ಮಹಾಜನಶೆಟ್ಟಿ, ಕಾಲೇಜಿನ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಜಿಲ್ಲಾ ಮಟ್ಟದ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಸಾಧನೆ

ಭದ್ರಾ ಕಾಲುವೆಗೆ ಬಾಗಿನ ಅರ್ಪಿಸಿದ ಶಿವಾನಂದ ತಗಡೂರು

ಎಂಬತ್ತರ ದಶಕಕ್ಕೆ ಕರೆದೊಯ್ಯುತ್ತಿರುವ ಎಐ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಮಟ್ಟದ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೌಶಲ್ಯಕ್ಕೆ ಉದ್ಯಮದ ಸ್ಪರ್ಶ; ಮಹಿಳೆಗೆ ಸ್ವಾವಲಂಬನೆಯ ಶಕ್ತಿ
    In (ರಾಜ್ಯ ) ಜಿಲ್ಲೆ
  • ಭದ್ರಾ ಕಾಲುವೆಗೆ ಬಾಗಿನ ಅರ್ಪಿಸಿದ ಶಿವಾನಂದ ತಗಡೂರು
    In (ರಾಜ್ಯ ) ಜಿಲ್ಲೆ
  • ಎಂಬತ್ತರ ದಶಕಕ್ಕೆ ಕರೆದೊಯ್ಯುತ್ತಿರುವ ಎಐ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸಪ್ತಾಹ ಸಮಾರೋಪ: ಸುಗಮ ಸಂಗೀತ
    In (ರಾಜ್ಯ ) ಜಿಲ್ಲೆ
  • ರೇಷ್ಮೆ ಬೆಳೆಯಿಂದ ಎಕರೆಗೆ ₹5 ಲಕ್ಷ ಲಾಭ: ಡಾ.ನಾಯಕ್
    In (ರಾಜ್ಯ ) ಜಿಲ್ಲೆ
  • ಆಲಮೇಲ: ‘ಪೀರ್‌ಗಾಲಿಬ್ ಸಾಹೇಬ್ ಅಗಸಿ’ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆಯ ರಕ್ಷೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 11,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.