ಉದಯರಶ್ಮಿ ದಿನಪತ್ರಿಕೆ
ಗದಗ: ನಗರದ ತೋಂಟದಾರ್ಯ ಮಠದ ಆವರಣದಲ್ಲಿ ಜರುಗಿದ 2814 ನೇ ಶಿವಾನುಭವ ಕಾರ್ಯಕ್ರಮದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ ಆದರ್ಶ ಶಿಕ್ಷಕ ಪ್ರಶಸ್ತಿ-2026 ಪ್ರಧಾನ ಸಮಾರಂಭದಲ್ಲಿ ಪುರಸ್ಕೃತ ಸಾಧಕ ಆಲಮಟ್ಟಿಯ ಪ್ರೌಢಶಾಲಾ ಶಿಕ್ಷಕ ಜಿ.ಎಂ.ಕೋಟ್ಯಾಳ ಅವರಿಗೆ ಸನ್ಮಾನಿಸಿ ಗೌರವಿಸಿದರು.
ನಾಡೋಜ ಡಾ.ಚೆನ್ನವೀರ ಕಣವಿ ಇವರ ತಂದೆಯವರಾದ ಲಿಂ, ಸಕ್ರಪ್ಪ ಕಣವಿ ಸ್ಮರಣಾರ್ಥ ಕೊಡಮಾಡಿದ ಆದರ್ಶ ಶಿಕ್ಷಕ ಪ್ರಶಸ್ತಿ -2026 ಗೆ ಭಾಜನರಾಗಿರುವ ವಿಜಯಪುರ ಜಿಲ್ಲೆಯ ಆಲಮಟ್ಟಿ ರಾವಬಹದ್ದೂರ ಡಾ. ಫ.ಗು.ಹಳಕಟ್ಟಿ (ಆರ್.ಬಿ.ಪಿ.ಜಿ) ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ.ಎಂ.ಕೋಟ್ಯಾಳ ಅವರಿಗೆ ತೋಂಟದ ಡಾ. ಸಿದ್ದರಾಮ ಮಹಾಸ್ವಾಮಿಗಳು ಸೇರಿದಂತೆ ಗಣ್ಯ ಮಹನೀಯರ ಸಮ್ಮುಖದಲ್ಲಿ ಪ್ರಶಸ್ತಿ ಪತ್ರ, ಬಿನ್ನವತ್ತಳೆ ನೀಡಿ ಸನ್ಮಾನಿಸಿದರು.

