Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ

79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ ಏತ ನೀರಾವರಿ ಯೋಜನೆ ದುರುಪಯೋಗ ಆರೋಪ | ಅಕ್ರಮ ಪಂಪ್‌ಸೆಟ್ ತೆರವುಗೊಳಿಸಲು ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಕರ್ನಾಟಕ–ಮಹಾರಾಷ್ಟ್ರ ಗಡಿಭಾಗದ ಕಟ್ಟಕಡೆಯ ಗ್ರಾಮಗಳಾದ ಶಿರಾಡೋಣ ಹಾಗೂ ಹಾಲಹಳ್ಳಿ ಗ್ರಾಮದ ರೈತರಿಗೆ ಚಡಚಣ ಏತ ನೀರಾವರಿ ಯೋಜನೆಯ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ. ಯೋಜನೆಯ ಪೈಪ್‌ಲೈನ್ ಒಡೆದು ಅಕ್ರಮವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಂಡು ನೀರು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಗಳ ರೈತರು ಬುಧವಾರ ಚಡಚಣ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವಿಕರಿಸಿ ಮಾತನಾಡಿದ ಚಡಚಣ ಉಪ ತಹಶೀಲ್ದಾರ ಕೆ ವಾಯ್ ಹೊಸಮನಿ ಶಿರಾಡೋನ ಹಾಗೂ ಹಾಲಹಳ್ಳಿ ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೂಡಲೆ ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮ ಕೈಗೊಳ್ಳುವದಾಗಿ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಎಚ್.ಎಸ್. ಬನಸೋಡೆ, ಚಡಚಣ ಏತ ನೀರಾವರಿ ಯೋಜನೆಯ ನೀರನ್ನು ಅಕ್ರಮವಾಗಿ ಬಳಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅನಧಿಕೃತವಾಗಿ ಅಳವಡಿಸಿರುವ ಪಂಪ್‌ಸೆಟ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು, ಯೋಜನೆಯ ನೀರು ಅರ್ಹ ರೈತರ ಜಮೀನುಗಳಿಗೆ ತಲುಪುವಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ–ಮಹಾರಾಷ್ಟ್ರ ಗಡಿಭಾಗವಾಗಿರುವುದರಿಂದ ಮಹಾರಾಷ್ಟ್ರದ ಕೆಲ ರೈತರು ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಅಕ್ರಮವಾಗಿ ಪಂಪ್‌ಸೆಟ್ ಅಳವಡಿಸಿಕೊಂಡು ತಮ್ಮ ಜಮೀನುಗಳಿಗೆ ನೀರು ಹರಿಸಿಕೊಳ್ಳುತ್ತಿದ್ದಾರೆ. ಇದರಿಂದ ಶಿರಾಡೋಣ ಹಾಗೂ ಹಾಲಹಳ್ಳಿ ಗ್ರಾಮದ ರೈತರಿಗೆ ನೀರು ತಲುಪುತ್ತಿಲ್ಲ ಎಂದು ಅವರು ದೂರಿದರು.
ರೈತರು ಈಗಾಗಲೇ ಜಿಲ್ಲಾಧಿಕಾರಿಗಳು, ಶಾಸಕರು ಹಾಗೂ ಸಚಿವರ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರೂ, ಸಮಸ್ಯೆ ಬಗೆಹರಿದಿಲ್ಲ. ನೀರಿಲ್ಲದೆ ರೈತರ ಪರಿಸ್ಥಿತಿ ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿದೆ. ಈ ಹಿನ್ನೆಲೆಯಲ್ಲಿ ಶಿರಾಡೋಣ ಗ್ರಾಮದ ರೈತರು ಸ್ವತಃ ಚಡಚಣದಿಂದ ಶಿರಾಡೋಣ ಗ್ರಾಮದ ಗಡಿಭಾಗದವರೆಗೆ ನೀರಾವರಿ ಯೋಜನೆಯ ಪೈಪ್‌ಲೈನ್ ಪರಿಶೀಲನೆ ನಡೆಸಿ, ಅಕ್ರಮ ಬಳಕೆಯ ಕುರಿತು ಜಿಪಿಎಸ್ ದಾಖಲೆ, ಛಾಯಾಚಿತ್ರ ಹಾಗೂ ವಿಡಿಯೊಗಳನ್ನು ಸಂಗ್ರಹಿಸಿರುವುದಾಗಿ ತಿಳಿಸಿದರು.
ಇದರೊಂದಿಗೆ ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತದ ರಾಮಪುರ ವಿಭಾಗದ ವ್ಯಾಪ್ತಿಗೆ ಬರುವ ಚಡಚಣ ಏತ ನೀರಾವರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ನೀರು ಪೂರೈಕೆಗೆ ವೇಳಾಪಟ್ಟಿ ನಿಗದಿಪಡಿಸಬೇಕು ಎಂದು ರೈತರು ಒತ್ತಾಯಿಸಿದರು.
ಅಧಿಕಾರಿಗಳು ಮನವಿಗೆ ಸ್ಪಂದಿಸಿ ಸಮಸ್ಯೆ ಬಗೆಹರಿಸದಿದ್ದರೆ ಶಿರಾಡೋಣ ಹಾಗೂ ಹಾಲಹಳ್ಳಿ ಗ್ರಾಮದ ರೈತರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವಿಶ್ವನಾಥ ಬಿರಾದಾರ, ರವಿಕಾಂತ ಪೂಜಾರಿ, ಸಂತೋಷ ಖರಾತ, ಪೀರಪ್ಪ ಖರಾತ, ನೆನೆಪ್ಪ ಬಿರಾದಾರ, ಶ್ರೀಶೈಲ ಖರಾತ, ಶಿವರಾಜ, ಸಂತೋಷ ಪೂಜಾರಿ ಸೇರಿದಂತೆ ಶಿರಾಡೋಣ ಹಾಗೂ ಹಾಲಹಳ್ಳಿ ಗ್ರಾಮದ ರೈತರು ಉಪಸ್ಥಿತರಿದ್ದರು.

“ಚಡಚಣ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೊಷ್ಟಿಯಲ್ಲಿ ಮಾತನಾಡಿದ ಅವರು ರೈತರ ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸುವೆ.”

– ರಮೇಶ ಜಿಗಜಿಣಗಿ
ಸಂಸದರು

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ

79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ

ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ
    In (ರಾಜ್ಯ ) ಜಿಲ್ಲೆ
  • 79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ
    In (ರಾಜ್ಯ ) ಜಿಲ್ಲೆ
  • ಮನುಷ್ಯನನ್ನು ಮನುಷ್ಯನಾಗಿಸುವ ಸಂಸ್ಕಾರ
    In ವಿಶೇಷ ಲೇಖನ
  • ಮಗುವನ್ನು ಚಿವುಟಿ ತೊಟ್ಟಿಲನ್ನೂ ತೂಗಿ
    In ವಿಶೇಷ ಲೇಖನ
  • ಅನಾವೃಷ್ಟಿ ನಿವಾರಣೆಗೆ ಫ್ರಿಜ್‌ನಲ್ಲೇ ಗಣೇಶ ಪ್ರತಿಷ್ಠಾಪನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026
    In ದಿನಪತ್ರಿಕೆ
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.