Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ

79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ
(ರಾಜ್ಯ ) ಜಿಲ್ಲೆ

ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣದ ಪ್ರಮುಖ ಬೀದಿಗಳಲ್ಲಿ ಪೊಲೀಸರಿಂದ ಜಾಗೃತಿ ಮೆರವಣಿಗೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಯನ್ನು ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸುವಂತೆ ಮತ್ತು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಚಡಚಣ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಸಿಬ್ಬಂದಿಯಿಂದ ಗುರುವಾರ ಜಾಗೃತಿ ಮೆರವಣಿಗೆ ನಡೆಸಲಾಯಿತು.
ಚಡಚಣ ಸಿಪಿಐ ಪರಶುರಾಮ ಮನಗೂಳಿ ಹಾಗೂ ಪಿಎಸ್‌ಐ ಅರವಿಂದ ಅಂಗಡಿ ಅವರ ನೇತೃತ್ವದಲ್ಲಿ ನಡೆದ ಜಾಗೃತಿ ಮೆರವಣಿಗೆಯಲ್ಲಿ ಗಣೇಶೋತ್ಸವ ಸಮಿತಿಗಳ ಮುಖಂಡರು ಹಾಗೂ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದರು.
ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಧ್ವನಿವರ್ಧಕಗಳನ್ನು ಬಳಸಬಾರದು. ಡಿಜೆಗಳಲ್ಲಿ ಇಂಪಾದ ಹಾಗೂ ಮನರಂಜನಾತ್ಮಕ ಹಾಡುಗಳನ್ನು ಮಾತ್ರ ಪ್ರಸಾರ ಮಾಡಬೇಕು. ಯಾವುದೇ ಕೋಮು ಪ್ರಚೋದಕ, ಅಶಾಂತಿಗೆ ಕಾರಣವಾಗುವ ಅಥವಾ ಭಾವನೆಗಳಿಗೆ ಧಕ್ಕೆ ತರುವ ಹಾಡುಗಳನ್ನು ಪ್ರಸಾರ ಮಾಡಬಾರದು ಎಂದು ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಪೊಲೀಸರು ಸ್ಪಷ್ಟ ಎಚ್ಚರಿಕೆ ನೀಡಿದರು.
ನಿಯಮಗಳನ್ನು ಉಲ್ಲಂಘಿಸಿ ಡಿಜೆ ಹಾಗೂ ಧ್ವನಿವರ್ಧಕಗಳನ್ನು ಬಳಸಿದಲ್ಲಿ ಡಿಜೆ ಮತ್ತು ಸೌಂಡ್ ಸಿಸ್ಟಮ್‌ಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಪರಶುರಾಮ ಮನಗೂಳಿ ಹಾಗೂ ಪಿಎಸ್‌ಐ ಅರವಿಂದ ಅಂಗಡಿ ಎಚ್ಚರಿಸಿದರು.
ಪಟ್ಟಣದ ವಾರ್ಡ್ ನಂ.7ರಲ್ಲಿ 202020 ಅಡಿ ವಿಸ್ತೀರ್ಣದ ಗಣೇಶ ವಿಸರ್ಜನಾ ಹೊಂಡವನ್ನು ನಿರ್ಮಿಸಲಾಗಿದೆ. ಸಾರ್ವಜನಿಕರು ಹಾಗೂ ಗಣೇಶೋತ್ಸವ ಸಮಿತಿಗಳು ಗಣೇಶ ಮೂರ್ತಿಗಳ ವಿಸರ್ಜನೆಯನ್ನು ಇದೇ ಹೊಂಡದಲ್ಲಿ ನಡೆಸುವಂತೆ ಪೊಲೀಸರು ಸೂಚಿಸಿದರು.
ಗಣೇಶೋತ್ಸವವು ಎಲ್ಲರ ಹಬ್ಬವಾಗಿದ್ದು, ಪರಸ್ಪರ ಸಹೋದರತ್ವ, ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಂಡು ವಿಸರ್ಜನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪೊಲೀಸರು ಮನವಿ ಮಾಡಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ

79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ

ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ
    In (ರಾಜ್ಯ ) ಜಿಲ್ಲೆ
  • 79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ
    In (ರಾಜ್ಯ ) ಜಿಲ್ಲೆ
  • ಮನುಷ್ಯನನ್ನು ಮನುಷ್ಯನಾಗಿಸುವ ಸಂಸ್ಕಾರ
    In ವಿಶೇಷ ಲೇಖನ
  • ಮಗುವನ್ನು ಚಿವುಟಿ ತೊಟ್ಟಿಲನ್ನೂ ತೂಗಿ
    In ವಿಶೇಷ ಲೇಖನ
  • ಅನಾವೃಷ್ಟಿ ನಿವಾರಣೆಗೆ ಫ್ರಿಜ್‌ನಲ್ಲೇ ಗಣೇಶ ಪ್ರತಿಷ್ಠಾಪನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026
    In ದಿನಪತ್ರಿಕೆ
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.