ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಸಾಲ ಮತ್ತು ಸೌಲಭ್ಯ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶ್ರೀ ಶಹಾಜಿರಾಜೇ ಸಮೃದ್ಧಿ ಯೋಜನೆಯ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಸಹಾಯಧನ ಜೀಜಾವು ಜಲಭಾಗ್ಯ-ಗಂಗಾ ಕಲ್ಯಾಣ ಯೋಜನೆ ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ -ಹೊಸದು ಮತ್ತು ನವೀಕರಣ, ಮರಾಠ ಮಿಲಿಟರಿ ಹೋಟೆಲ್, ಸ್ವಾವಲಂಬಿ ಸಾರಥಿ ಯೋಜನೆ, ರಾಜ ಶ್ರೀಶಾಹು ಮಹಾರಾಜ ವಿದೇಶಿ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣಾ ಯೋಜನೆಗಳಿಗೆ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು ಹಾಗೂ ಪ್ರವರ್ಗ-೩ಬಿ (೨ಎ ನಿಂದ ೨ಎಫ್ವರೆಗೆ) ಸಮುದಾಯಕ್ಕೆ ಸೇರಿರಬೇಕು. ೧೮ ರಿಂದ ೫೫ ವರ್ಷಗಳ ಒಳಗಿರಬೇಕು
ಕುಟುಂಬದ ವಾರ್ಷಿಕ ಆದಾಯ ಮಿತಿ ಗ್ರಾಮಾಂತರ ಪ್ರದೇಶದವರಿಗೆ ೯೮,೦೦೦ ರೂ. ಹಾಗೂ ನಗರ ಪ್ರದೇಶಕ್ಕೆ ೧,೨೦,೦೦೦ ರೂ. ಒಳಗಿರಬೇಕು.
ಅರ್ಜಿದಾರರ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯು ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಅರ್ಜಿ ಸಲ್ಲಿಕೆಗೆ ಅ. ೩ ಕೊನೆಯ ದಿನವಾಗಿದೆ.
ಸೇವಾ ಸಿಂಧು ಪೋರ್ಟಲ್, ಬೆಂಗಳೂರು-ಒನ್, ಕರ್ನಾಟಕ-ಒನ್ ಅಥವಾ ಅಟಲ್-ಜಿ ಜನಸ್ನೇಹಿ ಕೇಂದ್ರಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ: ನಿಗಮದ ವೆಬ್ಸೈಟ್ ಞmಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: ೦೮೦-೨೯೯೦೩೯೯೪ ಹಾಗೂ ೮೮೬೭೫೩೭೭೯೯) ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
