ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಸೆ.೨೦ ರಂದು ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಹಾಲ್ನಲ್ಲಿ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರಾಟೆ ಶಿಕ್ಷಕರ ಸಂಘದ ವಕ್ತಾರ ಶಿವಕುಮಾರ ಶಾರದಳ್ಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಭಾವೈಕ್ಯತಾ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಲಿದ್ದು, ಶಾಸಕ ಸಿ.ಎಸ್. ನಾಡಗೌಡ ಉದ್ಘಾಟಿಸಲಿದ್ದಾರೆ. ಸಿದ್ಧಸಿರಿ ಬ್ಯಾಂಕ್ ನ ರಾಜ್ಯ ಉಪಾಧ್ಯಕ್ಷರೂ ಆದ ಜಿಲ್ಲಾ ಪಂಚಾತಯ್ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಿ.ಎ.ಎಸ್.ಇಂಟರ್ನ್ಯಾಷನಲ್ ಸ್ಕೂಲ್ ಸಂಸ್ಥಾಪಕ ಶಿವನಗೌಡ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಪಿಎಸ್ಐ ವಿಜಯಕುಮಾರ ತಳವಾರ, ಕರ್ನಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಸತೀಶ ಓಸ್ವಾಲ್, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಸೇರಿದಂತೆ ವಿಶೇಶ ಅತಿಥಿಗಳಾಗಿ ಆಗಮಿಸಲಿರುವದಾಗಿ ಅವರು ತಿಳಿಸಿದ್ದಾರೆ.
ಕ್ರೀಡಾಭಿಮಾನಿಗಳು, ಮುಖಂಡರು ಆಗಮಿಸಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸುವಂತೆ ಶಾರದಳ್ಳಿ ಕೋರಿದ್ದಾರೆ.

