Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026

ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ

ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರವೂ ಇರಲಿ :ಶಾಸಕ ರಾಜುಗೌಡ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರವೂ ಇರಲಿ :ಶಾಸಕ ರಾಜುಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉತ್ನಾಳ ಗ್ರಾಮದಲ್ಲಿ ಶಾಲೆಯ ಮುಖ್ಯದ್ವಾರ ಹಾಗೂ ಶಾಲಾ ಕೊಠಡಿ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: (ಬಸವನ ಬಾಗೇವಾಡಿ–ಉತ್ನಾಳ) ಇಂದಿನ ಮಕ್ಕಳಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದ್ದು ಕೇವಲ ಶಾಲಾ ಪಠ್ಯದ ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಮತ್ತು ಸ್ವಾಸ್ಥ್ಯ ಸಾಧ್ಯವಿಲ್ಲ ಎಂದು ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಅಭಿಪ್ರಾಯಪಟ್ಟರು.
ಅವರು ಬಸವನ ಬಾಗೇವಾಡಿಯ ಉತ್ನಾಳ ಗ್ರಾಮದಲ್ಲಿ ನಿನ್ನೆ ಜರುಗಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯದ್ವಾರ ಮತ್ತು ನೂತನ ಕೊಠಡಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಶಾಲಾ ಶಿಕ್ಷಣವು ಜೀವನೋಪಾಯಕ್ಕೆ ಆಧಾರವಾದರೆ ಸಂಸ್ಕಾರದ ಶಿಕ್ಷಣವು ಸಮಾಜಮುಖಿ ಬದುಕಿಗೆ ನೆರವಾಗುತ್ತದೆ ಎಂದರು.
ಲಕ್ಷೆೋಪಲಕ್ಷ ರೂ. ತಮ್ಮ ದುಡಿಮೆಯ ಹಣವನ್ನು ಖರ್ಚು ಮಾಡಿ ತಾವು ಕಲಿತ ಉತ್ನಾಳದ ಶಾಲೆಯ ಮುಖ್ಯದ್ವಾರ ನಿರ್ಮಾಣಕ್ಕೆ ನೆರವಾದ ವಿಜಯಪುರದ ಪ್ರತಿಷ್ಠಿತ ಎಕ್ಸಲಂಟ್ ಶಿಕ್ಷಣ ಸಂಸ್ಥೆಯ ಚೇರ‍್ಮನ್ ಬಸವರಾಜ ಅವರ ಸೇವೆಯನ್ನು ಶ್ಲಾಘಿಸಿದರು.
ಮುಖ್ಯ ಅತಿಥಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಈ ದೇಶದ ಭವಿಷ್ಯ ಶಾಲಾ ಕೊಠಡಿಗಳಲ್ಲಿ ನಿರ್ಮಾಣವಾಗುತ್ತದೆ. ಶಾಲೆಯು ಜೀವಂತ ದೇವರುಗಳ ದೇವಾಲಯವಾಗಿದ್ದು ಇಂಥ ದೇಗುಲಗಳಲ್ಲಿ ಮಾತ್ರ ಮೌಲ್ಯಯುತ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಇತ್ತೀಚಿಗೆ ದೈವಾಧೀನರಾದ ಸಾದ್ವಿ ನೀಲಮ್ಮ ಶಾಂತಪ್ಪ ಕೌಲಗಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಈ ಶಾಲೆಯ ಮುಖ್ಯ ದ್ವಾರ ನಿರ್ಮಾಣದ ರೂವಾರಿ ಶ್ರೀ ಬಸವರಾಜ ಕೌಲಗಿ ಅಂಥವರೂ ಕೂಡಾ ಉತ್ನಾಳದ ಈ ಪುಟ್ಟ ಊರಿನ ಸರಕಾರಿ ಶಾಲೆಯಲ್ಲೇ ಓದಿದ ಜೀವಂತ ದೇವರಾಗಿದ್ದಾರೆ ಎಂದರು.
ಶಾಲಾ ಕೊಠಡಿ ಉದ್ಘಾಟನೆ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಾ ಕಲಬುರ್ಗಿ, ಪ್ರೌಢಶಾಲಾ ಶಿಕ್ಷಕ, ವಾಗ್ಮಿ ಅಶೋಕ ಹಂಚಲಿ ಮಾತನಾಡಿದರು.
ಸಮಾರಂಭದಲ್ಲಿ ಕೊಡುಗೈ ದಾನಿ ಬಸವರಾಜ ಕೌಲಗಿ ಅವರು ಉತ್ನಾಳದ ಸರಕಾರಿ ಶಾಲೆಯನ್ನು ದತ್ತು ಪಡೆಯುವ ವಾಗ್ದಾನ ಮಾಡಿದರು. ಎಲ್ಲಾ ಪಾಲಕರು ತಪ್ಪದೇ ತಮ್ಮ ಮಕ್ಕಳಿಗೆ ಅಕ್ಷರ ಸಂಸ್ಕಾರ ನೀಡಲು ಮರೆಯಬಾರದು ಎಂದರು.
ಸಮಾರಂಭದ ವೇದಿಕೆಯಲ್ಲಿ ಎಕ್ಸಲಂಟ್ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ರಾಜಶೇಖರ ಕೌಲಗಿ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಬಿ. ಬಾರೀಕಾಯಿ, ಶಿಕ್ಷಣ ಸಂಯೋಜಕ ಷಣ್ಮುಖ ಅಂಬಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಸಮಾರಂಭದ ಸಾನಿದ್ಯವನ್ನು ನಿವೃತ್ತ ಮುಖ್ಯ ಶಿಕ್ಷಕ ವೇ.ಚಂದ್ರಶೇಖರಯ್ಯ ಹಿರೇಮಠ, ಉತ್ನಾಳ ಕೋರಿ ಮಠದ ಹಣಮಂತ ಮಹಾರಾಜ, ಲಕ್ಷಿದೇವಿ ಆರಾಧಕ ವೇ.ಸಂಗಮೇಶ ಹೀರೆಮಠ ವಹಿಸಿದ್ದರು. ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಂ.ಸಿ ಯ ಮಹಾಂತೇಶ ಹತ್ತರಕಿಹಾಳ ಅತಿಥಿ-ಅಭ್ಯಾಗತರನ್ನು ಸನ್ಮಾನಿಸಿ ಗೌರವಿಸಿದರು. ಮುಖ್ಯ ಶಿಕ್ಷಕ ಬಿ. ಬಿ. ಬಾಗೇವಾಡಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರು, ಎಸ್.ಡಿ.ಎಂ.ಸಿ ಯ ಉಪಾಧ್ಯಕ್ಷರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026

ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ

ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ

ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಇಲ್ಲವೇ ಕ್ರಮ ಎದುರಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026
    In ದಿನಪತ್ರಿಕೆ
  • ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ
    In (ರಾಜ್ಯ ) ಜಿಲ್ಲೆ
  • ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ
    In (ರಾಜ್ಯ ) ಜಿಲ್ಲೆ
  • ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಇಲ್ಲವೇ ಕ್ರಮ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಅಭಿವೃದ್ಧಿಗೆ ವಿಶೇಷ ಒತ್ತು :ಶಾಸಕ ನಾಡಗೌಡ
    In (ರಾಜ್ಯ ) ಜಿಲ್ಲೆ
  • ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರವೂ ಇರಲಿ :ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಎಂ ಎನ್ ವಾಲಿ ಒಬ್ಬ ಅದಮ್ಯ ಚೇತನ :ಡಾ.ಪಡಶೆಟ್ಟಿ
    In (ರಾಜ್ಯ ) ಜಿಲ್ಲೆ
  • ಸೆ.22 ರಿಂದ ಅನಿರ್ಧಿಷ್ಟಾವಧಿ ಮುಷ್ಕರ :ಭೈರಾಮಡಿ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಜಾಗೃತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.