Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ವ್ಯಾಪಿಸಿದ ಕಸದ ರಾಶಿಗೆ ಮುಕ್ತಿ ಯಾವಾಗ?
(ರಾಜ್ಯ ) ಜಿಲ್ಲೆ

ಸಿಂದಗಿ ವ್ಯಾಪಿಸಿದ ಕಸದ ರಾಶಿಗೆ ಮುಕ್ತಿ ಯಾವಾಗ?

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗಾಢನಿದ್ರೆಯಲ್ಲಿ ಪುರಸಭೆ | ಚರಂಡಿ ನೀರಿನ ದುರ್ವಾಸನೆ | ಡೇಂಗ್ಯೂ ಪ್ರಕರಣ ದಾಖಲು

  *– ರಶ್ಮಿ ನೂಲಾನವರ*
ಸಿಂದಗಿ: ಪಟ್ಟಣವನ್ನು ಅಭಿವೃದ್ದಿ ಮಾಡಬೇಕಿರುವ ಪುರಸಭೆಯು ಗಾಢನಿದ್ರೆಯಲ್ಲಿದೆ. ಎಚ್ಚೆತ್ತುಕೊಂಡು ಕಾರ್ಯ ಮಾಡಬೇಕಿರುವ ಅಧಿಕಾರಿಗಳು ನಿಷ್ಕ್ರೀಯ. ಎಲ್ಲದರ ಮಧ್ಯದಲ್ಲಿ ಸಿಂದಗಿ ಪಟ್ಟಮದ ಹಲವೆಡೆ ಚರಂಡಿ ನೀರು ರಸ್ತೆಗೆ ಬರುತ್ತಿದೆ. ನಿತ್ಯ ಆರೋಗ್ಯದ ಸಮಸ್ಯೆ ಹಾಗೂ ನಾನಾ ಕಾಯಿಲೆಗಳ ಆಗಮದಂತಿರುವ ಚರಂಡಿಗಳ ಕರ್ಮಕಥೆ ಇದಾಗಿದೆ.
     ಪಟ್ಟಣದ ಬಸ್ ನಿಲ್ದಾಣ ಸುತ್ತಮುತ್ತ, ವಿವೇಕಾನಂದ ವೃತ್ತ ಬಳಿ, ವಿದ್ಯಾನಗರ ವಾಟರ್ ಟ್ಯಾಂಕ ಹಿಂಬದಿ, ಹಳೆ ತಹಸಿಲ್ದಾರ ಕಾರ್ಯಾಲಯದ ಸುತ್ತಲೂ, ಸ್ತ್ರೀಶಕ್ತಿ ಭವನದ ಹಿಂಭಾಗ, ವಿದ್ಯಾನಗರ ಹಿಂಭಾಗದ ಕೊಳಚೆ ಪ್ರದೇಶ, ಸೋಂಪುರ ರಸ್ತೆ ಸೇರಿದಂತೆ ವಿವಿಧ ಕಡೆಗಳಲ್ಲಿ ಚರಂಡಿಗಳ ನೀರಿನಿಂದ ದುರ್ವಾಸನೆ ಬೀರುತ್ತಿವೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವ ಸ್ಥಿತಿ ಹೇಳತೀರದಾಗಿದೆ.
ಕನಕದಾಸ ಬಡಾವಣೆಯಿಂದ ಮೋರಟಗಿ ನಾಕಾ:
ಪಟ್ಟಣದ ಕನಕದಾಸ ಬಡಾವಣೆಯಿಂದ ಮೋರಟಗಿ ನಾಕಾವರೆಗೆ ದೊಡ್ಡ ಚರಂಡಿಯು ಡೋಹರ ಕಕ್ಕಯ್ಯ ವೃತ್ತಕ್ಕೆ ಸೇರುತ್ತದೆ. ಆದರೆ ಮಾರ್ಗ ಮಧ್ಯದಲ್ಲಿ ಚರಂಡಿ ಒಳಗೆ ಪ್ಲಾಸ್ಟಿಕ್ ಮತ್ತು ಕಸದ ರಾಶಿ ತುಂಬುಕೊಂಡಿದ್ದರೂ ಪುರಸಭೆ ಮಾತ್ರ ತೆಗೆಯದೆ ಹಾಗೇ ಬಿಟ್ಟಿದೆ. ಇದರ ಪಕ್ಕದಲ್ಲಿಯೇ ಸರ್ಕಾರಿ ಶಾಲೆ, ಮಸೀದಿ, ಬಾವಿ, ಅಂಗನವಾಡಿ ಕೇಂದ್ರ, ಮಹಿಳಾ ಸಾರ್ವಜನಿಕ ಶೌಚಾಲಯ ಹಾಗೂ ಕೊಳವೆ ಬಾವಿಗಳಿವೆ. ಮತ್ತು ಸಾರ್ವಜನಿಕರು ಮೂಗು ಮುಚ್ಚಿಕೊಂಡೆ ನಿತ್ಯ ಸಂಚಾರ ಮಾಡುತ್ತಿರುವುದು ಸಾಮಾನ್ಯವಾಗಿದೆ.
ಡೇಂಗ್ಯೂ ಪ್ರಕರಣ: ಚರಂಡಿಗಳ ನೀರು ಮತ್ತು ವಿಪರೀತವಾದ ಕೊಳಚೆಯಿಂದ ಸಿಂದಗಿ ಪಟ್ಟಣ ಸೇರಿದಂತೆ ತಾಲೂಕಿನ ಅನೇಕ ಹಳ್ಳಿಗಳಲ್ಲಿ ಡೇಂಗ್ಯೂ ಪ್ರಕರಣಗಳು ದಾಖಲಾಗಿವೆ. ಹಿಂತಹ ಅನೇಕ ಪ್ರಕರಣಗಳು ನಡೆಯುತ್ತಿದ್ದರು ಮುನ್ನೇಚ್ಚರಿಕೆಯ ಕ್ರಮಗಳು ಮಾತ್ರ ಜಾರಿಯಾಗುತ್ತಿಲ್ಲ. ತಾಲೂಕಿನಲ್ಲಿ ಇಲ್ಲಿಯವರೆಗೂ ೩೮ ಡೇಂಗ್ಯೂ ಪ್ರಕರಣಗಳು ದಾಖಲಾಗಿವೆ. ಅದರಿಂದ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂಬುದು ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.
ಕಸದ ರಾಶಿ: ಭಾಗಶಃ ಪಟ್ಟಣವು ಕಸ-ಕೊಚ್ಚೆಯಿಂದಾವೃತಗೊಂಡಿದ್ದರಿಂದ ಇಲ್ಲಿ ಹಂದಿಗಳ ಹಾವಳಿಯೂ ವಿಪರೀತವಾಗಿದೆ. ಕಸದ ರಾಶಿಯನ್ನು ಹಂದಿಗಳು ಕೆದರಿ ರಸ್ತೆಯುದ್ದಕ್ಕೂ ವ್ಯಾಪಿಸುವುದು ಇಲ್ಲಿ ಮಾಮೂಲು ಸಂಗತಿ. ಪ್ರತಿದಿನವು ಅಂದಾಜು ೪೦-೫೦ ಟನ್ ಘನತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಇದನ್ನು ಸಮರ್ಪಕವಾಗಿ ಸಾಗಿಸುವಲ್ಲಿ ಪುರಸಭೆ ಅಧಿಕಾರಿಗಳು ವಿಫಲರಾಗುತ್ತಿದ್ದು, ಇದರಿಂದ ದಿನೇ ದಿನೇ ಕಸದ ರಾಶಿಯು ಪಟ್ಟಣವನ್ನು ಆಕ್ರಮಿಸಿಕೊಳ್ಳುತ್ತಿದೆ.
ನೀರಿನ ಸಂಸ್ಕರಣ ಘಟಕದ ಹಿಂಬದಿ ಕಸದ ರಾಶಿ:
ವಿದ್ಯಾನಗರ ೨ನೆಯ ಕ್ರಾಸ್ ವಾಟರ್ ಟ್ಯಾಂಕ್ ಹಿಂಬಾಗದ ಪ್ರದೇಶದ ಕಸದ ರಾಶಿಯಿಂದ ಕೂಡಿಕೊಂಡಿದೆ. ಅಲ್ಲಿರುವ ಕಸ ಗಾಳಿ ಬಿಟ್ಟಾಗ ಹಾರಿ ಹೋಗಿ ನೀರು ಶುದ್ದಿಕರಿಸುವ ಪ್ರದೇಶದಲ್ಲಿ ಬೀಳುತ್ತದೆ. ಅದೇ ನೀರು ನಮಗೆ ಸರಬರಾಜು ಆಗುತ್ತದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಷ್ಟಾದರೂ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.