Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಅನ್ನದ ಭಾಷೆ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಕನ್ನಡ ಅನ್ನದ ಭಾಷೆ :ಶಾಸಕ ಮನಗೂಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಕನ್ನಡ ನಾಡಿನಲ್ಲಿ ಕನ್ನಡವೇ ಪ್ರಥಮ, ಪ್ರಧಾನ, ಸಾರ್ವಭೌಮವಾಗಬೇಕು. ಉಳಿದ ಅನ್ಯ ಭಾಷೆಗಳು ಕನ್ನಡ ನೆಲದಲ್ಲಿ ಸೇವಕರಾಗಿ ಕೆಲಸ ಮಾಡಬೇಕು ಎಂದು ಎಚ್.ಜಿ.ಪಪೂ ಮಹಾವಿದ್ಯಾಲಯದ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.
ಬುಧವಾರದಂದು ನಗರದ ಬಸವ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದಲ್ಲಿ ಉಪನ್ಯಾಸ ನೀಡಿದ ಅವರು, ಕನ್ನಡ ನಾಡನ್ನು ಕನ್ನಡ ನಾಡು, ಶ್ರೀಗಂಧದ ನಾಡು, ಕರುನಾಡ ನಾಡು, ಸಾಧು-ಸಂತರು, ದಾಸರು, ಶಿವಶರಣರು ಹಾಗೂ ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ. ಕನ್ನಡ ಅನ್ನದ ಭಾಷೆ, ಜೀವದ ಭಾಷೆ, ಪವಿತ್ರ ಭಾಷೆ, ಹೃದಯ ಭಾಷೆಯಾಗಿ ನಾವು ಕಾಣಬೇಕಾಗಿದೆ. ಏಕೆಂದರೆ ಆಂಗ್ಲದಲ್ಲಿ ಅನೇಕ ತಪ್ಪುಗಳನ್ನು ಕಾಣಬಹುದು ಆದರೆ ಕನ್ನಡ ಭಾಷೆ ಅಥವಾ ಪದದಲ್ಲಿ ಯಾವುದೇ ಒಂದು ತಪ್ಪನ್ನು ಕಾಣಲು ಸಾಧ್ಯವಿಲ್ಲ. ಕಾರಣ ಕನ್ನಡದ ಪ್ರತಿಯೊಂದ ಅಕ್ಷರ ಸಂಶೋಧನೆಯಿಂದ ಮೂಡಿ ಬಂದಿರುವ ಪದಗಳು. ನಾವೆಲ್ಲರೂ ನವೆಂಬರ್ ಕನ್ನಡಿಗರಾಗದೇ ನಂ: ೦೧ ಕನ್ನಡಿಗರಾಗೋಣ. ನಂ:೦೧ ಕನ್ನಡಿಗರಾದರೇ ಸಾವಿರ ಸಾವಿರ ವರ್ಷಗಳ ಸುದೀರ್ಘ ಇತಿಹಾಸವನ್ನು ನಾವೆಲ್ಲ ಕಾಣುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ ಶಾಸಕ ಅಶೋಕ ಮನಗೂಳಿ ಮಾತನಾಡಿ, ಸ್ವತಂತ್ರ ಪೂರ್ವ ಮತ್ತು ಸ್ವತಂತ್ರದ ನಂತರ ಕರ್ನಾಟಕ ರಾಜ್ಯವನ್ನು ಏಕೀಕರಣ ಮಾಡಬೇಕು. ಈ ಅಖಂಡ ಕರ್ನಾಟಕವನ್ನು ಒಗ್ಗೂಡಿಸಿ ಈ ನೆಲದ ಮತ್ತು ಜಲದ ಅಭಿಮಾನವನ್ನು ನಮ್ಮ ಜನತೆಗೆ ವ್ಯಕ್ತ ಮಾಡಬೇಕೆನ್ನುವ ನಮ್ಮ ಹಿರಿಯರು ಮಾಡಿದ ತ್ಯಾಗ, ಬಲಿದಾನದ ದಿನವನ್ನು ಇಂದು ನಾವು ಕರ್ನಾಟಕ ರಾಜ್ಯೋತ್ಸವೆಂದು ಆಚರಣೆ ಮಾಡುತ್ತಿದ್ದೇವೆ. ಮಾತನಾಡುವ ಭಾಷೆ ಕನ್ನಡ, ಅನ್ನ ನೀಡುವ ಭಾಷೆ ಕನ್ನಡ. ಪ್ರತಿ ಮನೆ ಮನಗಳಲ್ಲಿ ಕನ್ನಡ ರಾರಾಜಿಸಲಿ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಪ್ರಸ್ತಾವಿಕವಾಗಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ರಾಜಶೇಖರ ಕೂಚಬಾಳ ಸ್ವಾಗತಿಸಿದರು. ರವಿ ಗೋಲಾ ನಿರೂಪಿಸಿದರು.
ವೇದಿಕೆಯ ಮೇಲೆ ಸಿಪಿಐ ಡಿ.ಹುಲುಗಪ್ಪ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ, ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನವರ ಇದ್ದರು.
ಇದೇ ಸಂದರ್ಭದಲ್ಲಿ ಆಯ್.ಎ.ಮಕಂದಾರ, ಮಾಳು ಹೊಸುರ, ಪಿಎಸ್‌ಐ ಭೀಮಪ್ಪ ರಬಕವಿ, ಅಶೋಕ ಅಲ್ಲಾಪೂರ, ಆ.ಎಮ್.ನದಾಫ್, ಎ.ಆರ್. ಹೆಗ್ಗನದೊಡ್ಡಿ, ಸದ್ದಾಂ ಆಲಗೂರ, ಅಶೋಕ ಸುಲ್ಪಿ, ಸೇರಿದಂತೆ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಶಿಕ್ಷಕರು, ನಿವೃತ್ತ ಸೈನಿಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.