Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಎಲ್‌ಡಿ ಸೌಹಾರ್ದ ಉತ್ತರ ಕರ್ನಾಟಕದಾದ್ಯಂತ ವಿಸ್ತರಣೆ
(ರಾಜ್ಯ ) ಜಿಲ್ಲೆ

ಬಿಎಲ್‌ಡಿ ಸೌಹಾರ್ದ ಉತ್ತರ ಕರ್ನಾಟಕದಾದ್ಯಂತ ವಿಸ್ತರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿಯಲ್ಲಿ ಬಿಎಲ್‌ಡಿ ಸೌಹಾರ್ದ ಶಾಖೆ ಉದ್ಘಾಟಿಸಿ ಎಂಎಲ್‌ಸಿ ಸುನೀಲಗೌಡ ಸ್ಪಷ್ಠನೆ

ಬಸವನಬಾಗೇವಾಡಿ: ಕಳೆದ ೨೦೨೨, ಅಕ್ಬೋಬರ್ ೭ ರಂದು ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರಿಂದ ಉದ್ಘಾಟನೆಗೊಂಡ ಬಿಜಾಪುರ ಲಿಂಗಾಯತ ಡೆವಲಪ್‌ಮೆಂಟ್ ಸೌಹಾರ್ದ ಸಹಕಾರಿ ಸಂಘವು ಆರು ತಿಂಗಳಲ್ಲಿಯೇ ಜನರ ವಿಶ್ವಾಸ, ಸಹಕಾರದಿಂದಾಗಿ ರೂ. ೧೦೦ ಕೋಟಿ ವ್ಯವಹಾರ ಮಾಡುವ ಮೂಲಕ ಉತ್ತಮ ಸಾಧನೆ ಮಾಡಿದೆ. ಮುಂಬರುವ ದಿನಗಳಲ್ಲಿ ನಮ್ಮ ಸೌಹಾರ್ದ ಶಾಖೆಯನ್ನು ಇಡೀ ಉತ್ತರ ಕರ್ನಾಟಕ ವ್ಯಾಪ್ತಿಗೆ ವಿಸ್ತರಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಬಿಎಲ್‌ಡಿ ಸೌಹಾರ್ದ ಅಧ್ಯಕ್ಷ ಸುನೀಲಗೌಡ ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ದೇವಸ್ಥಾನದ ಸಂಕೀರ್ಣದ ಎಸ್‌ಬಿಐ ಬ್ಯಾಂಕ್ ಮೇಲ್ಮಹಡಿ ಕಟ್ಟಡದಲ್ಲಿ ಬುಧವಾರ ಬಿಎಲ್‌ಡಿ ಸೌಹಾರ್ದದ ಶಾಖೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸೌಹಾರ್ದ ಮೇಲೆ ಜನರು ವಿಶ್ವಾಸವಿಟ್ಟು ಪಿಗ್ಮಿ, ಠೇವಣಿ ಇಡುತ್ತಿದ್ದಾರೆ. ನಾವು ಜನರ ವಿಶ್ವಾಸ ಕಳೆದುಕೊಳ್ಳದೇ ಉತ್ತಮವಾಗಿ ಸೌಹಾರ್ದವನ್ನು ನಡೆಸಿಕೊಂಡು ಹೋಗುತ್ತೇವೆ. ಸೌಹಾರ್ದಗಳು ಉತ್ತಮವಾಗಿ ನಡೆಯಲು ಆಯಾ ಆಡಳಿತ ಮಂಡಳಿಯಿಂದ ಮಾತ್ರ ಸಾಧ್ಯ ಎಂಬುವದನ್ನು ಗ್ರಾಹಕರು ತಿಳಿದುಕೊಳ್ಳಬೇಕು. ನಾವು ನಮ್ಮ ಸೌಹಾರ್ದದ ಐದನೇ ಶಾಖೆಯನ್ನು ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಇಂದು ಆರಂಭಿಸಲಾಗಿದೆ. ಈ ಭಾಗದ ಜನರು ನಮ್ಮ ಸೌಹಾರ್ದದ ಸದುಪಯೋಗ ಪಡೆದುಕೊಳ್ಳಬೇಕು. ಆರನೇ ಶಾಖೆಯನ್ನು ಸಾವಳಗಿಯಲ್ಲಿ ಆರಂಭಿಸಲಾಗುವುದು. ಮುಂಬರುವ ದಿನಗಳಲ್ಲಿ ತಾಳಿಕೋಟಿ, ಇಂಡಿ ಸೇರಿದಂತೆ ವಿವಿಧೆಡೆ ನಮ್ಮ ಶಾಖೆಗಳನ್ನು ಆರಂಭಿಸಲಾಗುವುದು ಎಂದರು.
ಸಾನಿಧ್ಯ ವಹಿಸಿದ್ದ ಸಿದ್ದಲಿಂಗ ಸ್ವಾಮೀಜಿ, ಸೌಹಾರ್ದದ ಸ್ಥಳೀಯ ಸಮಿತಿ ಅಧ್ಯಕ್ಷ ಬಿ.ಆರ್.ಅಡ್ಡೋಡಗಿ ಮಾತನಾಡಿದರು. ಈ ಸಂದರ್ಭದಲ್ಲಿ ಸೌಹಾರ್ದದ ಉಪಾಧ್ಯಕ್ಷ ಶರಣಬಸಪ್ಪ ಗುಡ್ಡೋಡಗಿ, ಸ್ಥಳೀಯ ಸಮಿತಿಯ ಸದಸ್ಯರಾದ ಡಾ.ಮಹಾಂತೇಶ ಜಾಲಗೇರಿ, ಡಾ.ಬಸವರಾಜ ಗುಬ್ಬ, ಸುನೀಲ ದುಂಬಾಳೆ, ಸಂತೋಷ ಲಮಾಣಿ, ಸಿದ್ದು ಸಾಸನೂರ, ಸಿ.ಪಿ.ಪಾಟೀಲ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಸೌಹಾರ್ದದ ಮಾರ್ಗದರ್ಶಕರಾದ ವಿಜಯಕುಮಾರ ಕನಮಡಿ, ಶಂಕರಗೌಡ ಪಾಟೀಲ, ಅಶೋಕ ಖಾಡಗಿ, ಎಸ್.ಕೆ.ಗೊಂಗಡಿ, ಸೌಹಾರ್ದದ ಸಿಇಓ ವಿಜಯ ಜತ್ತಿ, ಮುಖ್ಯ ವ್ಯವಸ್ಥಾಪಕ ಪ್ರತಾಪ, ಮುಖಂಡರಾದ ಡಾ.ಮಹಾಂತೇಶ ಬಿರಾದಾರ, ಜಗದೀಶ ಕೊಟ್ರಶೆಟ್ಟಿ, ಶೇಖರ ಗೊಳಸಂಗಿ, ಬಸವರಾಜ ಹಾರಿವಾಳ, ಲ.ರು.ಗೊಳಸಂಗಿ, ಎಂ.ಜಿ.ಆದಿಗೊಂಡ, ಸುರೇಶ ಪಾಟೀಲ, ಸುರೇಶ ಹಾರಿವಾಳ, ರಮೇಶ ಯಳಮೇಲಿ, ಎಸ್.ಎಸ್.ಹಿರೇಮಠ, ರಾಜು ಪಾಟೀಲ, ರಮಜಾನ ಮುಜಾವರ, ಪ್ರವೀಣ ಪಾಟೀಲ, ಚೇತನ ಮಠಪತಿ, ಚನ್ನಬಸು ಮುರಾಳ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.