ವಿಜಯಪುರ: ಥೈರಾಯ್ಡ್ ಗ್ರಂಥಿ ರೋಗ ಕುರಿತು ಜಾಗೃತಿ ಕಾರ್ಯಕ್ರಮ ಮತ್ತು ಥೈರಾಯ್ಡ್ ಪರೀಕ್ಷೆ ಶಿಬಿರ ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಎಸ್. ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆಯಿತು.
ಬುಧವಾರ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಈ ಶಿಬಿರ ನಡೆದಯಿತು.
ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಡಾ. ಗಿರೀಶ ಕುಲ್ಲೊಳ್ಳಿ ಮಾತನಾಡಿ, ಕಾಯಿಲೆಯ ಮುನ್ಸೂಚನೆಗಳು, ತಪಾಸಣೆ ಹಾಗೂ ಚಿಕಿತ್ಸೆಯ ಮಹತ್ವದ ಕುರಿತು ಅವರು ಮಾಹಿತಿ ನೀಡಿದರು. ಅಲ್ಲದೇ, ಈ ಕಾಯಿಲೆಗೆ ಸೂಕ್ತ ಸಂದರ್ಭದಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದರೆ ಶೀಘ್ರವಾಗಿ ಗುಣಮುಖರಾಗಬಹುದು ಎಂದು ಹೇಳಿದರು.
ಡಾ. ಶೃತಿ ಶಿಳ್ಳಿನ ಮಾತನಾಡಿ, ಗಳಗಂಡ, ಹೈಪೋಥೈರಾಯ್ಡಿಸಂ ಮತ್ತು ಹೈಪರ್ ಥೈರಾಯೀಡಿಸಮ್ ರೋಗ ಲಕ್ಷಣಗಳು ಮತ್ತು ಅಯೋಡಿನ್ ಕೊರತೆಯನ್ನು ನೀಗಿಸುವ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.
ಈ ಶಿಬಿರದಲ್ಲಿ ಒಟ್ಟು 128 ವಿದ್ಯಾರ್ಥಿನಿಯರಿಗೆ ಥೈರಾಯ್ಡ್ ಪರೀಕ್ಷೆ ನಡೆಸಲಾಯಿತು.
ಶಸ್ತ್ರ ಚಿಕಿತ್ಸೆ ವಿಭಾಗದ ವೈದ್ಯರಾದ ಡಾ. ಶಿವರಾಜ ಮಂಗ್ಯಾಳ, ಶಾಲೆಯ ಮುಖ್ಯ ಶಿಕ್ಷಕಿ ವಿ. ಪಿ. ನೀಡೋಣಿ, ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿಗಳು, ಶಾಲೆಯ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಶಾಲೆಯ ಸಹ ಶಿಕ್ಷಕ ಎಂ. ಎಂ. ಅಳ್ಳೊಳ್ಳಿ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

