Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಬೇಡ
(ರಾಜ್ಯ ) ಜಿಲ್ಲೆ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಬೇಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೋಕಸಭೆ ಚುನಾವಣೆ ಮೇಲೆ ಗಮನ ಹರಿಸಿ: ಸಚಿವರಿಗೆ ಸಿಎಂ, ಡಿಸಿಎಂ ಕಿವಿಮಾತು

ಬೆಂಗಳೂರು: ಬಹಿರಂಗವಾಗಿ ಸಿಎಂ ಗಾದಿ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿರುವ ಶಾಸಕ ಮತ್ತು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆ ಮೇಲೆ ಗಮನ ಕೇಂದ್ರೀಕರಿಸುವಂತೆ ಸೂಚಿಸಿದ್ದಾರೆ.
ಸರ್ಕಾರ ರಚನೆಯಾಗಿ ಆರು ತಿಂಗಳು ಸಮೀಪಿಸುತ್ತಿರುವ ಹೊತ್ತಿನಲ್ಲಿ ಉಂಟಾದ ಗೊಂದಲಗಳಿಗೆ ತೆರೆ ಎಳೆಯುವುದು ಹಾಗೂ ಸಚಿವರನ್ನು ವಿಶ್ವಾಸಕ್ಕೆ ಪಡೆಯುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಅನ್ನು ಏರ್ಪಡಿಸಿದ್ದರು. ಈ ವೇಳೆ ಸಚಿವರಿಗೆ ಕ್ಲಾಸ್‌ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸಚಿವರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ, ಹೇಳಿಕೆಗಳಿಂದ ಪಕ್ಷದ ವರ್ಚಸ್ಸು ಹಾಗೂ ಲೋಕಸಭಾ ಚುನಾವಣೆ ಮೇಲೆ ಬೀರುವ ಪರಿಣಾಮದ ಬಗ್ಗೆ ತಿಳಿಹೇಳಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಪ್ರತಿಯೊಂದು ನಡೆಯೂ ರಾಜ್ಯ ರಾಜಕೀಯದಲ್ಲಿ ಯಾವ ರೀತಿ ಪರಿಣಾಮ ಬೀರಲಿದೆ ಎಂದು ಮನದಟ್ಟು ಮಾಡಲು ಉಭಯ ನಾಯಕರು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
ಮುಖಂಡರು ಮತ್ತು ಕಾರ್ಯಕರ್ತರಿಗೆ ಕೆಲವು ಸಚಿವರು ಲಭ್ಯವಾಗುತ್ತಿಲ್ಲ ಎಂದು ಬಹಳಷ್ಟು ಕಾರ್ಯಕರ್ತರು ನಮಗೆ ದೂರು ನೀಡಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸಿದರೂ ಕಾಟಾಚಾರಕ್ಕೆ ತಯಾರಿ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ಹಲವು ಜನ ನಮಗೆ ದೂರು ಕೊಟ್ಟಿದ್ದಾರೆ. ಇದು‌ ನಮ್ಮ ಮಟ್ಟವನ್ನು ದಾಟಿ ಹೈಕಮಾಂಡ್ ಗಮನಕ್ಕೂ ಹೋಗಿದೆ. ಲೋಕಸಭಾ ಚುನಾವಣೆ ತಯಾರಿ ಹೇಗೆ ನಡೆಯುತ್ತಿದೆ? ಹೈ ಕಮಾಂಡ್ ಮೊದಲೇ ನಿಮಗೆ ಒಂದಷ್ಟು ಜವಾಬ್ದಾರಿ ಕೊಟ್ಟಿತ್ತು. ಆದರೆ ನೀವು ಆ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಅಸಮಾಧಾನವನ್ನು ಹೈಕಮಾಂಡ್‌ ವ್ಯಕ್ತಪಡಿಸಿದೆ.
ಈ ಬಗ್ಗೆ ಪಕ್ಷದ ವರಿಷ್ಠರು ನಮ್ಮ ಜತೆ ಚರ್ಚೆ ನಡೆಸಿದ್ದು, ಕೆಲವೊಂದು ಸೂಚನೆಯನ್ನು ನೀಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್‌ ಸಿಂಗ್ ಸುರ್ಜೇವಾಲಾ‌ ಕಾರ್ಯವೈಖರಿ ಬಗ್ಗೆ ಗರಂ ಆಗಿದ್ದಾರೆ. ಈ ರೀತಿ ಬೇಜವಾಬ್ದಾರಿತನದ ವರ್ತನೆ ಸರಿಯಲ್ಲ. ಇದನ್ನು ಈಗಲೇ ಸರಿಪಡಿಸಿಕೊಳ್ಳಬೇಕು ಎಂದು ಖಾರವಾಗಿ ಹೇಳಿದ್ದಾರೆ. ಈ ಮಾತುಗಳನ್ನು ನಾವು ಹೇಳುತ್ತಿಲ್ಲ. ದೆಹಲಿಯವರು ನಮಗೆ ಹೇಳಿದ್ದನ್ನು ನಾವು ನಿಮಗೆ ಹೇಳುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.
ಬಹಿರಂಗ ಹೇಳಿಕೆ ಬೇಡ: ಡಿಕೆ ಶಿವಕುಮಾರ್
ಇದೇ ವೇಳೆ ಯಾವುದೇ ರೀತಿಯ ಅಸಮಾಧಾನ ಮತ್ತು ಗೊಂದಲದ ವಿಚಾರಗಳು ಇದ್ದರೆ ಪಕ್ಷದ ವೇದಿಕೆಯೊಳಗೆ ಮಾತನಾಡಿ. ಯಾರೂ ಸಹ ಬಹಿರಂಗವಾಗಿ ಮಾತನಾಡಬೇಡಿ. ಸುಖಾ ಸುಮ್ಮನೆ ವಿಪಕ್ಷ ನಾಯಕರಿಗೆ ಅಸ್ತ್ರ ಕೊಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿ ಹೇಳಿದ್ದಾರೆ ಎನ್ನಲಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಇದಕ್ಕೆ ಈಗ ನಿಮ್ಮ ಶ್ರಮದ ಅಗತ್ಯವಿದೆ. ಮತ್ತೊಮ್ಮೆ ನೀವು ಜಿಲ್ಲಾ ಪ್ರವಾಸ ಮಾಡಿ, ನಿಮಗೆ ಕೊಟ್ಟಿರುವ ಕೆಲಸ ಮತ್ತು ನಿಮ್ಮ ವ್ಯಾಪ್ತಿಯ ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಂಡು ಬರಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ ಎಂದು ಸೇರಿದ್ದ ಸಚಿವರಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.