Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ

ದೇವರಹಿಪ್ಪರಗಿಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆ

ಶ್ರೇಷ್ಠ ಆಧ್ಯಾತ್ಮಿಕ ಸಂತ ಆದಿ ಶಂಕರಾಚಾರ್ಯರು :ಡಾ.ನಾಯಿಕ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆ
(ರಾಜ್ಯ ) ಜಿಲ್ಲೆ

ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನೀರು ಪೋಲು ಮಾಡದೆ ಕೆಬಿಜೆಎನ್ನೆಲ್ ಅಧಿಕಾರಿಗಳೊಂದಿಗೆ ಸಹಕರಿಸಲು ಮನವಿ

ವಿಜಯಪುರ: ನೀರಾವರಿ ಬಳಕೆಗಾಗಿ ಲಭ್ಯವಾಗಬಹುದಾದ ನೀರಿನ ಪ್ರಮಾಣ ಕೇವಲ ೫ ಟಿ.ಎಂ.ಸಿ. ಮಾತ್ರ ಇದ್ದು, ಲಭ್ಯವಾಗುವ ನೀರಿನ ಪ್ರಮಾಣವು ಸಹ ಭಾಷ್ಪಿಕರಣಗೊಳ್ಳುವ ಸಂಭವನೀಯತೆ ಇರುವುದರಿಂದ ಅಗತ್ಯವಿರುವ ೭೫ ಟಿಎಂಸಿ ನೀರು ಲಭ್ಯವಿಲ್ಲದೇ ಇರುವುದರಿಂದ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು ಪೂರೈಸಲು ಸಾಧ್ಯವಾಗುವುದಿಲ್ಲವೆಂದು ತೀರ್ಮಾನಿಸಲಾಯಿತು.
ಮಂಗಳವಾರ ಆಲಮಟ್ಟಿಯಲ್ಲಿ ಅಬಕಾರಿ ಖಾತೆ ಸಚಿವರೂ ಆದ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಆರ್.ಬಿ.ತಿಮ್ಮಾಪುರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಸಧ್ಯ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆ ದಿನಾಂಕ : ೧೮-೧೧-೨೦೨೩ರ ವರೆಗೆ ಕಾಲುವೆ ಜಾಲಕ್ಕೆ ನೀರು ಪೂರೈಸುವುದನ್ನು ಚಾಲ್ತಿಯಲ್ಲಿಡಲಾಗುವುದು. ತದನಂತರ, ದಿನಾಂಕ : ೧೯-೧೧-೨೦೨೩ ರಿಂದ ೨೬-೧೧-೨೦೨೩ರವರೆಗೆ ೮ ದಿನ ಕಾಲುವೆ ಜಾಲಕ್ಕೆ ನೀರು ಪೂರೈಸುವುದನ್ನು ಸ್ಥಗಿತಗೊಳಿಸಲಾಗುವುದು. ತದನಂತರ, ದಿನಾಂಕ : ೨೭-೧೧-೨೦೨೩ ರಿಂದ ೦೪-೧೨-೨೦೨೩ರವರೆಗೆ ೮ ದಿನಗಳಿಗೆ ಕಾಲುವೆ ಜಾಲಗಳಿಗೆ ನೀರು ಪೂರೈಸುವುದನ್ನು ಮಿತವ್ಯಯ ಸಾಧಿಸಿ ಕೊನೆಯ ಅಂಚಿನವರೆಗೆ ನೀರು ಪೂರೈಸಲು ಅನುಕೂಲವಾಗುವಂತೆ ಹೆಚ್ಚುವರಿ ದಿನಗಳಿಗೆ ವಿಸ್ತರಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಇಂತಹ ಸಂಕಷ್ಟದ ಸಮಯದಲ್ಲಿ ರೈತರು ನೀರು ಪೋಲು ಮಾಡದೆ ಕೃಷ್ಣಾಭಾಗ್ಯ ಜಲ ನಿಗಮದ ಅಧಿಕಾರಿಗಳೊಂದಿಗೆ ಸಹಕರಿಸಲು ವಿನಂತಿಸಲಾಯಿತು.
ಹಿಂಗಾರು ಹಂಗಾಮಿಗೆ ೨೦೨೩-೨೪ನೇ ಸಾಲಿನಲ್ಲಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ದಿನಾಂಕ: ೧೪-೦೮-೨೦೨೩ರಂದು ಕ್ಷೀಣವಾಗಿದ್ದು, ದಿನಾಂಕ : ೧೩-೧೦-೨೦೨೩ರಂದು ಸಂಪೂರ್ಣವಾಗಿ ಸ್ಥಗಿತವಾಗಿದೆ. ದಿನಾಂಕ : ೦೫-೧೨-೨೦೨೩ ರಂದು ಆಲಮಟ್ಟಿ ಜಲಾಶಯದ ಮಟ್ಟವೂ ಅಂದಾಜು ೫೧೩ ಮೀಟರ್‌ಗೆ ಬರಬಹುದಾಗಿದೆ. ಅಂದು ಒಟ್ಟು ಸಂಗ್ರಹಣೆ ೫೦ ಟಿ.ಎಂ.ಸಿ. ಆಗಬಹುದಾಗಿದ್ದು, ಇದರಲ್ಲಿ ಜೀವಜಲ ೩೨ ಟಿಎಂಸಿ ಹಾಗೂ ನಾರಾಯಣಪುರ ಜಲಾಶಯದ ಜೀವಜಲ ೧೨ ಟಿಎಂಸಿ ಒಟ್ಟು ೪೪ ಟಿಎಂಸಿ ಜೀವಜಲ ಲಭ್ಯವಾಗಬಹುದಾಗಿದ್ದು,ಡಿ. ೫ ರಿಂದ ಜೂನ್ ೩೦.೨೦೨೪ರ ವರೆಗೆ ಕುಡಿಯುವ ನೀರು, ಕೆರೆಗಳನ್ನು ತುಂಬಿಸುವುದು, ಕಾಲುವೆಗಳ ಮುಖಾಂತರ ಕುಡಿಯುವ ನೀರಿನ ಯೋಜನೆಗಳಿಗೆ ನೀರು ಪೂರೈಸುವುದು, ಮತ್ತು ಉಷ್ಣ ವಿದ್ಯುತ್ ಸ್ಥಾವರಗಳಿಗೆ ಹಾಗೂ ಕೈಗಾರಿಕೆಗಳಿಗೆ, ಬ್ಯಾರೇಜ್‌ಗಳಲ್ಲಿ ನೀರಿನ ಸಂಗ್ರಹಣೆ, ರೈತರ ಹಿನ್ನೀರಿನ ಬಳಕೆ ಸೇರಿದಂತೆ ಈ ಮೊದಲು ಕಾಯ್ದಿರಿಸಿಕೊಂಡ ೩೭,೨೫ ಟಿ.ಎಂ.ಸಿ. ಬದಲಾಗಿ ಸಭೆಯಲ್ಲಿ ಚರ್ಚಿಸಿ ಅಂದಾಜು ೪೦.೦೦ ಟಿ.ಎಂ.ಸಿ. ನೀರನ್ನು ಕಾಯ್ದಿರಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಅವಳಿ ಜಿಲ್ಲೆಯ ಶಾಸಕರುಗಳಾದ ಸಿ.ಎಸ್.ನಾಡಗೌಡ, ಜೆ.ಟಿ.ಪಾಟೀಲ, ಪಿ.ಎಚ್.ಪೂಜಾರ, ಅಶೋಕ ಮನಗೂಳಿ, ವಿಠ್ಠಲ ಕಟಕದೊಂಡ, ಯಶವಂತರಾಯಗೌ ಪಾಟೀಲ, ವಿಜಯಾನಂದ ಕಾಶಪ್ಪನವರ, ಹಣಮಂತ ನಿರಾಣಿ, ಜಗದೀಶ ಗುಡಗಂಟಿ, ರಾಜಾ ವೆಂಕಟಪ್ಪ ನಾಯಕ, ಶ್ರೀಮತಿ ಕರಿಯಮ್ಮ ನಾಯಕ್, ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್, ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ, ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮೀನಭಾವಿ, ಭೀಮರಾಯನಗುಡಿ ಕಾಡಾ ಆಡಳಿತಾಧಿಕಾರಿ ಮುಕ್ಕಣ್ಣ ನಾಯಕ್, ಆಲಮಟ್ಟಿ ಆಣೆಕಟ್ಟು ಮುಖ್ಯ ಅಭಿಯಂತರ ಎಚ್.ಎನ್.ಶ್ರೀನಿವಾಸ, ನಾರಾಯಣಪುರ ಮುಖ್ಯ ಅಭಿಯಂತರ ಮಂಜುನಾಥ್, ಸದಸ್ಯ ಕಾರ್ಯದರ್ಶಿಗಳೂ ಹಾಗೂ ಮುಖ್ಯ ಅಭಿಯಂತರ ಭೀಮರಾಯನಗುಡಿ ಪ್ರೇಮಸಿಂಗ್, ಆಲಮಟ್ಟಿ ಅಧೀಕ್ಷಕ ಅಭಿಯಂತರ ಬಿ.ಬಸವರಾಜ್ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ

ದೇವರಹಿಪ್ಪರಗಿಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆ

ಶ್ರೇಷ್ಠ ಆಧ್ಯಾತ್ಮಿಕ ಸಂತ ಆದಿ ಶಂಕರಾಚಾರ್ಯರು :ಡಾ.ನಾಯಿಕ್

ಸಕಲ ಜೀವಿಗಳಿಗೂ ಲೇಸನ್ನೆ ಬಯಸಿದ ಬಸವಣ್ಣನವರು :ಗುಮಶೆಟ್ಟಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಶ್ರೇಷ್ಠ ಆಧ್ಯಾತ್ಮಿಕ ಸಂತ ಆದಿ ಶಂಕರಾಚಾರ್ಯರು :ಡಾ.ನಾಯಿಕ್
    In (ರಾಜ್ಯ ) ಜಿಲ್ಲೆ
  • ಸಕಲ ಜೀವಿಗಳಿಗೂ ಲೇಸನ್ನೆ ಬಯಸಿದ ಬಸವಣ್ಣನವರು :ಗುಮಶೆಟ್ಟಿ
    In (ರಾಜ್ಯ ) ಜಿಲ್ಲೆ
  • ಧರ್ಮದ ಕಾರ್ಯಕ್ರಮ ಪ್ರತಿ ಮನುಷ್ಯನ ದಾರಿದೀಪ :ಶಂಕರಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಸೃಜನಶೀಲ ಪ್ರತಿಭೆ ಸಾಹಿತಿ ಸುಧಾ ಪಾಟೀಲ
    In ವಿಶೇಷ ಲೇಖನ
  • ’ವಚನ ಗಾನ ಕೋಗಿಲೆ’ ನೈನಾ ಗಿರಿಗೌಡರ ಮುಡಿಗೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.