Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆರೆ-ಕಾಲುವೆಗಳಿಗೆ ನೀರು ಹರಿಸದಿದ್ದರೆ ರಾಜೀನಾಮೆ!
(ರಾಜ್ಯ ) ಜಿಲ್ಲೆ

ಕೆರೆ-ಕಾಲುವೆಗಳಿಗೆ ನೀರು ಹರಿಸದಿದ್ದರೆ ರಾಜೀನಾಮೆ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಧಿಕಾರಿಗಳ ಅಸಮರ್ಪಕ ನಿರ್ವಹಣೆಗೆ ಬೇಸತ್ತ ಶಾಸಕ ಯಶವಂತರಾಯಗೌಡ ಎಚ್ಚರಿಕೆ!

ವಿಜಯಪುರ: ಇಂಡಿ ಮತಕ್ಷೇತ್ರದ ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸದಿದ್ದರೆ ರಾಜೀನಾಮೆ ನೀಡುವುದಾಗಿ ಇಂಡಿ ಆಡಳಿತಾರೂಢ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳಡಿ ಇಂಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಭೌತಿಕವಾಗಿ ಕಾಮಗಾರಿಗಳು ಮುಗಿದಿವೆ.  ಆದರೆ, ಈ ಯೋಜನೆಗಳು ಪೂರ್ಣಗೊಂಡು 22 ವರ್ಷಗಳು ಕಳೆದರೂ ಈವರೆಗೂ ಕಾಲುವೆಯ ಟೇಲ್ ಎಂಡ್(ಕೊನೆಯ ತುದಿ) ವರೆಗೂ ನೀರು ಹರಿಯುತ್ತಿಲ್ಲ. ಈಗ ಭೀಕರ ಬರ ಎದುರಾಗಿರುವ ಹಿನ್ನಲೆಯಲ್ಲಿ ರೈತರು, ಜನ, ಜಾನುವಾರುಗಳು ಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳ ವೈಫಲ್ಯದಿಂದಾಗಿ ನೀರು ಬರುತ್ತಿಲ್ಲ.  ಕೂಡಲೇ ನೀರು ಹರಿಸದಿದ್ದರೆ ಅಧಿಕಾರದಲ್ಲಿದ್ದರೂ ಪ್ರಯೋಜನವಿಲ್ಲ. ಹೀಗಾಗಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿ ಆಗಿರಬೇಕು. ಜನರ ಆಶಯಗಳನ್ನು ಈಡೇರಿಸಲು ಆಗದಿದ್ದರೆ ರಾಜಕೀಯ ನಿವೃತ್ತಿಯಾಗಬೇಕು ಅಥವಾ ರಾಜಿನಾಮೆ‌ ನೀಡಬೇಕು. ಇಂಡಿ ಮತಕ್ಷೇತ್ರದ ಕಟ್ಟ ಕಡೆಯ ರೈತರಿಗೆ ನೀರು ಸಿಗುತ್ತಿಲ್ಲ. ಜನರಿಗೆ ನೀರು ಬರದಿದ್ದರೆ ಯಾವ ಪುರುಷಾರ್ಥಕ್ಕೆ ರಾಜಕಾರಣ ಮಾಡಬೇಕು. ಜನರ ಸಮಸ್ಯೆಯನ್ನು ನೇರವಾಗಿ ಎದೆಗಾರಿಕೆಯಿಂದ ಹೇಳುತ್ತೇನೆ.  ಇಂಡಿ ತಾಲೂಕು ಸಂಪೂರ್ಣ ಸಮಸ್ಯೆಗೆ ಒಳಗಾಗಿದೆ. ಕುಡಿಯುವ ನೀರು, ಬೆಳೆಗಳಿಗೆ ನೀರಾವರಿಗೆ ನೀರು ಸಿಗದಂತಾಗಿದೆ. ನಾನಾ ಏತ ನೀರಾವರಿ ಯೋಜನೆಗಳಡಿ ಕಾಲುವೆಗಳಾದರೂ ನೀರು ಬರುತ್ತಿಲ್ಲ. ಅತ್ತ ಭೀಮಾನದಿಯಲ್ಲೂ ನೀರೂ ಸಿಗುತ್ತಿಲ್ಲ. ಉಜನಿ ಡ್ಯಾಂನಿಂದ‌ ಮಹಾರಾಷ್ಟ್ರದ ಸೋಲಾಪುರಕ್ಕೆ ಪೈಪ್ ಲೈನ್ ಮಾಡುತ್ತಿದ್ದಾರೆ. ಅದಾದ ಬಳಿಕ ಉಜನಿ‌ ಡ್ಯಾಂನಿಂದ ಭೀಮಾ ನದಿಗೆ ನೀರೇ ಬರುವುದಿಲ್ಲ. ಈಗಾಗಲೇ ಈ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದೇನೆ ಎಂದು ಶಾಸಕರು ತಿಳಿಸಿದರು.

ಇಂಡಿ ನೂತನ ಜಿಲ್ಲೆಯಾಗದಿದ್ದರೆ ರಾಜಕೀಯ ನಿವೃತ್ತಿ

ಇಂಡಿಯನ್ನು ನೂತನ ಜಿಲ್ಲಾ ಕೇಂದ್ರ ಮಾಡುವ ನಿರ್ಧಾರಕ್ಕೆ‌ ನಾನು ಬದ್ಧನಾಗಿದ್ದೇನೆ. ಇದು ಬಹಳ ದಶಕಗಳ ಕೂಗು. ನಮ್ಮ ಪಕ್ಷದ ನಾಯಕರನ್ನು ಕೇಳಿಯೇ ಈ ವಿಚಾರದಲ್ಲಿ ಮಾತು ಕೊಟ್ಟಿದ್ದೇನೆ. ಇಂಡಿ ಜಿಲ್ಲಾ ಕೇಂದ್ರ ಮಾಡಲು 2028ರವರೆಗೂ ಅವಕಾಶವಿದೆ. ಅಲ್ಲಿಯವರೆಗೂ ಕಾಯುತ್ತೇನೆ. ನಮ್ಮ ಸರಕಾರ ಇಂಡಿ ಜಿಲ್ಲಾ ಕೇಂದ್ರ ಮಾಡುವ ಭರವಸೆ ಇದೆ. ಒಂದು ವೇಳೆ 2028 ರೊಳಗೆ ಇಂಡಿ ಜಿಲ್ಲಾ ಕೇಂದ್ರ ಮಾಡದಿದ್ದರೆ 2028ಕ್ಕೆ ರಾಜಕಾರಣದಲ್ಲಿ ಇರಲ್ಲ. ನಮ್ಮನ್ನು ರಾಜಕಾರಣದಲ್ಲಿ ಇಟ್ಟುಕೊಳ್ಳಬೇಕೆಂದರೆ ಇಂಡಿ ಜಿಲ್ಲಾ ಕೇಂದ್ರ ಮಾಡುತ್ತಾರೆ. ಬೇಡ ಎಂದರೆ ಬಿಟ್ಟಿರುತ್ತಾರೆ. ಮೈಕ್ರೋ ಮ್ಯಾನೇಜ್ಮೆಂಟ್ ಆ್ಯಂಡ್ ಎಡ್ಮಿನಿಸ್ಟ್ರೇಷನ್ ಗಾಗಿ ಇಂಡಿ ಜಿಲ್ಲಾ ಕೇಂದ್ರವಾಗಬೇಕು ಎಂದು ಅವರು ಪುನರುಚ್ಚರಿಸಿದರು.
ರಾಜಸ್ಥಾನ ಕರ್ನಾಟಕಕ್ಕಿಂತಲೂ ಕಡಿಮೆ ಶಾಸಕರನ್ನು ಹೊಂದಿದೆ. ಅಭಿವೃದ್ಧಿಯಲ್ಲೂ ಹಿಂದುಳಿದಿದೆ. ಅಲ್ಲಿ ಕೇವಲ 200 ಜನ ಶಾಸಕರಿದ್ದರೂ 52ಕ್ಕೂ ಹೆಚ್ಚು ಜಿಲ್ಲೆಗಳನ್ನು ಮಾಡಲಾಗಿದೆ. ಅದೇ ರೀತಿ ನಮ್ಮಲ್ಲಿಯೂ ಆಡಳಿತದ ದೃಷ್ಠಿಯಿಂದ ಇಂಡಿ ನೂತನ ಜಿಲ್ಲೆಯಾಗಬೇಕು. ಇಂಡಿ, ಚಡಚಣ, ದೇವರ ಹಿಪ್ಪರಗಿ, ಆಲಮೇಲ ಮತ್ತು ಸಿಂದಗಿ ತಾಲೂಕುಗಳನ್ನು ಸೇರಿಸಿ ನೂತನ ಜಿಲ್ಲೆ ಮಾಡಬೇಕು. ಜಿಲ್ಲಾ ವಿಭಜನೆಯಲ್ಲಿ ಆ ಭಾಗದ ಜನರ ಅಭಿಪ್ರಾಯ ಮುಖ್ಯವಾಗುತ್ತದೆ. ಈಗಾಗಲೇ ಈ ಕುರಿತು ಸಿಎಂ ಗಮನ ಸೆಳೆದಿದ್ದು, ರಾಜ್ಯ ಸರಕಾರದಿಂದ ವಿಜಯಪುರ ಜಿಲ್ಲಾಡಳಿತಕ್ಕೆ ಜನಾಭಿಪ್ರಾಯ ಸಂಗ್ರಹಿಸಲು ಸೂಚನೆ ಬಂದಿದೆ. ಹೀಗಾಗಿ ಇಂಡಿ ನೂತನ ಜಿಲ್ಲೆಯಾಗಬೇಕು. ಅದಾಗದಿದ್ದರೆ ಇಂಡಿ ಮತ್ತು ಸಿಂದಗಿ ತಾಲೂಕುಗಳಿಗೆ ವಿಶೇಷ ಸ್ಥಾನಮಾನ ನೀಡಿ ಕಲ್ಯಾಣ(ಹೈದರಾಬಾದ) ಕರ್ನಾಟಕ ಭಾಗಕ್ಕೆ ನೀಡಿರುವಂತೆ ಆರ್ಟಿಕಲ್ 371(ಜೆ) ಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕೆಲವು ಸಚಿವರವನ್ನು ಹೊರತು ಪಡಿಸಿದರೆ ಉಳಿದವರು ತಂತಮ್ಮ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಬಗ್ಗೆ ಅವರಿಗೆ ಕಲ್ಪನೆಯೇ ಇಲ್ಲ. ತಮ್ಮ ಮತಕ್ಷೇತ್ರದ ಅಭಿವೃದ್ಧಿಗೆ ಮಾತ್ರ ಗಮನ ಹರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಉಳಿದ ಶಾಸಕರು ಎಲ್ಲಿಗೆ ಹೋಗಬೇಕು? ಈ ತಾರತಮ್ಯದ ಹಿನ್ನೆಲೆಯಲ್ಲಿಯೇ ಈ ಹಿಂದೆ ಉಮೇಶ ಕತ್ತಿ ಪ್ರತ್ಯೇಕ ರಾಜ್ಯದ ಕೂಗು ಎತ್ತಿದ್ದರು. ನಮಗೆ ಪ್ರತ್ಯೇಕ ರಾಜ್ಯ ಬೇಕಿಲ್ಲ. ಆದರೆ, ಆ ಭಾವನೆ ಬರುತ್ತಿದೆ ಎಂದು ಯಶವಂತರಾಯಗೌಡ ವಿ. ಪಾಟೀಲ ಮಾರ್ಮಿಕವಾಗಿ ಹೇಳಿದರು.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.