ವಿಜಯಪುರ: ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಸಾರ್ವಜನಿಕರು ಅರಿತುಕೊಂಡು ಅದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೇಳಿದರು.
ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಭಾರತ, ಏಕ ಭಾರತ ಶ್ರೇಷ್ಠ ಭಾರತ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಕೇಂದ್ರ ಸರ್ಕಾರದ ಯೋಜನೆಗಳು, ಪ್ರಧಾನಮಂತ್ರಿಯವರ ದೂರದರ್ಶಿತ್ವ-೨೦೪೭, ವೋಕಲ್ ಪಾರ್ ಲೋಕಲ್ ಹಾಗೂ ಇತರೆ ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರಕಾರ ಜನ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ದೇಶ ಅಭಿವೃದ್ದಿಯತ್ತ ಮುನ್ನಡೆಯುತ್ತಿದೆ. ವಿಜಯಪುರ ಜಿಲ್ಲೆ ಉತ್ತಮ ರಸ್ತೆ ಸೇರಿದಂತೆ ಹೆದ್ದಾರಿಗಳನ್ನು ಹೊಂದಿದೆ. ಕೇಂದ್ರ ಸರ್ಕಾರದ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವ್ಥದ್ಧಿ ಇಲಾಖೆ ಉಪ ನಿರ್ದೇಶಕ ಕೆ ಕೆ ಚವ್ಹಾಣ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ವಾಸುದೇವ್ ಹೆರಕಲ್ ಅವರು, ಯುವಕರು ಅಗ್ನಿಪಥ ಯೋಜನೆಯಡಿ ಸೇನೆಗೆ ಸೇರಬೇಕು. ಕೇಂದ್ರ ಸರಕಾರದ ಖೇಲೋ ಇಂಡಿಯಾ ಯೋಜನೆಯಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದ್ದು ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಮೇಲ್ವಿಚಾರಕಿ ಭಾರತಿ ಪಾಟೀಲ್ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.ಪಿ. ಡಿ. ಜೆ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶ್ರೀಮತಿ ಡಿ. ಕೆ ಕುಲಕರ್ಣಿ ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರದ ರಾಹುಲ್ ಡೋಂಗ್ರೆ, ಗಾಂಧಿ ಉಪಾಸಕರಾದ ನೇತಾಜಿ ಗಾಂಧಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ ಎಮ್ ಕೋಲೂರು, ಕೇಂದ್ರ ಸಂವಹನ ಇಲಾಖೆಯ, ನಾಗಪ್ಪ ಅಂಬಾಗೋಳ ಉಪಸ್ಥಿತರಿದ್ದರು. ಕೇಂದ್ರ ಸಂವಹನ ಇಲಾಖೆಯ ಸಿ ಕೆ ಸುರೇಶ್ ಸ್ವಾಗತಿಸಿದರು, ಉಪನ್ಯಾಸಕಾರದ ಸಂತೋಷ್ ಹೆಗ್ಡೆ ಮತ್ತು ಎಚ್ ಜೆ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಜಿ ಆರ್ ಪುರಾಣಿಕ್ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

