ವಿಜಯಪುರ: ಬಿ.ಎಲ್.ಡಿ.ಈ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ವತಿಯಿಂದ ವಿಶ್ವ ಆಹಾರ ದಿನಾಚರಣೆಯ ಆಂಗವಾಗಿ ನಗರದ ಸರಕಾರಿ ಮರಾಠಿ ಗಂಡು ಮಕ್ಕಳ ಶಾಲೆ ಸಂಖ್ಯೆ 1 ಮತ್ತು ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸಂಖ್ಯೆ 11 ರಂದು ಬುಧವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಸಂಹಿತಾ ಸಿದ್ದಾಂತ ವಿಭಾಗದ ಮುಖ್ಯಸ್ಥೆ ಪ್ರೊ. ರೇಣುಕಾ ತೆನಹಳ್ಳಿ, ಪ್ರತಿನಿತ್ಯ ಪೌಷ್ಠಿಕ ಆಹಾರ ಸೇವನೆ ವಿಧಾನ ಮತ್ತು ಮಹತ್ವದ ಕುರಿತು ಮಾಹಿತಿ ನೀಡಿದರು.
ಕೌಮಾರಭೃತ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯಲಕ್ಷ್ಮಿ ಬೆನಕಟ್ಟಿ ಅವರು ಮಕ್ಕಳ ಬೆಳವಣಿಗೆ ಬಗ್ಗೆ ಪೂರಕವಾದ ಪೌಷ್ಠಿಕಾಂಶಯುಕ್ತ ಆಹಾರ ಮಹತ್ವದ ಕುರಿತು ಮಾತನಾಡಿದರು.
ಸಂಹಿತಾ ಸಿದ್ದಾಂತ ವಿಭಾಗದ ಸಹ ಪ್ರಾಧ್ಯಾಪಕ ಮತ್ತು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಯೋಜನಾಧಿಕಾರಿ ಡಾ. ರಾವಸಾಹೇಬ ದೇಶಮುಖ ಅವರು ವಿಶ್ವ ಆಹಾರ ದಿನದ ಅಂಗವಾಗಿ ಪೌಷ್ಠಿಕ ಆಹಾರ ಮತ್ತು ಸ್ವಚ್ಚ ಪರಿಸರ ಹಾಗೂ ಮಕ್ಕಳ ಬೆಳವಣಿಗೆಯ ವಿಷಯದ ಕುರಿತು ನೀರೇ ಜೀವನ ನೀರೇ ಆಹಾರ ಯಾವುದನ್ನು ಬಿಡಬೇಡಿ ಎಂಬ ಧೇಯವಾಕ್ಯದೊಂದಿಗೆ ಶಾಲಾ ಮಕ್ಕಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಶೇರಖಾನೆ, ರಜಪೂತ, ಶಿಕ್ಷಕರಾದ ಸತೀಶ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಡಾ. ಮಂಜುಳಾ, ಡಾ. ದೌಲಬಿ ಹಾಗೂ ವೈದ್ಯ ವಿದ್ಯಾರ್ಥಿನಿಯರಾದ ಶ್ರೇಯಾ, ರೀನಾ ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

