Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾವಿನಂಚಿನಲ್ಲಿದ್ದ ಜೀವಕ್ಕೆ ಮರುಜೀವ ನೀಡಿದ ಜೆಎಸ್‌ಎಸ್ ಆಸ್ಪತ್ರೆ
(ರಾಜ್ಯ ) ಜಿಲ್ಲೆ

ಸಾವಿನಂಚಿನಲ್ಲಿದ್ದ ಜೀವಕ್ಕೆ ಮರುಜೀವ ನೀಡಿದ ಜೆಎಸ್‌ಎಸ್ ಆಸ್ಪತ್ರೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆರ್ಗಾನೋ ಪಾಸ್ಪರಸ್ ಕಂಪೌಂಡ್‌ನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಗೆ ಯಶಸ್ವಿ ಚಿಕಿತ್ಸೆ ನೀಡಿದ ವೈದ್ಯರು

ವಿಜಯಪುರ: “ಇನ್ನೇನು ನನ್ನ ಮಗನ ಬದುಕು ಇಲ್ಲಿಗೆ ಮುಗಿಯಿತು ಎಂದುಕೊಂಡು ಕಣ್ಣೀರು ಹಾಕುತ್ತ ಈ ಆಸ್ಪತ್ರೆಗೆ ಬಂದಾಗ “ಕಾಯುವುದು ಕೊಲ್ಲುವುದು ಅದು ಮೇಲಿನವನ ಕೈಯಲ್ಲಿದೆ. ಬದುಕುತ್ತಾನೆ ಎನ್ನುವ ಭರವಸೆಯಿಂದ ನಮ್ಮ ಪ್ರಯತ್ನ ನಾವು ಮಾಡುತ್ತೇವೆ ಮುಂದಿನ ಭಗವಂತನ ಮೇಲೆ ಬಿಡೋಣ” ಎಂದು ಹೇಳಿದಾಗ ನನ್ನ ಮಗ ಉಳಿಯಬಹುದು ಎನ್ನುವ ಒಂದು ಸಣ್ಣ ಭರವಸೆಯಲ್ಲಿ ಈ ದಾಖಲು ಮಾಡಿದೆ. ನಡೆದಾಡುವ ದೇವರ ಹೆಸರಲ್ಲಿ ನಿರ್ಮಾಣ ಮಾಡಿದ ಈ ಆಸ್ಪತ್ರೆಯು ನನ್ನ ಮಗನಿಗೆ ಪುನರ್ಜನ್ಮ ನೀಡಿದೆ. ಸಾವಿನ ಮನೆಯ ಬಾಗಿಲಿನ ಮುಂದೆ ನಿಂತು ಕದ ತಟ್ಟುತ್ತಲಿದ್ದವನನ್ನು ಬದುಕಿನ ಅಂಗಳಕ್ಕೆ ತಂದು ಬಿಟ್ಟ ಆಸ್ಪತ್ರೆಯ ವೈದ್ಯರಿಗೆ ಹಾಗೂ ಇಲ್ಲಿನ ಸಿಬ್ಬಂಧಿಗಳಿಗೆ ನಾನು ಚಿರಋಣಿಯಾಗಿರುತ್ತೇನೆ. ಬಹುತೇಕ ಸತ್ತೇ ಹೋದವನನ್ನು ಬದುಕಿಸುವ ಶಕ್ತಿ ಈ ಆಸ್ಪತ್ರೆಗಿದೆ. ಪೂಜ್ಯರ ಆಶೀರ್ವಾದಕ್ಕಿದೆ” ಎಂದು ಕಣ್ಣಂಚಿಂದ ಜಿನುಗುತ್ತಲಿದ್ದ ಹನಿಯನ್ನು ಒರೆಸಿಕೊಳ್ಳುತ್ತ ಆಸ್ಪತ್ರೆಯಲ್ಲಿ ದೊರೆತ ಚಿಕಿತ್ಸೆಯ ಕುರಿತು ರೋಗಿಯ ತಂದೆ ಮಾಹಿತಿ ನೀಡುವಾಗ ಸುತ್ತಲಿದ್ದವರು ಸಹ ಕಣ್ಣೀರಾದ ಘಟನೆ ನಡೆದಿದ್ದು ನಗರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ.
ವೈಯಕ್ತಿಕ ಕಾರಣಗಳಿಂದ ವಿಷ ಸೇವನೆ ಮಾಡಿ ಆಸ್ಪತ್ರೆಗೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ದಾಖಲಾಗಿದ್ದ ಕಲ್ಲಪ (ಹೆಸರು ಬದಲಿಸಲಾಗಿದೆ) ಎನ್ನುವ ವ್ಯಕ್ತಿಯು ಅದಗಲೇ ಸಾವಿನ ಅಂಚಿನಲ್ಲಿದ್ದ. ವಿಷ ಸೇವಿಸಿದ್ದನ್ನು ಗಮನಿಸಿ ನಗರದ ವಿವಿಧ ಆಸ್ಪತ್ರೆಗಳಿಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ ಮನೆಯವರಿಗೆ ಇವರ ಬದುಕಿನ ಕುರಿತು ಯಾವುದೇ ಭರವಸೆ ದೊರೆಯಲಿಲ್ಲ. ವಿಷದ ಪರಿಣಾಮ ಮೆದುಳಿನ ಮೇಲೆ ಆಗಿದ್ದರಿಂದ ಈ ವ್ಯಕ್ತಿ ಬದುಕುಳಿಯುವುದು ಬಹುತೇಕ ಅಸಾಧ್ಯ. ಒಂದು ವೇಳೆ ಬದುಕುಳಿದರು ಬಹು ಅಂಗಾಗ ವೈಫಲ್ಯಕ್ಕೆ ತುತ್ತಾಗಬಹುದು. ಹೀಗಿದ್ದರೂ ಸುಮ್ಮನೆ ಹಣವನ್ನು ಖರ್ಚು ಮಾಡುತ್ತಿರುವಿರಿ ಸುಮ್ಮನೆ ಮನೆಗೆ ಕರೆದುಕೊಂಡು ಹೋಗಿ ಎಂದು ಸಲಹೆ ನೀಡಿದಾಗ ದಾರಿ ಕಾಣದೇ ಆ ವ್ಯಕ್ತಿಯ ತಂದೆ ಜೆಎಸ್‌ಎಸ್ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬಂದಿದ್ದಾರೆ. ಪರೀಕ್ಷೆ ಮಾಡಿದ ವೈದ್ಯರು ನಮ್ಮ ಕೈಲಾದ ಪ್ರಯತ್ನವನ್ನು ಮಾಡೋಣ ಎಂದು ಹೇಳಿ ಐಸಿಯುಗೆ ದಾಖಲಿಸಿದ ನಂತರದಲ್ಲಿ ಸರಿ ಸುಮಾರು ಎರಡು ತಿಂಗಳ ಕಾಲ ನಿರಂತರ ಚಿಕಿತ್ಸೆಯನ್ನು ನೀಡಿ ಬದುಕುವುದು ಬಹುತೇಕ ವಿರಳ ಎನ್ನುವ ಪ್ರಕರಣವನ್ನು ಯಶಸ್ವಿ ಚಿಕಿತ್ಸೆ ಮೂಲಕ ರೋಗಿಯನ್ನು ಬದುಕಿಸಿದ್ದಾರೆ.
ಈ ಪ್ರಕರಣವನ್ನು ಯಶಸ್ವಿಯಾಗಿ ನಿಭಾಯಿಸಿ ಸಾವಿನಂಚಿನಲ್ಲಿರುವ ವ್ಯಕ್ತಿ ಗೆ ಜೀವದಾನ ಮಾಡಿದ್ದಕ್ಕಾಗಿ ವೈದ್ಯರು ಹಾಗೂ ಸಿಬ್ಬಂಧಿ ವರ್ಗದವರನ್ನು ನಗರ ಶಾಸಕರು ಹಾಗೂ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರಾದ ಬಸನಗೌಡ ರಾ ಪಾಟೀಲ ಯತ್ನಾಳ ಹಾಗೂ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೇಡ್ಕರ ಅಭಿನಂದಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.