Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೬ ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ವಿಜಯಪುರ ಸೂಕ್ತ
(ರಾಜ್ಯ ) ಜಿಲ್ಲೆ

೬ ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ವಿಜಯಪುರ ಸೂಕ್ತ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಿಗೆ ಪ್ರಾಥಮಿಕ ವರದಿ ಸಲ್ಲಿಸಿದ ಉನ್ನತ ಸಮಿತಿ

ಬೆಂಗಳೂರು: ವಿಜಯಪುರ ಜಿಲ್ಲೆಯನ್ನು ಇಂಧನ ಕ್ಷೇತ್ರದ ಸಾಧನಗಳು, ಮಶಿನರಿ ಮತ್ತು ಎಕ್ವಿಪ್ಮೆಂಟ್, ನಾನ್-ಮೆಟಲಿಕ್ ಖನಿಜೋತ್ಪನ್ನಗಳು, ಕೃಷಿ ಮತ್ತು ಕೃಷಿ ಆಧಾರಿತ ಉತ್ಪನ್ನಗಳು, ನ್ಯೂಟ್ರಾಸ್ಯುಟಿಕಲ್ಸ್, ಮೆಡಿಸಿನಲ್ ಮತ್ತು ಬೊಟಾನಿಕಲ್ ಉತ್ಪನ್ನಗಳು ಮತ್ತು ವಿಶೇಷ ಅಲಾಯ್ ಹಾಗೂ ಲೋಹೋತ್ಪನ್ನಗಳ ತಯಾರಿಕೆ ಹೀಗೆ ಒಟ್ಟು ಆರು ಕೈಗಾರಿಕಾ ವಲಯಗಳಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಅತ್ಯುತ್ತಮ ಅವಕಾಶಗಳಿವೆ ಎಂದು ಉನ್ನತ ಮಟ್ಟದ ಸಮಿತಿಯೊಂದು ಹೇಳಿದೆ.
ಈ ಸಂಬಂಧದ ಪ್ರಾಥಮಿಕ ವರದಿಯನ್ನು ಅದು ಗುರುವಾರ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರಿಗೆ ಸಲ್ಲಿಸಿದೆ. ಏಕಸ್ ಎಸ್‌ಇಜೆಡ್ ಮತ್ತು ದೆಹಲಿಯ ಸಿಬಿಆರ್ ಇ ಸಂಸ್ಥೆಯ ಪ್ರತಿನಿಧಿಗಳು ಈ ವರದಿಯನ್ನು ಸಿದ್ಧಪಡಿಸಿದ್ದಾರೆ. ಪಾಟೀಲ ಅವರು ನೂತನ ಸರಕಾರದಲ್ಲಿ ಕೈಗಾರಿಕಾ ಇಲಾಖೆಯ ಸಚಿವ ಹುದ್ದೆ ಸ್ವೀಕರಿಸಿದ ಕೆಲದಿನಗಳಲ್ಲೇ ತಮ್ಮ ತವರು ಜಿಲ್ಲೆಯನ್ನು ಕೈಗಾರಿಕಾ ದೃಷ್ಟಿಯಿಂದಲೂ ಮುಂಚೂಣಿಗೆ ತರುವ ಉದ್ದೇಶದಿಂದ ಸಿಬಿಆರ್ ಇ ಸಂಸ್ಥೆಗೆ ವರದಿ ನೀಡುವಂತೆ ಕೋರಿದ್ದನ್ನು ಇಲ್ಲಿ ಸ್ಮರಿಸಬಹುದು.
ವರದಿ ಸ್ವೀಕರಿಸಿ ಮಾತನಾಡಿದ ಸಚಿವರು,`ನಮ್ಮಲ್ಲಿ ಎಲ್ಲ ಉದ್ಯಮಗಳೂ ಬೆಂಗಳೂರಿನಲ್ಲಿ ಕೇಂದ್ರೀಕೃತಗೊಂಡಿವೆ. ಆದರೆ ಬಿಯಾಂಡ್ ಬೆಂಗಳೂರು ಉಪಕ್ರಮದಡಿ ರಾಜಧಾನಿಯ ಆಚೆಗೂ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳ ಸ್ಥಾಪನೆಗೆ ಹೇರಳ ಅವಕಾಶಗಳಿವೆ. ವಿಜಯಪುರ ಜಿಲ್ಲೆಯಲ್ಲಂತೂ ನೀರು, ವಿದ್ಯುತ್ ಮತ್ತು ಜಮೀನಿನ ಲಭ್ಯತೆಗೆ ಸಮಸ್ಯೆ ಇಲ್ಲ. ಇದರ ಹಿಂದೆ ಪ್ರಾದೇಶಿಕ ಅಸಮತೋಲನ ನಿವಾರಣೆಯ ಗುರಿಯೂ ಇದೆ’ ಎಂದರು.
ವರದಿಯಲ್ಲಿ ಗುರುತಿಸಿರುವ ಆರು ವಲಯಗಳಲ್ಲಿ ಮುಂಚೂಣಿಯಲ್ಲಿರುವ ಕಂಪನಿಗಳನ್ನೂ ಹೇಳಲಾಗಿದೆ. ಇವರನ್ನೆಲ್ಲ ಕರೆಸಿ, ಮುಂದಿನ ಹೆಜ್ಜೆಗಳನ್ನು ಇಡಲಾಗುವುದು. ಒಟ್ಟಿನಲ್ಲಿ ವಿಜಯಪುರವನ್ನು ರಾಜ್ಯದ ಪ್ರಮುಖ ಕೈಗಾರಿಕಾ ತಾಣವನ್ನಾಗಿ ಮಾಡಲಾಗುವುದು. ಈ ಅಧ್ಯಯನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸಿದ್ದರು ಎಂದು ಅವರು ವಿವರಿಸಿದರು.
ಇಂಧನ ಕ್ಷೇತ್ರದ ಸಾಧನ-ಸಲಕರಣೆಗಳ ತಯಾರಿಕೆಯಲ್ಲಿ ವಿಕ್ರಂ ಸೋಲಾರ್, ವೋಲ್ಟಾಸ್, ಶ್ನೀಡರ್ ಎಲೆಕ್ಟ್ರಿಕ್, ಸಾಲಾಸರ್ ಟೆಕ್ನೋ ಎಂಜಿನಿಯರಿಂಗ್ ಲಿಮಿಟೆಡ್ ಕಂಪನಿಗಳನ್ನು ಗುರುತಿಸಲಾಗಿದೆ. ಹಾಗೆಯೇ ಲೋಹೋತ್ಪನ್ನಗಳ ವಲಯದಲ್ಲಿ ಟಾಟಾ ಸ್ಟೀಲ್, ಜಿಂದಾಲ್, ಮಶಿನರಿಯಲ್ಲಿ ಎಬಿಬಿ, ಮುಕುಂದ್ ಬಜಾಜ್ ಮತ್ತು ಸೀಮನ್ಸ್, ನ್ಯೂಟ್ರಾಸ್ಯುಟಿಕಲ್ಸ್ ಕ್ಷೇತ್ರದಲ್ಲಿ ಇಮಾಮಿ, ಹಿಮಾಲಯ ವೆಲ್ನೆಸ್, ನೋವಸ್ ಲೈಫ್ ಸೈನ್ಸಸ್ ಮತ್ತು ಝೋಯಿಕ್ ಫಾರ್ಮಸುಟಿಕಲ್ಸ್ ಕಂಪನಿಗಳನ್ನು ಪರಿಗಣಿಸಲಾಗಿದೆ ಎಂದು ಅವರು ನುಡಿದರು.
ಈ ಕಂಪನಿಗಳು ಉತ್ತಮ ರಸ್ತೆ, ನೀರು, ವಿದ್ಯುತ್, ಕೌಶಲ ಕೇಂದ್ರಗಳು, ತ್ಯಾಜ್ಯ ನಿರ್ವಹಣೆ ವ್ಯವಸ್ಥೆ, ಬಂದರುಗಳ ಲಭ್ಯತೆ ಮುಂತಾದ ಮೂಲಸೌಕರ್ಯಗಳನ್ನು ನಮ್ಮಿಂದ ಕೋರಿವೆ. ಇವುಗಳನ್ನು ಒದಗಿಸಲು ಸರಕಾರವು ತ್ವರಿತ ಗತಿಯಲ್ಲಿ ಕೆಲಸ ಮಾಡಲಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಬಂಡವಾಳ ಹರಿವು ಮತ್ತು ಉದ್ಯೋಗ ಸೃಷ್ಟಿ ಹೆಚ್ಚಳ ಸಾಧ್ಯವಾಗಲಿದೆ ಎಂದು ಪಾಟೀಲ ಹೇಳಿದರು.
ಈ ಸಂದರ್ಭದಲ್ಲಿ ಏಕಸ್ ಇನ್ಫ್ರಾದ ವ್ಯವಸ್ಥಾಪಕ ನಿರ್ದೇಶಕ ವಿಕ್ರಮ್ ಎಸ್ ಅಣ್ಣಪ್ಪ, ಸಿಬಿಆರ್.ಇ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಸೌರವ್ ಹಾಜ್ರಾ, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಉಪಸ್ಥಿತರಿದ್ದರು.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.