ವಿಜಯಪುರ: ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ನವೆಂಬರ್ ೧೫ ರಿಂದ ೨೮ರವರೆಗೆ ಯಶಸ್ವಿಯಾಗಿ ಹಮ್ಮಿಕೊಂಡು ಯಶಸ್ವಿಗೊಳಿಸಿ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚಿಸಿದರು.
ಶುಕ್ರವಾರ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ `ಸಭೆಯ ಅಧ್ಯಕ್ಷತೆ ವಹಿಸಿ,ಪ್ರತಿ ತಿಂಗಳು ಮೊದಲನೇ ಶನಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಒಂದು ಗ್ರಾಮ ಆಯ್ಕೆ ಮಾಡಿಕೊಂಡು ಆರೋಗ್ಯ ಮೇಳವನ್ನು ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಏರ್ಪಡಿಸಿ ಆ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು.
ಸರ್ಕಾರದ ಮಾರ್ಗಸೂಚಿಯ ಪ್ರಕಾರ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಬೇಕು ಎಂದು ಹೇಳಿದರು.ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಎಚ್.ಎನ್.ಎಸ್ ಸಮೀಕ್ಷಾ ಕಾರ್ಯಕ್ರಮದ ಕುರಿತು,ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದಡಿ ಸರಕಾರಿ ಶಾಲೆಗಳಲ್ಲಿ,ಅಂಗನವಾಡಿ,ಅನುದಾನಿತ ಶಾಲೆಯ ಶಾಲಾ ಮಕ್ಕಳ ವೈದ್ಯಕೀಯ ತಪಾಸಣೆ ಕೈಗೊಳ್ಳುವುದು. ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಉಚಿತ ಚಿಕಿತ್ಸಾ ಆಂದೋಲನಾ ಕಾರ್ಯಕ್ರಮವನ್ನು ದಿನಾಂಕ: ೧೫-೧೧-೨೦೨೩ ರಿಂದ ೦೨-೧೨-೨೦೨೩ ರವರೆಗೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ನಡೆಸುವಂತೆ ಸೂಚಿಸಿದರು.
ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿಯನ್ನು ವೈದ್ಯಾಧಿಕಾರಿಗಳು ಸಿಬ್ಬಂದಿ ವರ್ಗದವರು ಪ್ರತಿದಿನ ನಿರ್ವಹಿಸಬೇಕು.ಬಯೋಮೆಟ್ರಿಕ್ ಮೂಲಕ ಹಾಜರಾತಿ ಅಳವಡಿಸಿಕೊಳ್ಳದ ಅಧಿಕಾರಿ,ಸಿಬ್ಬಂದಿಗಳ ವೇತನ ತಡೆ ಹಿಡಿಯಲಾಗುವುದು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಬಸವರಾಜ ಹುಬ್ಬಳ್ಳಿ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು,
ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳಾದ ಡಾ.ಕೆ ಡಿ ಗುಂಡಬಾವಡಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

