Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೈ ಚಾಚಿ ಒಳ್ಳೆಯ ಗೆಳೆಯರಿಗೆ

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಧ್ಯಮ‌ ಅಕಾಡೆಮಿ ಕೆಯೂಡಬ್ಲ್ಯೂಜೆ ಹೋರಾಟದ ಫಲ
(ರಾಜ್ಯ ) ಜಿಲ್ಲೆ

ಮಾಧ್ಯಮ‌ ಅಕಾಡೆಮಿ ಕೆಯೂಡಬ್ಲ್ಯೂಜೆ ಹೋರಾಟದ ಫಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮನೆಯಂಗಳದಲ್ಲಿ ಜಿ.ಕೆ.ಸತ್ಯ ಮಾತು | ಕೆಯುಡಬ್ಲ್ಯೂಜೆ ಗೆ ಬಂದಿದ್ದ ಅಂದಿನ ಪ್ರಧಾನಿ ನೆಹರು


ಬೆಂಗಳೂರು: ಆಗಿನ ಪ್ರಧಾನಿ ಜವಹರಲಾಲ್ ನೆಹರು ಅವರು ಕೂಡ ಕೆಯುಡಬ್ಲ್ಯೂಜೆ ಗೆ ಬಂದಿದ್ದರು. ಕೆಯುಡಬ್ಲ್ಯೂಜೆ ಹೋರಾಟದ ಪಲವಾಗಿಯೇ ಅಂದು ಪತ್ರಿಕಾ ಅಕಾಡೆಮಿ ಸ್ಥಾಪನೆಯಾಯಿತು.  ಭಾರತೀಯ ಪತ್ರಕರ್ತರ ಸಂಘಟನೆಯಲ್ಲಿ ಕೆಯುಡಬ್ಲ್ಯೂಜೆ ಪಾತ್ರ ಹಿರಿದು..
ಹೀಗೆಂದವರು ಎಂಬತ್ತೊಂದು ವಸಂತ ತುಂಬಿರುವ
ಹಿರಿಯ ಪತ್ರಕರ್ತ, ಕೆಯುಡಬ್ಲೂಜೆ ಮಾಜಿ ಅಧ್ಯಕ್ಷ ಜಿ.ಕೆ.ಸತ್ಯ ಅವರು.
ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಗೌರವ ಸ್ವೀಕರಿಸಿ ಮಾತನಾಡಿದರು.
ಪತ್ರಕರ್ತರ ಸಂಘಟನೆ ಮತ್ತು ಕಾರ್ಯಚಟುವಟಿಗಳಲ್ಲಿ ತನ್ನ ಜೀವಮಾನದ ಬಹುಪಾಲಿನ ಸಮಯ ಕಳೆದಿರುವೆ. ಆಗ 26 ಜಿಲ್ಲೆಗೂ ಪ್ರವಾಸ ಮಾಡಿ ಸಂಘಟನೆ ಮಾಡಿದ್ದೆವು ಜಿ.ಕೆ. ಸತ್ಯ ತಿಳಿಸಿದರು.
ಕೆಯೂಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತ್ರತ್ವದಲ್ಲಿ ಕಳೆದ ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಹಿರಿಯ ಪತ್ರಕರ್ತರನ್ನು ಗೌರವಿಸುವ ಮನೆಯಂಗಳದಲ್ಲಿ ಮನತುಂಬಿ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಇದರಿಂದ ಎಷ್ಟೋ ಜನರ ಭಾವ ಬಂದ ಬೆಸೆದಂತಾಗುತ್ತದೆ ಎಂದರು.
ರಾಜ್ಯ ಸಂಘದಲ್ಲಿ ಎರಡು ಅವಧಿಗೆ ಪ್ರಧಾನ ಕಾರ್ಯದರ್ಶಿ, ಮತ್ತು ಮೂರು ಬಾರಿ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿ ಸುಮಾರು ಮೂರು ದಶಕಗಳ ಕಾಲ ಪತ್ರಕರ್ತರ ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಸಾರ್ಥಕತೆ ನನಗಿದೆ ಎಂದರು.
ಆಗಿನ ಪ್ರಧಾನಿಗಳಾದ ಜವಹರಲಾಲ್ ನೆಹರು ಅವರು ಕೆಯುಡಬ್ಲ್ಯೂಜೆ ಗೆ ಬಂದಿದ್ದರು. ತೊಂಬತ್ತು ವರ್ಷಗಳ ಬಹುದೊಡ್ಡ ಇತಿಹಾಸ ಈ ಸಂಘಟನೆಗಿದೆ ಎಂದರು.
ಇತರ ಕಾರ್ಮಿಕ ಸಂಘಟನೆಗು,  ಪತ್ರಕರ್ತರ  ಕಾರ್ಮಿಕ ಸಂಘಟನೆಗೂ ಬಹಳ ವ್ಯತ್ಯಾಸ ಇರುವುದಾಗಿ ಪ್ರತಿಪಾದಿಸುವ ಅವರು ಪತ್ರಕರ್ತರ ಹಿತ ರಕ್ಷಣೆ, ಆಡಳಿತ ವರ್ಗ ಮಾಡಬೇಕಾದ ಕೆಲಸ ಸೇರಿದಂತೆ ಹತ್ತಾರು ಕೆಲಸವನ್ನು ಈ ಸಂಘಟನೆ ಮಾಡಿಕೊಂಡು ಬಂದಿದೆ ಎಂದರು. ಇದೇ ಸಂದರ್ಭದಲ್ಲಿ
ಅವರು ಕಾನೂನು ಬದ್ದವಾಗಿ ನಡೆಸಿದ ಹೊರಾಟವನ್ನು ಮೆಲುಕು ಹಾಕಿದರು
ಮಾಧ್ಯಮ ಅಕಾಡೆಮಿ:
ಕೆಯುಡಬ್ಲ್ಯೂಜೆ ಹೋರಾಟದ ಪಲವಾಗಿ ಪತ್ರಿಕಾ ಅಕಾಡೆಮಿ ರಾಜ್ಯದಲ್ಲಿ ಸ್ಥಾಪನೆಯಾದದ್ದು ಇತಿಹಾಸ .
ಸಿಎಂ ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ
ವಾರ್ತಾ ಸಚಿವರಾಗಿದ್ದಾಗ
ನಮ್ಮ ಪ್ರಸ್ತಾವನೆಗೆ ಮನ್ನಣೆ ಸಿಕ್ಕಿತು. ಸರ್ಕಾರದ ಸೂಚನೆ ಮೇರೆಗೆ ಕೇರಳ ರಾಜ್ಯದಲ್ಲಿ ಪತ್ರಕರ್ತರ ಅಕಾಡೆಮಿ ಪ್ರಾರಂಭವಾಗಿರುವ ಬಗ್ಗೆ ಅಧ್ಯಯನ ಮಾಡಿ ವರದಿ ನೀಡಿದೆವು. ಅದಕ್ಕೆ ಸ್ಪಂದಿಸಿದ ಸಚಿವರು ಅಕಾಡೆಮಿಯ ನಿಯಮ ಮತ್ತು ದ್ಯೇಯೋದ್ಧೇಶಗಳ ಕುರಿತು ಕರಡು ಸಿದ್ಧಪಡಿಸುವಂತೆ ಸೂಚಿಸಿದರು. ಅದರಂತೆ ನಾನು ಮತ್ತು ಅರ್ಜುನ್ ದೇವ್ ಅವರು ಸೇರಿದಂತೆ ಒಟ್ಟಾಗಿ ಸಿದ್ಧಪಡಿಸಿದೆವು. ಪತ್ರಿಕಾ ಅಕಾಡೆಮಿ ಸ್ಥಾಪನೆಯಾಯಿತು. ಈಗ ಮಾಧ್ಯಮ ಅಕಾಡೆಮಿ ಆಗಿ ಬದಲಾಗಿದೆ ಎಂದು ಹೆಮ್ಮೆಯಿಂದಲೇ ಅವರು ಹೇಳಿದರು.
ಸಂಕಷ್ಟದಲ್ಲಿದ್ದ ಪತ್ರಕರ್ತರ ಕುಟುಂಬಕ್ಕೆ ನೆರವು ದೇಶಕ್ಕೇ ಮಾದರಿ
ಕೊವಿಡ್ ಸಂದರರಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವ ಅನೇಕರು ಮರಣ ಹೊಂದಿದ ಸಂದರ್ಭಗಳಲ್ಲಿ  ಸಂಕಷ್ಟಕ್ಕೀಡಾದ ಅವರ ಕುಟುಂಬಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೆರವಿಗೆ ದಾವಿಸಿದ್ದು, ತಲಾ 5 ಲಕ್ಷ ಪರಿಹಾರ ಕೊಡಿಸಿದ್ದು, ಈ ನಿಟ್ಟಿನಲ್ಲಿ ಶಿವಾನಂದ ತಗಡೂರು ಅವರ ಹೋರಾಟ ಶ್ಲಾಘನೀಯ. ಸರಕಾರದ ಮನ ಒಲಿಸಿ ಒತ್ತಡ ಹಾಕಿ ನೆರವು ಕೊಡಿಸಿದ ಅವರ ಪರಿಶ್ರಮವನ್ನು ಯೂರೂ ಮರೆಯಬಾರದು. ಇದು ದೇಶಕ್ಕೇ ಮಾದರಿ ಎಂದರು.
ಪತ್ರಕರ್ತರು ತಮ್ಮ ವೃತ್ತಿ ಜೊತೆಗೆ ಬದ್ಧತೆಯನ್ನು ಇಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ
ಜಿ.ಕೆ ಸತ್ಯ ಅವರ ಪತ್ನಿ ಜಿ. ಎಸ್ ವಿಜಯಾ   ಅವರನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಗೆ ಜಿ.ಕೆ.ಸತ್ಯ ಅವರ ಸೇವೆ ಅನನ್ಯ ಎಂದರು.
ಪ್ರಧಾನ ಕಾರ್ಯದರ್ಶಿ
ಜಿ.ಸಿ ಲೋಕೇಶ ಸ್ವಾಗತಿಸಿದರು. ಖಜಾಂಚಿ ಎಂ.ವಾಸುದೇವ ಹೊಳ್ಳ ವಂದಿಸಿದರು. ರಾಜ್ಯ ಸಮಿತಿ ಸದಸ್ಯ ಕೆ.ಆರ್  ದೇವರಾಜ್, ಪತ್ರಿಕಾ ಛಾಯಾಗ್ರಾಹಕ ಶರಣ ಬಸಪ್ಪ ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೈ ಚಾಚಿ ಒಳ್ಳೆಯ ಗೆಳೆಯರಿಗೆ

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೈ ಚಾಚಿ ಒಳ್ಳೆಯ ಗೆಳೆಯರಿಗೆ
    In ವಿಶೇಷ ಲೇಖನ
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.