ಬಸವನಬಾಗೇವಾಡಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಜೈನ್ ಪ್ಲಾಟ್ನಲ್ಲಿ ನಿರ್ಮಾಣಗೊಂಡಿರುವ ಪುರಸಭೆ ಕಾರ್ಯಾಲಯದ ನೂತನ ಕಟ್ಟಡದಲ್ಲಿ ಶನಿವಾರ ಸತ್ಯನಾರಾಯಣ ಪೂಜೆಯೊಂದಿಗೆ ಕಚೇರಿ ಕಾರ್ಯಾರಂಭಗೊಂಡಿತು.
ಪಟ್ಟಣದ ತೆಲಗಿ ರಸ್ತೆಯಲ್ಲಿ ಇದುವರೆಗೂ ಪುರಸಭೆ ಕಚೇರಿ ಕಟ್ಟಡದಲ್ಲಿ ಸಾರ್ವಜನಿಕರಿಗೆ ಪುರಸಭೆ ಸೇವೆ ಒದಗಿಸುತ್ತಿದೆ. ಇದೀಗ ವಿಶಾಲವಾದ ಪ್ರದೇಶದಲ್ಲಿ ಅಂದಾಜು ರೂ. ೨ ಕೋಟಿಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾಣವಾಗಿರುವ ಭವ್ಯವಾದ ಪುರಸಭೆ ಕಚೇರಿಯ ನೂತನ ಕಟ್ಟಡದಲ್ಲಿ ಇಂದಿನಿಂದ ಜನರಿಗೆ ಸೇವೆ ಲಭ್ಯವಾಗಲಿದೆ.
ಬೆಳಗ್ಗೆ ೯ ಗಂಟೆಗೆ ಸತ್ಯನಾರಾಯಣ ಪೂಜೆಯು ಧಾರ್ಮಿಕ ವಿಧಿ ವಿಧಾನದೊಂದಿಗೆ ಪುರಸಭೆಯ ಎಲ್ಲ ಅಧಿಕಾರಿ ವರ್ಗ,ಸಿಬ್ಬಂದಿ, ಪುರಸಭೆ ಸದಸ್ಯರು, ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಪೂಜೆ ನೆರವೇರಿದ ನಂತರ ಸ್ಥಳೀಯ ಪೂಜ್ಯರಾದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪುರಸಭೆ ಕಚೇರಿಯ ನೂತನ ಕಟ್ಟಡದಲ್ಲಿ ಹಿಂದೆ ಒಮ್ಮೆ ಪೂಜೆ ನೆರೇವರಿದೆ. ಇದೀಗ ಸಚಿವ ಶಿವಾನಂದ ಪಾಟೀಲ, ಜಿಲ್ಲಾಧಿಕಾರಿ, ಆಡಳಿತಾಧಿಕಾರಿ ಉಪವಿಭಾಗಾಧಿಕಾರಿ, ಪುರಸಭೆ ಸದಸ್ಯರ ಸರ್ವರ ಸಹಮತದೊಂದಿಗೆ ನೂತನ ಕಟ್ಟಡದಲ್ಲಿ ಸಾರ್ವಜನಿಕರಿಗೆ ಸೇವೆ ನೀಡಲು ಇಂದು ಪೂಜೆ ನೆರವೇರಿಸುವ ಮೂಲಕ ಕಾರ್ಯಾರಂಭ ಮಾಡಲಾಗುತ್ತಿದೆ. ಸುಂದರ, ವಿಶಾಲವಾದ ಪ್ರದೇಶದಲ್ಲಿ ನಿರ್ಮಾಣವಾಗಿರುವ ಕಟ್ಟಡವು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಅನುಕೂಲವಾಗುತ್ತದೆ. ಇಂದಿನಿಂದಲೇ ನೂತನ ಕಟ್ಟಡದಲ್ಲಿ ಸಾರ್ವಜನಿಕರಿಗೆ ಸೇವೆ ನೀಡಲಾಗುತ್ತದೆ.ಸಾರ್ವಜನಿಕರು ನೂತನ ಪುರಸಭೆ ಕಟ್ಟಡಕ್ಕೆ ಬಂದು ತಮ್ಮ ಕಾರ್ಯಗಳನ್ನು ಮಾಡಿಕೊಳ್ಳಬೇಕು. ನೂತನ ಕಟ್ಟಡಕ್ಕೆ ಪುರಸಭೆ ಸ್ಥಳಾಂತರವಾಗಿರುವ ಕುರಿತು ಸಾರ್ವಜನಿಕರಿಗೆ ಗೊತ್ತಾಗುವಂತೆ ಪ್ರಚಾರ ಕೈಗೊಳ್ಳಲಾಗುವುದು ಎಂದರು.
ಪೂಜಾ ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ನಜೀರ ಗಣಿ, ಅಬ್ದುಲ್ ಚೌಧರಿ, ರವಿ ನಾಯ್ಕೋಡಿ, ಪ್ರವೀಣ ಪೂಜಾರಿ, ಅನ್ನಪೂರ್ಣ ಕಲ್ಯಾಣಿ, ಲಕ್ಷ್ಮೀಬಾಯಿ ಬೆಲ್ಲದ, ರೇಖಾ ಬೆಕಿನಾಳ, ಜಗದೇವಿ ಗುಂಡಳ್ಳಿ, ರೇಖಾ ಸೊನ್ನದ, ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಬಿ.ಕೆ.ಕಲ್ಲೂರ, ಲೋಕನಾಥ ಅಗರವಾಲ, ಪುರಸಭೆ ವ್ಯವಸ್ಥಾಪಕ ವಿರೇಶ ಹಟ್ಟಿ, ಅಭಿಯಂತರ ಮಹಾದೇವಿ ಜಂಬಗಿ, ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ಲೆಕ್ಖಿಗ ಗುರು ಮಾಗಾವಿ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

