Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದುಷ್ಟಶಕ್ತಿಗಳು ಭಾರತದತ್ತ ನೋಡದಂತೆ ಮಾಡುವುದೇ ಆರೆಸ್ಸೆಸ್ ಧ್ಯೇಯ
(ರಾಜ್ಯ ) ಜಿಲ್ಲೆ

ದುಷ್ಟಶಕ್ತಿಗಳು ಭಾರತದತ್ತ ನೋಡದಂತೆ ಮಾಡುವುದೇ ಆರೆಸ್ಸೆಸ್ ಧ್ಯೇಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆರೆಸ್ಸೆಸ್ ನಗರ ವಾರ್ಷಿಕೋತ್ಸವ | ಉತ್ತರ ಕರ್ನಾಟಕ ಪ್ರಾಂತ ಪ್ರಚಾರಕ ನರೇಂದ್ರ ಸ್ಪಷ್ಠನೆ

ವಿಜಯಪುರ: ಕೊರೊನಾದಂಥ ಅನೇಕ ವೈರಸ್ ನಮ್ಮ ಜೊತೆಗಿದ್ದು ಜಾತಿಗಳ ನಡುವೆ ವಿಘಟನೆ ಮತ್ತು ಹಿಂದೂ ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತವೆ ಎಂದು ಆರ್ ಎಸ್ ಎಸ್ ಉತ್ತರ ಕರ್ನಾಟಕ ಪ್ರಾಂತ ಪ್ರಚಾರಕ ನರೇಂದ್ರ ಹೇಳಿದ್ದಾರೆ.
ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಆರ್ ಎಸ್ ಎಸ್ ನಗರ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಹಿಂದೂ ಎಂಬುದು ಕೇವಲ ಮೆರವಣಿಗೆಯ ಘೋಷಣೆಗೆ ಸೀಮಿತವಾಗಬಾರದು. ಪ್ರತಿದಿನ ಹಿಂದೂ ಆಗಬೇಕು. ಹಿಂದೂ ಸಮಾಜ ಎಷ್ಟು ಬೇಗ ಸಂಘಟಿತವಾಗುತ್ತದೆಯೋ ಅಷ್ಟೇ ಸಮಯದಲ್ಲಿ ಗುಂಪುಗಳಾಗಿ ವಿಭಜನೆಯಾಗುತ್ತದೆ. ಇದು ಸಮಾಜಕ್ಕೆ ದೊಡ್ಡ ಸವಾಲಾಗಿದೆ. ದುಷ್ಟಶಕ್ತಿಗಳು ಈ ರೀತಿಯ ಸವಾಲುಗಳನ್ನು ಭಾರತದಲ್ಲಿ ಯಾವಾಗಲೂ ಇರಿಸುತ್ತಿರುತ್ತವೆ. ಅವುಗಳನ್ನು ನಾವು ಸಂಘಟಿತರಾಗಿ ಸಮರ್ಥವಾಗಿ ಎದುರಿಸಬೇಕಿದೆ ಎಂದು ಹೇಳಿದರು.
ಅಧಿಕಾರಿಯೊಬ್ಬರನ್ನು ನಾವು ಕರೆದು ಚಹಾ ಕುಡಿಸುತ್ತೇವೆ. ಆದರೆ ಪೌರ ಕಾರ್ಮಿಕ ಬಂಧುಗಳನ್ನು ಕರೆದು ಚಹಾ ಕುಡಿಸುತ್ತೆವೆಯೇ? ಈ ಕಾರಣಕ್ಕಾಗಿಯೇ ಅವರು ರಾಬರ್ಟ್ ‌ಮೊದಲಾದ ಹೆಸರುಗಳನ್ನು ಪಡೆಯುವಂತೆ ಮಾಡುತ್ತಿದ್ದೇವೆ. ಅನೇಕ ವೈರುದ್ಯಗಳು ಎದುರಿಸುತ್ತಿರುವ‌ ಪ್ರಪಂಚದ ಎಲ್ಲ ಸಮಸ್ಯೆಗಳಿಗೆ ಭಾರತ ಆಶಾಕಿರಣ ಮತ್ತು ಪರಿಹಾರವಾಗಿದೆ. ಭಾರತದ ವಸುದೈವ‌ ಕುಟುಂಬಕಂ ಎಂಬ ಧ್ಯೆಯವೇ ಇಡೀ ಜಗತ್ತನ್ನು ಕೇಂದ್ರಿಕರಿಸುತ್ತಿದೆ. ಹೀಗಾಗಿ ಎಲ್ಲ ದೇಶಗಳನ್ನು ಸಕ್ಷಮ ಮಾರ್ಗದಲ್ಲಿ ಸಾಗಿಸಬೇಕಾದ ಆದ್ಯ ಜವಾಬ್ದಾರಿ ಭಾರತದ ಮೇಲಿದೆ. ಕೊರೊನಾ ಸಂದರ್ಭದಲ್ಲಿ ಅನೇಕ ರಾಷ್ಟ್ರಗಳು ಕೋವಿಡ್ ಲಸಿಕೆ ಕಪಾಟಿನಲ್ಲಿರಿಸಿಕೊಂಡಿದ್ದವು. ಆದರೆ, ಭಾರತ ಮಾತ್ರ ಲಸಿಕೆಗಳನ್ನು‌ ಬೇರೆ ಬಡ ರಾಷ್ಟ್ರಗಳಿಗೂ ನೀಡಿ ಮಾನವೀಯತೆ ಮೆರೆದಿದೆ ಎಂದು ಅವರು ಹೇಳಿದರು.
ಸಂವಿಧಾನ ಸಮರ್ಪಣೆ ಸಂದರ್ಭದಲ್ಲಿ ಡಾ. ಬಾಬಾಸಾಹೇಬರು ತಮ್ಮ ಭಾಷಣದಲ್ಲಿ ಅನೇಕ ಸಂದರ್ಭದಲ್ಲಿ ಹಿಂದೂ ಸಮಾಜ ಒಂದಾಗಲಿಲ್ಲ. ಇದು ಮತ್ತೆ ಎಲ್ಲಿ ಮರಕಳುಸುತ್ತಿದ್ದೇಯೋ ಎಂಬ ಆತಂಕ ಹೊರಹಾಕಿದ್ದರು. ಮೊಘಲ್ ಆಕ್ರಮಣ, ಆಂಗ್ಲರ ಆಳ್ವಿಕೆ ಹೀಗೆ ಅನೇಕ ವಿಷಯ ಉಲ್ಲೇಖಿಸಿ ಹಿಂದೂ ಸಮಾಜ ಒಂದಾಗಲಿಲ್ಲ ಎಂಬ ಆಂತಕವನ್ನು ಡಾ. ಬಾಬಾಸಾಹೇಬರು ಅಂದೇ ವ್ಯಕ್ತಪಡಿಸಿದ್ದರು. ಮಹಾಭಾರತ ಯುದ್ಧದ ನಂತರ ಅನೇಕ ವೈಭವದಿಂದಾಗಿ ಹಿಂದೂ ಸಮಾಜ ಕಂಗೊಳಿಸಿತ್ತು. ಆದರೆ, ನಂತರ ತನ್ನನ್ನು ತಾನು ಮರೆತುಕೊಂಡಿತು. ಇದರಿಂದ ಹಿಂದೂ ಸಮಾಜದ ಮೇಲೆ ಆಕ್ರಮಣ ಮಾಡುವಂತಾಯಿತು. ನಿರಂತರ ಆಕ್ರಮಣದಿಂದಾಗಿ ಉಂಟಾದ ಅನೇಕ ಬಿರುಕುಗಳನ್ನು ಸರಿಮಾಡಲು ನಮ್ಮ ಸಾಧು- ಸಂತರು ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಒಳಜಗಳ, ಮೇಲು- ಕೀಳು ಎಂಬ ಮನೋಭಾವದಿಂದಾಗಿ ಹಿಂದೂ ಸಮಾಜಕ್ಕೆ ಭವಿಷ್ಯವಿಲ್ಲ ಎಂದು ಅನೇಕರು ಭಾವಿಸಿದ್ದರು, ಆದರೆ ಅಂದು ತರುಣ ಯುವಕ ಡಾ. ಹೆಗಡೆವಾರ ಆರ್ ಎಸ್ ಎಸ್ ಸ್ಥಾಪಿಸಿ ಹಿಂದೂ ಸಮಾಜಕ್ಕೆ ಎದುರಾಗಿದ್ದ ಕೊರತೆಯನ್ನು ನೀಗಿಸಿದರು ಎಂದು ನರೇಂದ್ರ ಹೇಳಿದರು.
ನಗರದ ಖ್ಯಾತ ವೈದ್ಯ ಡಾ. ರಮೇಶ ಮಾನಕರೆ ಮಾತನಾಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಿದಂಬರ ಕರಮಣಕರ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಮಾಜಿ ಶಾಸಕ ರಮೇಶ ಭೂಸನೂರ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಉಮೇಶ ಕಾರಜೋಳ, ಡಾ. ಬಾಬು ರಾಜೇಂದ್ರ ನಾಯಕ ಸೇರಿದಂತೆ ಸಾವಿರಾರು ಗಣವೇಷಧಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.