Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರವನ್ನು ಸಮರ್ಥವಾಗಿ ಎದುರಿಸುತ್ತಿರುವ ಸರಕಾರ
(ರಾಜ್ಯ ) ಜಿಲ್ಲೆ

ಬರವನ್ನು ಸಮರ್ಥವಾಗಿ ಎದುರಿಸುತ್ತಿರುವ ಸರಕಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರವಾಡದ ದ್ಯಾಮವ್ವದೇವಿ ದೇವಸ್ಥಾನ ಉದ್ಘಾಟನೆ ಮತ್ತು ಜಾತ್ರೆಯಲ್ಲಿ ಪಾಲ್ಗೊಂಡ ಸಚಿವ ಎಂ.ಬಿ.ಪಾಟೀಲ ಸ್ಪಷ್ಠನೆ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ಸೋಮವಾರ ಬಬಲೇಶ್ವರ ತಾಲೂಕಿನ ಸಾರವಾಡ ದ್ಯಾಮವ್ವದೇವಿ ಮತ್ತು ವಿಜಯಪುರ ನಗರದ ಬುರಣಾಪುರ ರಸ್ತೆಯಲ್ಲಿರುವ ಘತ್ತರಗಿ ಭಾಗಮ್ಮ ದೇವಿಯ ಜಾತ್ರೆಯಲ್ಲಿ ಪಾಲ್ಗೋಂಡು ದೇವಿಯ ಆಶೀರ್ವಾದ ಪಡೆದರು.
ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ನಡೆಯುತ್ತಿರುವ ದ್ಯಾಮವ್ವದೇವಿ ದೇವಸ್ಥಾನದ ಉದ್ಘಾಟನೆ ಮತ್ತು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಂಡ ಸಚಿವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಾರವಾಡ ಗ್ರಾಮಸ್ಥರು ಸಚಿವರನ್ನು ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಎಂ. ಬಿ. ಪಾಟೀಲ ಅವರು, ದೇಶದಲ್ಲಿ ಈಗ ಐದಾರು ರಾಜ್ಯಗಳು ಭೀಕರ ಬರದಿಂದ ತತ್ತರಿಸಿವೆ. ನಮ್ಮ ರಾಜ್ಯದಲ್ಲಿಯೂ ಬರಗಾಲ ಉಂಟಾಗಿದ್ದು, ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದೆ. ರಾಜ್ಯ ಸರಕಾರ ಬರವನ್ನು ಸಮರ್ಥವಾಗಿ ಎದುರಿಸುತ್ತಿದ್ದು, ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ಇಲ್ಲಿನ ದ್ಯಾಮವ್ವದೇವಿ ಎಲ್ಲರಿಗೂ ಆಯುಷ್ಯ, ಆರೋಗ್ಯ ನೀಡಲಿ. ನಾಡಿನಲ್ಲಿ ಉತ್ತಮ ಮಳೆ ಬಂದು, ಬೆಳೆ ಸಮೃದ್ಧವಾಗಿರುವಂತೆ ಆಶೀರ್ವಾದ ಮಾಡಿ ನಮ್ಮೆಲ್ಲರನ್ನು ಕರುಣಿಸಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಾರವಾಡ ಗ್ರಾಮದ ಹಿರಿಯರಾದ ಕಲ್ಲಯ್ಯ ಲೋಕಯ್ಯ ಹಿರೇಮಠ, ಸದಾಶಿವ ಚಿಕರಡ್ಡಿ, ಮಲ್ಲಣ್ಣ ಕೋಟಿ, ದುಂಡಪ್ಪ ಕೋಟಿ, ಶಿವಪ್ಪ ಕೋಟಿ, ಚಂದ್ರಕಾಂತ ವಾಲಿ, ಶಿವಪ್ಪ ಬಡಿಗೇರ, ದುಂಡಪ್ಪ ಕೋಟಿ, ಪ್ರಭು ಕೋಟಿ, ಸಿದ್ರಾಮಪ್ಪ ಬಿದರಿ, ರಾಜಶೇಖರ ಇನಾಮದಾರ, ರುದ್ರಗೌಡ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಸಚಿವರು ವಿಜಯಪುರ ನಗರದ ಹೊರವಲಯದ ಬುರಣಾಪುರ ರಸ್ತೆಯಲ್ಲಿ ಬಿ. ಎಸ್. ಬಿರಾದಾರ ಅವರ ಸ್ಟೋನ್ ಕ್ರಷರ್ ನಲ್ಲಿ ನಡೆಯುತ್ತಿರುವ ಶ್ರೀ ಘತ್ತರಗಿ ಭಾಗ್ಯವಂತಿದೇವಿಯ 15ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಂಡರು. ದೇವಿಯ ದರ್ಶನ ಪಡೆದರು. ಅಲ್ಲದೇ, ಅಲ್ಲಿಯೇ ಉಪಸ್ಥಿತರಿದ್ದ ಜಮಖಂಡಿ ತಾಲೂಕಿನ ಆಲಗೂರಿನ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಮುಖಂಡರಾದ ಬಿ. ಎಸ್. ಬಿರಾದಾರ, ಸಿದರಾಯ ಆಡಿನ, ಎಸ್. ಸಿ. ಚಿಕರಡ್ಡಿ, ಎಂ. ಆರ್. ಪಾಟೀಲ ಬಳ್ಳೊಳ್ಳಿ, ನಂದೆಗೋಳ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.