ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತು ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯ ೧೩ ಗ್ರಾಮಗಳಲ್ಲಿ ಡಿ.೨ ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಉಪ ವಿಭಾಗಾಧಿಕಾರಿಗಳು ಮನಗೂಳಿ ತಾಂಡಾ-೨ರ ಸೇವಾಲಾಲ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಮುಳಸಾವಳಗಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ವಿಜಯಪುರ ಗ್ರೇಡ್-೨ ತಹಶೀಲ್ದಾರ ಅವರು ಅಂಕಲಗಿ ಶ್ರೀ ದುಸ್ಸಂಗರಾಯನ ದೇವಸ್ಥಾನದ ಆವರಣದಲ್ಲಿ, ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ ಅವರು ಕಾತ್ರಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಕೋಟ್ಯಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ಕಾಶಿನಕುಂಟೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಹಾಗೂ ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ ಅವರು ಆನಂದಮಠ ಗುಡಿಹಾಳನಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ತಾಳಿಕೋಟೆ ತಹಶೀಲ್ದಾರ ಅವರು ಕೂಚಬಾಳ ಶ್ರೀ ಭೀಮಾಶಂಕರ ಮಠದ ಆವರಣದಲ್ಲಿ, ಇಂಡಿ ಗ್ರೇಡ್-೨ ತಹಶೀಲ್ದಾರ ಅವರು ಮಾವಿನಹಳ್ಳಿ ಶ್ರೀ ಹನುಮಾನ ದೇವಸ್ಥಾನದಲ್ಲಿ, ಚಡಚಣ ಗ್ರೇಡ್-೨ ತಹಶೀಲ್ದಾರ ಅವರು ಹಾಲಹಳ್ಳಿ ಶ್ರೀ ಹನುಮಾನ ದೇವಸ್ಥಾನದಲ್ಲಿ, ಸಿಂದಗಿ ಗ್ರೇಡ್-೨ ತಹಶೀಲ್ದಾರ ಅವರು ನಂದಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ್ತು ಆಲಮೇಲ ತಹಶೀಲ್ದಾರ ಅವರು ಶಿರಸಗಿ ಗ್ರಾಮದ ಸರಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಪಿಂಚಣಿ ಅದಾಲತ್ ನಡೆಯುವ ಗ್ರಾಮಗಳಲ್ಲಿ ಸಾಮಾಜಿಕ ಭದ್ರತೆ ಪಿಂಚಣಿ ಫಲಾನುಭವಿಗಳಿಗೆ ಎನ್.ಪಿ.ಸಿ.ಐ. ಮ್ಯಾಪಿಂಗ್ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್-ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ತಪ್ಪದೇ ಮಾಡಿಸುವಂತೆ ಹಾಗೂ ಪಿಂಚಣಿ ಅದಾಲತ್ನಲ್ಲಿ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
