ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ-೫೦ರ ಅಂಗವಾಗಿ ವಿಜಯಪುರ ನಗರದ ಗಾಂಧಿಚೌಕನಲ್ಲಿರುವ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದ ಬಯಲು ರಂಗಮಂದಿರದಲ್ಲಿ ನವೆಂಬರ್ ೨೮ ರಂದು ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ.
ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಭಾಗವಹಿಸಲಿದ್ದಾರೆ.
ವಿಶೇಷ ಅಹ್ವಾನಿತರಾಗಿ ಶಾಲಾ ಶಿಕ್ಷಣ ಇಲಾಖೆ (ಪದವಿ-ಪೂರ್ವ) ಉಪನಿರ್ದೇಶಕ ಡಾ.ಚಂದ್ರಶೇಖರ ಕೆ.ಹೊಸಮನಿ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಪ್ರಾಚಾರ್ಯರಾದ ಸಿ.ಬಿ.ನಾಟೀಕಾರ ಅವರು ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಮಾರಿ ರಕ್ಷಂದ ತಿಳಗೊಳ ಅವರಿಂದ ಸುಗಮ ಸಂಗೀತ, ಕುಮಾರಿ ದಿವ್ಯಾ ಭೀಸೆ ಮತ್ತು ಕುಮಾರಿ ದಿಕ್ಷಾ ಭೀಸೆ ಅವರಿಂದ ಸಮೂಹ ನೃತ್ಯ, ವಿನೋದ ಕಟಗೇರಿ ಅವರಿಂದ ಜಾನಪದ ಗೀತೆಗಳು, ಕುಮಾರ ಶಬನಂ ದಂಧರಗಿ ಮತ್ತು ಸಂಗಡಿಗರಿಂದ ಕರುಳಿನ ಕೂಗು ನಾಟಕ ಪ್ರದರ್ಶನ ಹಾಗೂ ರಾಕೇಶ ಮಾಳಪ್ಪಗೋಳ ಹಾಗೂ ಸಂಗಡಿಗರಿಂದ ಗೊಂಬೆ ಕುಣಿತ ಮತ್ತು ಕಾಶಿಲಿಂಗ ಲೋಕೂರಿ ಮತ್ತು ಸಂಗಡಿಗರಿಂದ ಡೊಳ್ಳು ಕುಣಿತ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
