ಮುದ್ದೇಬಿಹಾಳ: ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯುವುದರ ಜೊತೆಗೆ ಮಕ್ಕಳಿಗೆ ನೀಡಬೇಕಾದ ಶಿಕ್ಷಣ, ಸೌಲಭ್ಯ, ಅವಕಾಶಗಳನ್ನು ಪ್ರಾಮಾಣಿಕವಾಗಿ ನೀಡಲು ಪ್ರತಿಯೊಬ್ಬ ಶಿಕ್ಷಕರು ಮುಂದಾಗಬೇಕು ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ ಹೇಳಿದರು.
ಪಟ್ಟಣದ ಗಾಂಧಿ ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರುಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ರಮವೇ ಗುರುಸ್ಪಂದನೆ ಕಾರ್ಯಕ್ರಮ. ಶಿಕ್ಷಕರು ತಮ್ಮ ಸೇವಾ ಅವಧಿಯ ಯಾವುದಾದರೂ ಮಾಹಿತಿ ತಮ್ಮ ಸೇವಾ ಪುಸ್ತಕದಲ್ಲಿ ಕಾರಣಾಂತರಗಳಿಂದ ಸೇರ್ಪಡೆ ಮಾಡದೇ ಬಿಟ್ಟು ಹೋದಲ್ಲಿ ಈ ಕಾರ್ಯಕ್ರಮದ ಮೂಲಕ ಸೇರ್ಪಡೆ ಮಾಡಿಕೊಳ್ಳಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಕರಾಪ್ರಾಶಾಶಿ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ ಮಾತನಾಡಿ.
ಮುಖ್ಯ ಅತಿಥಿಗಳಾಗಿದ್ದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯ ಎಂ.ಎಸ್.ಕವಡಿಮಟ್ಟಿ ಮಾತನಾಡಿದರು.
ಈ ವೇಳೆ ರಾಜ್ಯಮಟ್ಟದ ಸಂಗಮಸಿರಿ ಪ್ರಶಸ್ತಿಗೆ ಭಾಜನರಾನ ಸಿದ್ದನಗೌಡ ಬಿಜ್ಜೂರ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ, ಕರಾಪ್ರಾಶಾಶಿ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ, ಪ್ರೌಢ ಶಾಲಾ ಮುಖ್ಯೋಪಾದ್ಯಾಯರ ಸಂಘದ ಅಧ್ಯಕ್ಷ ಎಂ.ಎಸ್.ಕವಡಿಮಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಎಸ್.ಡಿ.ಸಿ ಗಳಾದ ರಘುವೀರ ಹೂಲಗೇರಿ ಮತ್ತು ಸುರೇಶ ಮೋಟಗಿ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಸ್ತಾವಿಕವಾಗಿ ಕರಾಪ್ರಾಶಾಶಿ ಸಂಘದ ಕಾರ್ಯದರ್ಶಿ ಎನ್.ಎಸ್.ತುರಡಗಿ ಮಾತನಾಡಿದರು.
ಸಂಘದ ಉಪಾಧ್ಯಕ್ಷ ಎಸ್.ಬಿ.ಬಿರಾದಾರ, ಸಹ ಕಾರ್ಯದರ್ಶಿಗಳಾದ ಎಸ್.ಆರ್.ಪಾಟೀಲ ಮತ್ತು ಜೆ.ಎಂ.ಕುಂದರಗಿ, ಸಮಘಟನಾ ಕಾರ್ಯದರ್ಶಿ ಆಯ್.ಎ.ಹಿರೇಮಠ, ಕರಾಸೌ ಸಂಘದ ಕಾರ್ಯದರ್ಶಿ ಬಿ.ಎಸ್.ಹೊಳಿ, ಶಿಕ್ಷಣ ಸಂಯೋಜಕ ಎಸ್.ಎಸ್.ಹಿರೇಮಠ, ಸದಸ್ಯರಾದ ಟಿ.ಎನ್.ರೂಡಗಿ, ಎಸ್.ಟಿ.ಪಾಟೀಲ, ಎಸ್.ಎನ್.ಲಿಂಗದಳ್ಳಿ, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ವಿ.ಎಂ.ಪಾಟೀಲ, ಪ್ರ.ಕಾರ್ಯದರ್ಶಿ ಎಸ್.ಬಿ.ಬೀರಗೊಂಡ ಸೇರಿದಂತೆ ಮತ್ತೀತರರು ಭಾಗಿಯಾಗಿದ್ದರು.
ಆರ್.ಬಿ.ಕೋನರೆಡ್ಡಿ, ಆಯ್.ಎ.ಹಿರೇಮಠ, ಎಸ್.ಆರ್.ಪಾಟೀಲ ಕಾರ್ಯಕ್ರಮ ನಿರ್ವಹಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

