ಮುದ್ದೇಬಿಹಾಳ: ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಖಾಸಗಿ ಶಾಲೆಯವರನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಬಿಂಬಿಸಿದ ಇಲ್ಲಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ ಇವರ ಧೋರಣೆಯನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಮಂಜುನಾಥ ಕೊಪ್ಪ ಹೇಳಿದರು.
ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ವೇದಿಕೆಯ ಮೇಲೆ ನಿಂತು ಮಾಧ್ಯಮದ ಎದುರು ತಮ್ಮ ಆಕ್ರೋಶವನ್ನು ಅವರು ಹೊರಹಾಕಿದರು.
ಸಂಪೂರ್ಣವಾಗಿ ಈ ಕಾರ್ಯಕ್ರಮವೇ ಕಾಟಾಚಾರಕ್ಕಾದಂತಾಗಿದೆ. ಸರಿಯಾದ ಟೆಂಟ್ ವ್ಯವಸ್ಥೆ ಇಲ್ಲದೇ ಮಕ್ಕಳು ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದಿದ್ದಾರೆ. ಇಲಾಖೆಗೆ ಸಾಕಷ್ಟು ಅನುದಾನ ಬಂದಿದ್ದರೂ ಅದನ್ನು ಖರ್ಚು ಮಾಡದೇ ಎತ್ತಿ ಹಾಕುವ ಹುನ್ನಾರ ಇಲ್ಲಿನ ಬಿಇಓ ಧರಿಕಾರ ಅವರು ಮಾಡಿದ್ದಾರೆ. ಖಾಸಗಿ ಶಾಲೆಯವರನ್ನು ಹಣಕಾಸಿನ ನೆರವು ಬೇಕಾದಾಗ ಮಾತ್ರ ಕರೆಯುತ್ತಾರೆ. ಆದರೆ ಈ ಕಾರ್ಯಕ್ರಮದಲ್ಲಿ ಖಾಸಗಿ ಶಾಲೆಯವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಈ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಕಾಟಾಚಾರಕ್ಕೆ ಮಾಡಿದ್ದಾರೆ. ಮೇಲಾಧಿಕಾರಿಗಳು ಈ ಕಾರ್ಯಕ್ರಮಕ್ಕೆ ನೀಡಲಾದ ಅನುದಾನವನ್ನು ಸ್ಥಗತಗೊಳಿಸಬೇಕು ಎಂದೆಲ್ಲ ತಮ್ಮ ಆಕ್ರೋಶವನ್ನು ಅವರು ಹೊರಹಾಕಿದರು.
Subscribe to Updates
Get the latest creative news from FooBar about art, design and business.
Related Posts
Add A Comment

