ಸಿಂದಗಿ: ಕನಕದಾಸರ ಕೀರ್ತನೆಗಳು ಮತ್ತು ಸಂದೇಶಗಳು ನಮಗೆ ದಾರಿದೀಪವಾಗಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ತಾಲೂಕಾಡಳಿತ ಸೌಧದ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡ ೫೩೬ನೆಯ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ವಾಸನೆಯನ್ನೂ ಬಿಟ್ಟು ಮನುಷ್ಯರಂತೆ ಬದುಕಿ ಎಂದು ಮನುಕುಲಕ್ಕೆ ಉಪದೇಶ ಮಾಡಿದ ಮಹಾನ್ ಸಂತನನ್ನು ನಾವೆಂದಿಗೂ ಮರೆಯಲು ಸಾಧ್ಯವಿಲ್ಲ. ಕನ್ನಡ ನಾಡಿನ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕನಕದಾಸರ ಕೊಡುಗೆ ಅನನ್ಯವಾಗಿದೆ. ಕನಕದಾಸರ ಕೀರ್ತನೆಗಳು ಎಂದಗೂ ನಮಗೆ ದಾರಿದೀಪ. ಇತ್ತಿಚಿನ ದಿನಮಾನಗಳಲ್ಲಿ ಮೋಬೈಲ್ದಿಂದಾಗಿ ಹಲವಾರು ತಾರತಮ್ಯಗಳನ್ನು ಗಮನಿಸುತ್ತಿದ್ದೇವೆ. ಈ ಓಂದು ದೆಸೆಯಲ್ಲಿ ಅಂದಿನ ಶರಣರು, ಶಂತರು, ದಾರ್ಶನಿಕರು ಸೇರಿದಂತೆ ದಾಸ ಶ್ರೇಷ್ಠ ಕನಕದಾಸರು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಿದ್ದು ಶ್ಲಾಘನೀಯ. ದಾಸ ಸಾಹಿತ್ಯಕ್ಕೆ ವೈಚಾರಿಕ ನೆಲೆಗಟ್ಟನ್ನು ಒದಗಿಸಿದ ಭಕ್ತ ಶ್ರೇಷ್ಠ ಸಂತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಉನ್ನತ ಚಿಂತನೆಗಳನ್ನು ಬಿತ್ತಿದ್ದಾರೆ. ಕನಕದಾಸರ ತತ್ವಾದರ್ಶ, ಜೀವನ ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಮಾತನಾಡಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಸಿಪಿಐ ಡಿ ಗುಲುಗಪ್ಪ, ನಿವೃತ್ತ ಉಪನ್ಯಾಸಕ ಆರ್.ಎಸ್.ವಾಡೇದ, ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕ ಕುರುಬ ಸಂಘದ ತಾಲೂಕ ಅಧ್ಯಕ್ಷ ನಿಂಗಣ್ಣ ಬಿರಾದಾರ, ಕೃಷಿ ಸಹಾಯಕ ನಿರ್ದೇಶಕ ಎಚ್.ವಾಯ್ ಸಿಂಗೆಗೋಳ, ಸಿಡಿಪಿಓ ಶಂಭುಲಿಂಗ ಹಿರೇಮಠ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಜಿ.ಎಸ್.ರೋಡಗಿ, ಕಂದಾಯ ನಿರೀಕ್ಷಕ ಆಯ್.ಎ ಮಕಾಂದಾರ, ಮಲ್ಲಿಕಾರ್ಜುನ ಮಾಲಗಾರ, ಜಗದೀಶ ಶಹಾಪೂರ, ನಿಖಿಲಅಹ್ಮದ್ ಖಾನಾಪುರ, ನಾಗಮ್ಮ ಸಾಲಿ, ದಾನಮ್ಮ ಹೂಗಾರ, ಹೀನಾಕೌಸರ ಮಂದೇವಾಲಿ, ಭೀಮಾಶಂಕರ ಕರಿಮುಂಗಿ, ಮಂಜುಳಾ ಸೇರಿದಂತೆ ತಾಲೂಕ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಹಾಲುಮತ ಸಮಾಜ ಭಾಂದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

