ಬಸವನಬಾಗೇವಾಡಿ: ಪಟ್ಟಣದ ಬಸವ ಭವನದಲ್ಲಿ ಕರ್ನಾಟಕ ರಾಜ್ಯ ನಗೆಯೋಗ ಕೂಟಗಳ ಒಕ್ಕೂಟ ಹಾಗೂ ಸ್ಥಳೀಯ ಬಸವೇಶ್ವರ ನಗೆಯೋಗ ಕೂಟದ ಸಹಯೋಗದಲ್ಲಿ ಡಿ.೨ ಮತ್ತು ೩ ರಂದು ಎರಡು ದಿನಗಳ ಕಾಲ ರಾಜ್ಯ ಮಟ್ಟದ ೨೦ ನೇ ನಗೆ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ಡಿ.೨ ರಂದು ಮಧ್ಯಾನ್ಹ ೨.೩೦ ಗಂಟೆಗೆ ಸಮ್ಮೇಳನವನ್ನು ಸಚಿವ ಶಿವಾನಂದ ಪಾಟೀಲರು ಉದ್ಘಾಟಿಸುವರು. ಉದ್ಘಾಟನಾ ಸಮಾರಂಭದ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ರಾಜ್ಯ ನಗೆಯೋಗ ಕೂಟದ ಅಧ್ಯಕ್ಷ ಲಯನ ಪ್ರೊ.ಪಿ.ಸದಾಶಿವ ವಹಿಸುವರು. ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ನಗೆಯೋಗ ಕೂಟಗಳ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಮದನ ಕಠಾರಿಯಾ, ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ವಿಮಾ ಸಹಕಾರ ಮಹಾಮಂಡಳ ಅಧ್ಯಕ್ಷ ಶಿವನಗೌಡ ಬಿರಾದಾರ, ರಾಜ್ಯ ನಗೆಯೊಗ ಕೂಟಗಳ ಒಕ್ಕೂಟದ ಕಾರ್ಯದರ್ಶಿಗಳಾದ ಬಿ.ಎಸ್.ರಾಜೇಶ್ವರ, ಪಾರ್ವತಿ ಶೆಟ್ಟಿ, ಒಕ್ಕೂಟದ ಖಜಾಂಚಿ ಡಾ.ದೇವತಾ ಶ್ರೀನಿವಾಸ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಯ ಮೇಲುಉಸ್ತುವಾರಿ ಸಮಿತಿ ಅಧ್ಯಕ್ಷ ಭರತ ಅಗರವಾಲ, ಮುಖಂಡ ಬಸವರಾಜ ಕೋಟಿ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ವರ್ತಕ ವಿಠ್ಠಲ ಪತ್ತಾರ ಆಗಮಿಸುವರು. ಕೋಗಳಿ ಕೊಟ್ರೇಶ್, ಅಶೋಕ ಹಂಚಲಿ ಅವರಿಂದ ಹಾಸ್ಯ ರಸಾಯನ ನಡೆಯಲಿದೆ. ಇದೇ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕ್ರತ ಪ.ಗು.ಸಿದ್ದಾಪೂರ, ರವಿಗೌಡ ಚಿಕ್ಕೊಂಡ, ಗಂಗಾಧರ ಕುಂಟೋಜಿ, ಶಿವಾನಂದ ಮಂಗಾನವರ, ಸಿದ್ದು ಉಕ್ಕಲಿ, ಬಂದೇನವಾಜ ವಾಲೀಕಾರ, ಸೇರಿದಂತೆ ಅನೇಕರನ್ನು ಸನ್ಮಾನಿಸಲಾಗುವುದು. ನಂತರ ವಿಶೇಷ ಮನರಂಜನಾ ಕಾರ್ಯಕ್ರಮಗಳು ಜರುಗುತ್ತವೆ.
ಡಿ.೩ ರಂದು ಬೆಳಗ್ಗೆ ೮ ಗಂಟೆಗೆ ನಗು ಮಹಾ ಮೆರವಣಿಗೆ ಸಮ್ಮೇಳನಾಧ್ಯಕ್ಷ ಶಿವಯ್ಯ ಹಿರೇಮಠ ಅವರೊಂದಿಗೆ ಬಸವೇಶ್ವರ ದೇವಾಲಯದಿಂದ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಆರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿ ಬಸವ ಭವನಕ್ಕೆ ತಲುಪುವುದು. ಮೆರವಣಿಗೆಗೆ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಚಾಲನೆ ನೀಡುವರು.
ನಂತರ ೧೦ ಗಂಟೆಗೆ ನಡೆಯುವ ಸಮಾರಂಭದ ಸಾನಿಧ್ಯವನ್ನು ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಎರಡನೇ ದಿನದ ಸಮಾರಂಭವನ್ನು ಶಾಸಕ ಭೀಮನಗೌಡ(ರಾಜುಗೌಡ) ಪಾಟೀಲ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ರಾಜ್ಯ ನಗೆಯೋಗ ಕೂಟಗಳ ಒಕ್ಕೂಟದ ಅಧ್ಯಕ್ಷ ಪನ್ನಗ ಶಯನಂ ವಹಿಸುವರು. ವಿಶೇಷ ಅತಿಥಿಗಳಾಗಿ ಜಾನಪದ ಸಾಹಿತಿ, ಸಿಪಿಐ ಜ್ಯೋತಿರ್ಲಿಂಗ ಹೊನ್ನಾಕಟ್ಟಿ, ಕೆಎಎಸ್ ಅಧಿಕಾರಿ, ಧಾರವಾಹಿ ನಟ ಸಂಗಮೇಶ ಉಪಾಸೆ ಆಗಮಿಸುವರು. ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಬಿ.ನಾಗರಾಜ, ಬಸವೇಶ್ವರ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಲೋಕನಾಥ ಅಗರವಾಲ, ನ್ಯಾಯವಾದಿ ಬಿ.ಕೆ.ಕಲ್ಲೂರ, ಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ಮುಖಂಡ ಸಂಗಮೇಶ ಓಲೇಕಾರ, ಪುರಸಭೆ ಸದಸ್ಯರಾದ ನೀಲು ನಾಯಕ, ರವಿ ಪಟ್ಟಣಶೆಟ್ಟಿ, ಆದರ್ಶ ಶಿಕ್ಷಕರ ವೇದಿಕೆಯ ಜಿಲ್ಲಾಧ್ಯಕ್ಷ ಉಮೇಶ ಕೌಲಗಿ, ಮುಖಂಡರಾದ ಪರಶುರಾಮ ಅಡಗಿಮನಿ, ಅಶೋಕ ಹಾರಿವಾಳ, ಸುಭಾಸ ಚಕ್ರಮನಿ, ರಾಜೇಸಾಬ ಶಿವನಗುತ್ತಿ ಇತರರು ಆಗಮಿಸುವರು. ಸಂಜೆ ೫ ಗಂಟೆಗೆ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಮ್ಮೇಳನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಪ್ರತಿನಿಧಿಗಳು ಆಗಮಿಸುತ್ತಾರೆ ಎಂದು ನಗೆ ಸಮ್ಮೇಳನದ ಸಂಘಟಕರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

