ಚಿಮ್ಮಡ: ಕನಕದಾಸರು ಕನ್ನಡ ಭಾಷೆಯ ಪ್ರಸಿದ್ದ ಕೀರ್ತನಕಾರರು, ಹರಿದಾಸರಾಗಿದ್ದರು. ಅವರ ತತ್ವ ಆದರ್ಶಗಳು ಪ್ರತಿಯೊಬ್ಬರಿಗೆ ಮಾದರಿಯಾಗಿದೆ ಎಂದು ಸ್ಥಳಿಯ ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಹೇಳಿದರು.
ಗ್ರಾಮದ ಕನಕದಾಸ ವೃತ್ತದಲ್ಲಿ ಹಾಲುಮತ ಸಮಾಜ ಬಾಂಧವರಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ಸಂತರು, ಮಹಾಪುರುಷರ ಆದರ್ಷಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಕನಕದಾಸರು ನಮ್ಮ ನಾಡು ಕಂಡ ಶ್ರೇಷ್ಠ ದಾಸರಲ್ಲಿ ಒಬ್ಬರಾಗಿದ್ದಾರೆ. ಅವರ ಅಚಲ ಭಕ್ತಿ ಮತ್ತು ವೈರಾಗ್ಯ ಮನೋಭಾವನೆಯು ಸರ್ವಕಾಲಕ್ಕೂ ಮಾದರಿಯಾಗಿದೆ. ಪ್ರತಿವರ್ಷಕೊಮ್ಮೆ ಅವರ ಜಯಂತಿ ಆಚರಣೆಗೆ ಮಾತ್ರ ಸಿಮಿತ ಗೊಳಿಸದೆ, ಕನಕದಾಸರ ಜೀವನದ ತತ್ವ-ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗಳು ಸಾರ್ಥಕವಾಗುತ್ತವೆ ಎಂದರು.
ಗ್ರಾಮದ ಕನಕದಾಸ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಜನಾರ್ಧನ ಮಹಾರಾಜರನ್ನು ಸಮಾಜ ಬಾಂಧವರಿಂದ ಸತ್ಕರಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಹಾಲುಮತ ಸಮಾಜದ ಪರಪ್ಪ ಮುಂದಿನಮನಿ, ಅಶೋಕ ಮೋಟಗಿ, ತಾ.ಪಂ. ಮಾಜಿ ಉಪಾದ್ಯಕ್ಷ ಪ್ರಭು ಮುಧೋಳ, ಗ್ರಾಂ.ಪಂ. ಸದಸ್ಯ ಮಹಾಲಿಂಗ ಮಾಯನ್ನವರ, ನಾಗಪ್ಪಾ ಆಲಕನೂರ, ಪತ್ರಕರ್ತ ಇಲಾಹಿ ಜಮಖಂಡಿ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

