Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೌಡ್ಯತೆ ಹೋಗಲಾಡಿಸಲು ಶ್ರಮಿಸಿದ ಕನಕದಾಸರು :ಪ್ರೊ.ಸಾವಳಸಂಗ
(ರಾಜ್ಯ ) ಜಿಲ್ಲೆ

ಮೌಡ್ಯತೆ ಹೋಗಲಾಡಿಸಲು ಶ್ರಮಿಸಿದ ಕನಕದಾಸರು :ಪ್ರೊ.ಸಾವಳಸಂಗ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯನಗರ ಅರಸರ ಪರವಾಗಿ ಯುದ್ಧದಲ್ಲಿ ಭಾಗವಹಿಸಿ, ಸೋಲನ್ನು ಅನುಭವಿಸಿ, ಅನೇಕ ಸಾವು- ನೋವುಗಳನ್ನು ನೋಡಿದ ದಾಸ ಶ್ರೇಷ್ಠ ಕನಕದಾಸರು ವೈರಾಗ್ಯ ಹೊಂದಿ, ಸಂಸಾರವನ್ನು ತ್ಯಾಗ ಮಾಡಿದರು. ದೇಶ ಸಂಚಾರ ಮಾಡುತ್ತ, ತಮ್ಮ ಕೀರ್ತನೆಗಳ ಮೂಲಕ ಜಾತಿ, ಮತ, ಪಂಥ, ಅಸಮಾನತೆ, ಅನ್ಯಾಯ, ಮೌಡ್ಯತೆಗಳನ್ನು ಹೋಗಲಾಡಿಸಲು ನಿರಂತರ ಶ್ರಮಿಸಿದರು. ತಿಮ್ಮಪ್ಪ ನಾಯಕನೆಂದು ಕರೆಸಿಕೊಳ್ಳುತ್ತಿದ್ದ ಇವರು ಗುರುಗಳಾದ ವ್ಯಾಸರಾಯರಿಂದ ಕನಕದಾಸರೆಂದು ಮರುನಾಮಕರಣ ಹೊಂದಿದರು. ತಮ್ಮ ಆರಾಧ್ಯ ದೈವ ‘ಕಾಗಿನೆಲೆ ಆದಿ ಕೇಶವರಾಯ’ ಎಂಬ ಹೆಸರಿನಿಂದ ಹಲವಾರು ಕೀರ್ತನೆಗಳನ್ನು ರಚಿಸಿ, ಸಮಾಜವನ್ನು ಸುಧಾರಣೆ ಮಾಡಲು ಅವಿರತ ಪ್ರಯತ್ನ ಮಾಡಿದರು ಎಂದು ಕನ್ನಡ ಹಿರಿಯ ಉಪನ್ಯಾಸಕರಾದ ಪ್ರೊ. ಸಿದ್ದು ಸಾವಳಸಂಗ ತಮ್ಮ ಉಪನ್ಯಾಸ ನೀಡುತ್ತಾ ಹೇಳಿದರು.
ಗುರುವಾರ ಕನಕದಾಸರ ಜಯಂತಿ ಪ್ರಯುಕ್ತ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜು, ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅವರು ಹಾವೇರಿ ಜಿಲ್ಲೆಯ ಬಾಡ ಎನ್ನುವಂತ ಚಿಕ್ಕ ಗ್ರಾಮದಲ್ಲಿ ಕ್ರಿ.ಶ.೧೫೦೮ ರಲ್ಲಿ ಬೀರಪ್ಪ ನಾಯಕ ಹಾಗೂ ಬಚ್ಚಮ್ಮ ದಂಪತಿಗಳ ಮಗನಾಗಿ ಕನಕದಾಸರು ಜನಿಸಿದರು. ಅವರ ಪೂರ್ವನಾಮ ತಿಮ್ಮಪ್ಪನಾಯಕ. ಮುಂದೆ ವಿಜಯನಗರ ಅರಸರಿಂದ ೭೮ ಗ್ರಾಮಗಳನ್ನು ಪಡೆದು ಅವರು ನಾಯಕರಾಗಿದ್ದರು.
ಆನಂತರ ಯುದ್ಧದ ಸಾವು ನೋವುಗಳನ್ನು ಅರಿತು ಸಂಸಾರ ತ್ಯಾಗ ಮಾಡಿ ಸಂತರಾದರು.
ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನ್ನೇನಾದರೂ ಬಲ್ಲಿರಾ ಬಲ್ಲಿರಾ
ಎಂದು ಜಾತಿ-ಮತಗಳ ವಿರುದ್ಧ ದನಿಯೆತ್ತಿದರು. ಹಾಗೆಯೇ ‘ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಎಂದು ಇನ್ನೊಂದು ಕೀರ್ತನೆಯಲ್ಲಿ ಹೇಳುತ್ತಾರೆ. ಪುರಂದರದಾಸರು ಹಾಗೂ ಕನಕದಾಸರು ದಾಸ ಸಾಹಿತ್ಯದ ಎರಡು ಕಣ್ಣುಗಳು ಎಂದು ಪ್ರೊ. ಸಿದ್ದು ಸಾವಳಸಂಗ ಹೇಳಿದರು.
ಇನ್ನೋರ್ವ ಹಿರಿಯ ಉಪನ್ಯಾಸಕರಾದ ಪ್ರೊ. ಎಸ್. ಆರ್. ಬಿರಾದಾರ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸಿ.ಬಿ . ನಾಟೀಕಾರ ಮಾತನಾಡಿದರು.
ಇದಕ್ಕೂ ಮೊದಲು ದಾಸ ಶ್ರೇಷ್ಠ ಸಂತನಾದ ಕನಕದಾಸರ ಭಾವಚಿತ್ರಕ್ಕೆ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾಲೇಜಿನ ವಿದ್ಯಾರ್ಥಿನಿಯರು ಕನಕದಾಸರ ಕುರಿತು ಮಾತನಾಡಿದರು. ಕಾಲೇಜಿನ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.