ಬಂಜಾರಾ ಪ್ರೌಢ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ
ವಿಜಯಪುರ: ಕನಕ ಎಂಬುದು ಅಗಾಧಶಕ್ತಿ, ಅದಮ್ಯ ಚೇತನ. ಅವರು ಭಗವಂತನಿಗೆ ಹತ್ತಿರವಾಗಿದ್ದವರು. ಕನಕದಾಸರು ಭಕ್ತಿಯ ಶಕ್ತಿಯನ್ನು ತೋರಿಸಿಕೊಟ್ಟವರು. ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ ಸಮಾನತೆಯ ತತ್ತ÷್ವವನ್ನು ಸಾರಿದರು. ಸಮಾಜದ ಹಲವು ಲೋಪದೋಷಗಳನ್ನು ನಿವಾರಿಸಿ ಮಾನವೀಯತೆಗೆ ಮಹಾಬೆಳಕು ಹರಿಸಿದ ದಾರ್ಶನಿಕರು ಎಂದು ಬಂಜಾರಾ ಪ್ರೌಢ ಶಾಲೆ ಮುಖ್ಯ ಗುರುಗಳಾದ ಇ.ಡಿ.ಲಮಾಣಿಯವರು ಹೇಳಿದರು.
ವಿಜಯಪುರ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ೧೫-೧೬ನೇ ಶತಮಾನದಲ್ಲಿ ಜಾತಿವ್ಯವಸ್ಥೆ ತುಂಬಿ ತುಳುಕುತ್ತಿತ್ತು. ಅದನ್ನು ಹೊಡೆದೊಡಿಸು ಛಲ ಇಟ್ಟುಕೊಂಡು ನಾಡಿನಾದ್ಯಂತ ಸಂಚರಿಸಿ ‘ಕುಲ ಕುಲ ಎಂದು ಹೊಡೆದಾಡದಿರಿ’.. ಎಂಬ ಸಂದೇಶ ಸಾರಿದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರ್.ವ್ಹಿ. ಭುಜಂಗನವರ ಕನಕದಾಸರ ಜೀವನ ಸಾಧನೆಗಳ ಕುರಿತು ಮಾತನಾಡಿದರು. ಅಲ್ಲದೇ ವಿದ್ಯಾರ್ಥಿಗಳಾದ ಮಾಂತೇಶ ಕಿತ್ಲಿ ಮತ್ತು ಜಯಶ್ರೀ ರಾಠೋಡ ಕನಕದಾಸರ ಕುರಿತು ಮಾತನಾಡಿದರು.
ಕನಕದಾಸರ ಭಾವಚಿತ್ರ ಪೂಜೆಯನ್ನು ಆರ್.ಎನ್.ಬಕಾಟೆಯವರು ನೆರವೇರಿಸಿದರು.
ಈ ವೇಳೆ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯಗುರು ಸಂದೀಪ ರಾಠೋಡ, ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಂ.ಬಿ.ಪೂಜಾರಿ ಸೇರಿದಂತೆ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರುಗಳು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

