ದೇವರಹಿಪ್ಪರಗಿ: ಇಲ್ಲಿನ ಪಟ್ಟಣ ಪಂಚಾಯತಿಗೆ ಸ್ವಚ್ಛತೆಯಲ್ಲಿ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿರುವುದಕ್ಕಾಗಿ ಮುನಸಿಪಾಲಿಕಾ-೨೦೨೩ರ ಮಹಾ ಸಮ್ಮೇಳನದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರಿನಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ೧೭ನೇ ಅಂತರಾಷ್ಟ್ರೀಯ ಮಹಾಸಮ್ಮೇಳನ ಹಾಗೂ ಪ್ರದರ್ಶನದಲ್ಲಿ ಪಟ್ಟಣಪಂಚಾಯತಿ ಮುಖ್ಯಾಧಿಕಾರಿ ಎಲ್ ಡಿ ಮುಲ್ಲಾ ಹಾಗೂ ಕಿರಿಯ ಆರೋಗ್ಯ ಅಧಿಕಾರಿ ಫಿರೋಝ ಮುಲ್ಲಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯದಲ್ಲಿ ಸ್ವಚ್ಛತೆಯಲ್ಲಿ ಸಾಧನೆ ಮಾಡಿರುವ ೦೯ ಪಟ್ಟಣ ಪಂಚಾಯತಿಗಳಿಗೆ ಸ್ವಚ್ಛತೆ ಕುರಿತು ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲು ಅವಕಾಶವೂ ಸಿಕ್ಕಿತ್ತು. ನಗರಗಳ ಭವಿಷ್ಯ, ಸುರಕ್ಷತೆ, ಚತುರತೆ ಮತ್ತು ಸಮರ್ಥನೀಯ ಕುರಿತು ನಡೆದ ಮಹಾ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತ್ತು.
ಪ್ರಶಸ್ತಿ ಸಿಕ್ಕ ಸಂತಸದಲ್ಲಿ ಮಾತನಾಡಿದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಲ್ ಡಿ ಮುಲ್ಲಾ, ಕಳೆದ ಹಲವಾರು ವರ್ಷಗಳಿಂದ ಪಟ್ಟಣದ ಸ್ವಚ್ಛತೆಗಾಗಿ ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಕಾರ್ಯ ಮಾಡಲಾಗುತ್ತಿದೆ. ಈ ಕುರಿತು ಹಲವಾರು ಬಾರಿ ರಾಜ್ಯ ಮಟ್ಟದ ಅಧಿಕಾರಿಗಳ ಮುಂದೆ ಪ್ರಸ್ತುತ ಪಡಿಸಲಾಗಿತ್ತು. ಸ್ವಚ್ಛತೆ ಕುರಿತು ವಿನೂತನ ವಿಶಿಷ್ಠ ರೀತಿಯಲ್ಲಿ ಯೋಜನೆ ಹಾಕಿಕೊಳ್ಳಲಾಗಿದ್ದು, ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಕಾರ್ಮಿಕರು ಎಲ್ಲಿ ಹೇಗೆ ಯಾವ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಾರೆ. ಜೊತೆಗೆ ಸಾರ್ವಜನಿಕರು ಸ್ವಚ್ಛತೆ ಬಗ್ಗೆ ತಿಳಿಸದರೆ ಸಾಕು ಮರುಕ್ಷಣವೇ ಅವರಿಗೆಲ್ಲ ಸಂದೇಶ ಹೋಗಿ ಕೆಲಸ ಮುಗಿದ ನಂತರವೂ ಅವರಿಂದ ಹಿಮ್ಮಾಹಿತಿಯನ್ನು ಪಡೆಯಲಾಗುತ್ತಿದೆ. ಇದೆಲ್ಲವನ್ನು ಗಮನಿಸಿ ಮುನಸಿಪಾಲಿಕಾ ೨೦೨೩ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿತ್ತು. ರಾಜ್ಯದ ಕೇವಲ ೦೯ ಪಂಚಾಯತಿಗಳಲ್ಲಿ ನಮ್ಮದು ಒಂದಾಗಿರುವುದು ಹೆಮ್ಮೆಯೆನಿಸಿದೆ. ಇದಕ್ಕೆಲ್ಲ ಪಟ್ಟಣ ಪಂಚಾಯತಿ ಸದಸ್ಯರು, ಸಾರ್ವಜನಿಕರ ಸಹಕಾರ ಕಾರಣವಾಗಿದೆ. ವಿಶೇಷವಾಗಿ ನಮ್ಮ ಕಾರ್ಮಿಕ ಸಿಬ್ಬಂಧಿ ಕೆಲಸದಿಂದ ಇಂದು ಈ ಮಟ್ಟದಲ್ಲಿ ಹೆಸರು ಪಡೆಯಲು ಸಾಧ್ಯವಾಗಿದೆ ಎಂದು ಸಿಬ್ಬಂಧಿ ಕಾರ್ಯವನ್ನು ಶ್ಲಾಘಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

