ವಿಜಯಪುರ: ಭೂಣಲಿಂಗ ಹತ್ಯೆ ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಜಿಲ್ಲಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಎರಡು-ಮೂರು ದಿನಗಳ ಹಿಂದೆ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹೆಣ್ಣು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಜಾಲ ದಕ್ಷಿಣ ಕರ್ನಾಟಕವಲ್ಲದೇ ಉತ್ತರ ಕರ್ನಾಟಕದಲ್ಲಿಯೂ ಸಕ್ರಿಯವಾಗಿದೆ ಎಂಬ ವದಂತಿ ಇದೆ. ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ರಾಜಕಾರಣಿಗಳು ಉದ್ಯಮಿಗಳು ಸರ್ಕಾರಿ ಅಧಿಕಾರಿಗಳ ಸಂಬಂಧಿಕರ ಆಸ್ಪತ್ರೆಗಳಲ್ಲಿ ಈ ರೀತಿಯ ಪ್ರಕರಣಗಳು ಯಥೇಚ್ಛವಾಗಿ ಇದ್ದರೂ ಸಹ ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಯಾವುದೇ ರೀತಿಯ ಪ್ರಕರಣಗಳು ಬೆಳಕಿಗೆ ಬಂದಿರುವುದಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಒಂದು ತನಿಖಾ ತಂಡವನ್ನು ರಚಿಸಿ ಹೆಣ್ಣು ಬ್ರೂಣ ಹತ್ಯೆ ಪ್ರಕರಣಗಳು ವಿಜಯಪುರ ಜಿಲ್ಲೆಯಲ್ಲಿ ನಡೆಯದಂತೆ ಸೂಕ್ತ ಕ್ರಮವನ್ನು ವಹಿಸಬೇಕು. ಮೈಸೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ಬಂಧನಕ್ಕೆ ಒಳಗಾದ ಈ ಜಾಲದ ಆರೋಪಿಗಳು ಹೇಳುವಂತೆ ಪ್ರತಿ ತಿಂಗಳು ೨೨ ರಿಂದ ೨೫ ಗರ್ಭಪಾತಗಳನ್ನು ಮಾಡಿಸಿದ್ದಾರೆ. ಹಾಗೂ ಕಳೆದ ಎರಡು ವರ್ಷಗಳಲ್ಲಿ ಸುಮಾರು ೯೦೦ ಭ್ರೂಣ ಹತ್ಯೆಯನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಪಂಜಾಬ್ & ಯೂನಿಯನ್ ಆಫ್ ಇಂಡಿಯಾ ಮತ್ತು ಇತರರ ಸ್ವಯಂ ಸೇವಕ ಆರೋಗ್ಯ ಸಂಘದ ವಿಷಯದಲ್ಲಿ ಭಾರತ ಸರ್ವೋಚ್ಚ ನ್ಯಾಯಾಲಯವು ಈ ರೀತಿ ಹೇಳಿರುತ್ತದೆ ಹೆಣ್ಣು ಭ್ರೂಣಹತ್ಯೆ ನಿಯಂತ್ರಣಕ್ಕೆ ಕಟ್ಟುನಿಟ್ಟಾದ ಕಾನೂನು ಅನುಷ್ಠಾನದಲ್ಲಿ ಉದಾಸೀನತೆಯನ್ನು ತೋರುವುದು ಭಾರತದಲ್ಲಿ ಜಾರಿಯಲ್ಲಿದೆ. ಜಿಲ್ಲಾ ಆರೋಗ್ಯ ಅಧಿಕಾರಿಗಳು ಇಲ್ಲಿಯವರೆಗೂ ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿಗಳನ್ನು ನೀಡಿ ಈ ರೀತಿಯ ಸಮಸ್ಯೆಗಳನ್ನು ಪರೀಕ್ಷಿಸುವ ಗೋಜಿಗೆ ಹೋಗದಿರುವುದು ಅವರ ಕರ್ತವ್ಯ ಲೋಪಕ್ಕೆ ಕಾರಣವಾಗಿದೆ. ಆದ್ದರಿಂದ ಈ ವಿಷಯದಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಕೇಶ ಇಂಗಳಗಿ, ಹಮೀದ ಇನಾಮ್ದಾರ್, ಮಾಳಪ್ಪ ಮಯೂರ, ಶ್ರೀಶೈಲ ಮಠ, ಮೈಬೂಬ ತಾಂಬೋಳಿ, ರಾಘವೇಂದ್ರ ಚಲವಾದಿ, ಸುರೇಂದ್ರ ಕುನಸಲೆ, ಕಾಂತು ಕಗ್ಗೋಡ, ಪ್ರಕಾಶ ದಂಡಿನ ಇನ್ನಿತರರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

