ವಿಜಯಪುರ: ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿಯಾಗಿದ್ದು, ಈ ಗೆಲುವಿನ ನಗೆ ಇದೇ ರೀತಿ ಮುನ್ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷಗಳು ಎಷ್ಟೇ ಬಿಜೆಪಿ ಬಗ್ಗೆ ವಿರೋಧ ನಿಲುವು ಬಿತ್ತಲು ಪ್ರಯತ್ನಿಸಿದರೂ ಸಹ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿ ಮತ್ತೊಮ್ಮೆ ಮೋದಿ ಎನ್ನುವ ಸಂದೇಶವನ್ನು ಈ ಚುನಾವಣೆ ಮೂಲಕ ರವಾನಿಸಿದ್ದಾರೆ. ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಘಢ ಹೀಗೆ ಮೂರು ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಶುದ್ದ ಆಡಳಿತ, ಬಿಜೆಪಿ ಜನಪರ ಚಿಂತನೆ, ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಇದು ಖಂಡಿತವಾಗಿಯೂ ಲೋಕಸಭಾ ಚುನಾವಣೆ ದಿಕ್ಸೂಚಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅರಳುವುದು ಖಚಿತವಾಗಿದೆ, ಈ ಗೆಲುವು ಸಮಸ್ತ ಕಾರ್ಯಕರ್ತರ ಗೆಲುವಾಗಿದೆ ಎಂದು ಅವರು ಹೇಳಿದ್ದಾರೆ.
ಕಿಸಾನ್ ಸಮ್ಮಾನ್, ಉಜ್ವಲ ಯೋಜನೆ, ಜನಧನ್ ಹೀಗೆ ಜನರನ್ನು ನೇರವಾಗಿ ತಲುಪುವ ಅನೇಕ ಯೋಜನೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿದೆ, ಹೀಗಾಗಿ ಅಭಿವೃದ್ಧಿಗೆ ಜನತೆ ಬಿಜೆಪಿಗೆ ಬೆಂಬಲಿಸಿದ್ದಾರೆ ಎಂದು ಉಮೇಶ ಕಾರಜೋಳ ಹೇಳಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

